dr.shashibhooshan on lr ammendment- ಭೂಸುಧಾರಣೆ ಕಾಯಿದೆ ತಿದ್ದುಪಡಿ ಯಾರ ಹಿತಕ್ಕಾಗಿ? ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಹೋರಾಡಲು ಡಾ. ಶಶಿಭೂಷಣ ಹೆಗಡೆ ಕರೆ

  • ಈ ಕಾಯಿದೆ ತಿದ್ದುಪಡಿಯಿಂದ ರೈತರ ಅಸ್ಥಿತ್ವವೇ ಅಲುಗಾಡುತ್ತಿದೆ. ಸ್ಥಾನಿಕ ಸಂಘ ಸಂಸ್ಥೆಗಳು, ಸಹಕಾರಿ ಸಂಸ್ಥೆಗಳ ಸದಸ್ಯರು, ಆತ್ಮಸಾಕ್ಷಿಯಿದ್ದರೆ ಬಿ.ಜೆ.ಪಿ. ಕಾರ್ಯಕರ್ತರು, ಸಾಮಾಜಿಕ ಪ್ರಜ್ಞೆಯ ಜನಸಾಮಾನ್ಯರು ಎಲ್ಲರೂ ಸರ್ಕಾರದ ಈ ಕ್ರಮದ ವಿರುದ್ಧ ಸಂಘಟಿತ ಹೋರಾಟ ಮಾಡಬೇಕು.
  • ಊಳುವವನೇ ಒಡೆಯನಿಂದ ಉಳ್ಳವನೇ ಒಡೆಯನಾಗುವ ಈ ಕಾಯಿದೆ ತಿದ್ದುಪಡಿಯಿಂದ ರೈತರ ತೆರಿಗೆ ರಿಯಾಯತಿ ತಪ್ಪಲಿದೆ.
    *ಶ್ರೀಮಂತರನ್ನೇ ಶ್ರೀಮಂತರನ್ನಾಗಿ ಮಾಡುವ ಕಾರ್ಪೋರೇಟ್ ಹಿತದ ಈ ತಿದ್ದುಪಡಿಯಿಂದ ಸಾಮಾಜಿ ಅಸಮಾನತೆ ಹೆಚ್ಚಿ ನಕ್ಸಲಿಸಂ, ಬಂಡಾಯ, ಸಾಮಾಜಿಕ ಅಶಾಂತಿ ಉಂಟುಮಾಡುವ ಸಾಮಾಜಿಕ ಅವ್ಯವಸ್ಥೆ ತಲೆದೋರಲಿದೆ.
    * ಯಾವ ವ್ಯಕ್ತಿಯ ಆರಾಧನೆಯೂ ಒಳ್ಳೆಯದಲ್ಲ, ರೈತರು, ನಾಡಿನ ಹಿತ ಬಲಿಕೊಟ್ಟು ರಾಜ್ಯಸರ್ಕಾರ ಯಾರ ಹಿತ ಕಾಪಾಡುತ್ತಿದೆ.? ಬಂಡವಾಳಶಾಹಿಗಳು, ಶ್ರೀಮಂತರ ಹಿತ ಕಾಯುವ ರೈತರನ್ನು ಪರದೇಶಿಗಳನ್ನಾಗಿಸುವ ಈ ತಿದ್ದುಪಡಿ ವಿರುದ್ಧ ಸಂಘಟಿತ ಹೋರಾಟವೊಂದೇ ಅನಿವಾರ್ಯ

ಬಲಪಂಥೀಯ ಪಕ್ಷಗಳು ರೈತ ವಿರೋಧಿ ಮತ್ತು ಬಂಡವಾಳಶಾಹಿ ಪರ ಎನ್ನುವುದನ್ನು ಭೂಸುಧಾರಣೆ ಕಾಯಿದೆ ತಿದ್ದುಪಡಿ ಮೂಲಕ ಮತ್ತೊಮ್ಮೆ ಸಾಬೀತು ಮಾಡಿವೆ ಎಂದು ಬಲವಾಗಿ ಆರೋಪಿಸಿರುವ ಜಾತ್ಯಾತೀತ ಜನತಾದಳ ಮುಖಂಡ ಡಾ.ಶಶಿಭೂಷಣ ಹೆಗಡೆ ಈ ಕಾಯಿದೆ ತಿದ್ದುಪಡಿ ಮಾಡುವ ಮೂಲಕ ಬಿ.ಜೆ.ಪಿ. ಸರ್ಕಾರ ಐತಿಹಾಸಿಕ ಪ್ರಮಾದ ಮಾಡುತ್ತಿದೆ ಎಂದು ಆಕ್ಷೇಪಿಸಿದ್ದಾರೆ.

ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ಆರೋಪ ಮಾಡಿದ ಅವರು ಕರ್ನಾಟಕದ ಪಂಚಾಯತ್ ರಾಜ್ ಮಸೂದೆ ಮತ್ತು ಭೂಸುಧಾರಣೆ ಕಾಯಿದೆಯನ್ನು ದೇಶದ ಚಾರಿತ್ರಿಕ ಶಾಸನಗಳು ಎನ್ನುತ್ತಾರೆ. ಇಂಥ ಮಹತ್ವದ ಮಸೂದೆಯ ಕೆಲವು ಪರಿಶ್ಚೇಧಗಳನ್ನು ತಿದ್ದುಪಡಿ ಮಾಡುವ ಮೂಲಕ ರಾಜ್ಯ ಸರ್ಕಾರ ರೈತರ ಪಾಲಿಗೆ ಮರಣಶಾಸನ ಬರೆಯುತ್ತಿದೆ ಎಂದರು.

https://www.youtube.com/channel/UCTvZUkLGbidUHKd8BHTMJbg/videos

ರೈತರ ಹಿತ ಕಾಪಾಡುವ ಶಾಸನವೊಂದನ್ನು ತಿದ್ದುಪಡಿ ಮಾಡುವಾಗ ರೈತರ ಬವಣೆ ಬಗ್ಗೆ ಚಿಂತಿಸದ ಸರ್ಕಾರದ ಆದ್ಯತೆ ಏನು ಎನ್ನುವುದು ಸ್ಫಸ್ಟವಾಗುತ್ತದೆ. ಈ ರೈತವಿರೋಧಿ ತಿದ್ದುಪಡಿ ವಿರುದ್ಧ ಪಕ್ಷ,ಪ್ರಾದೇಶಿಕತೆಗಳ ಬೇಧವಿಲ್ಲದೆ ಎಲ್ಲರೂ ಒಂದಾಗಿ ಹೋರಾಟ ಮಾಡುವ ಕಾಲ ಬಂದಿದೆ ಎಂದರು.

ಅವರ ಮಾತಿನ ಪ್ರಮುಖಾಂಶಗಳು-ಕೃಷಿಯೇತರ ಆದಾಯದ ವ್ಯಕ್ತಿ ಕೃಷಿಭೂಮಿ ಖರೀದಿಸಲು ಅವಕಾಶ ನೀಡುವ ಈ 63ಎ,79ಎ,ಬಿ, ಭೂಸುಧಾರಣೆ ಮಸೂದೆ ತಿದ್ದುಪಡಿ ಸಾಮಾಜಿಕ ಉದ್ಧೇಶದ ವಿರೋಧಿ………..

another news of the day-

ಎಸ್.ಎಸ್.ಎಲ್.ಸಿ. ಪರೀಕ್ಷೆ ಸಿದ್ಧತೆ ಸಂಪೂರ್ಣ, ಸುರಕ್ಷತೆಗಾಗಿ ಸರ್ಕಾರಕ್ಕೆ ಮನವಿ
ರಾಜ್ಯದಲ್ಲಿ ಇದೇ ತಿಂಗಳು ನಡೆಯುತ್ತಿರುವ ಎಸ್.ಎಸ್. ಎಲ್.ಸಿ. ಪರೀಕ್ಷೆಗೆ ಪೂರ್ವತಯಾರಿ ಸಿದ್ಧತೆಗಳು ಸಂಪೂರ್ಣವಾಗಿದ್ದು ವಿದ್ಯಾರ್ಥಿಗಳ ಸುರಕ್ಷತೆ,ಸುವ್ಯವಸ್ಥೆಗಳಿಗೆ ಆದ್ಯತೆ ನೀಡಲಾಗಿದೆ.ಹೊರ ಜಿಲ್ಲೆಗಳಲ್ಲಿ ವ್ಯಾಸಂಗಮಾಡುತಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಅವರವರ ತಾಲೂಕು ಕೇಂದ್ರ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯ, ಅನಿವಾರ್ಯತೆಗಳಿರುವಲ್ಲಿ ಸಾರಿಗೆ, ತುರ್ತು ವೈದ್ಯಕೀಯ ವ್ಯವಸ್ಥೆ ಸೇರಿದಂತೆ ಸಕಲ ವ್ಯವಸ್ಥೆಗಳ ಏರ್ಪಾಡು ಮಾಡಿರುವ ಶಿಕ್ಷಣ ಇಲಾಖೆ ಈ ತಿಂಗಳಲ್ಲಿ ಮುಖಯ ಪರೀಕ್ಷೆ ನಡೆಸಿ, ಮುಂದಿನ ತಿಂಗಳಲ್ಲಿ ಮತ್ತೆ ಪೂರಕ ಪರೀಕ್ಷೆ ನಡೆಸಲು ಉದ್ದೇಶಿಸಿದ್ದು ಅನಿವಾರ್ಯ ಕಾರಣಗಳಿಂದ ಈಗ ಪರೀಕ್ಷೆ ಬರೆಯಲಾರದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪೂರಕ ಪರೀಕ್ಷೆ ಬರೆದರೂ ಅವರನ್ನು 2019-2020 ರ ಪ್ರೆಶ್ ವಿದ್ಯಾರ್ಥಿಗಳೆಂದು ಪರಿಗಣಿಸುವುದಾಗಿ ಸರ್ಕಾರ ತಿಳಿಸಿದೆ. ಈ ಬಗ್ಗೆ ಇಂದು ಸಿದ್ಧಾಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸ್ಥಳಿಯ ತಹಸಿಲ್ಧಾರರು ವಿವರ ನೀಡಿದರು. ………. visit-samajamukhi.net

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *