dr.shashibhooshan on lr ammendment- ಭೂಸುಧಾರಣೆ ಕಾಯಿದೆ ತಿದ್ದುಪಡಿ ಯಾರ ಹಿತಕ್ಕಾಗಿ? ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಹೋರಾಡಲು ಡಾ. ಶಶಿಭೂಷಣ ಹೆಗಡೆ ಕರೆ

  • ಈ ಕಾಯಿದೆ ತಿದ್ದುಪಡಿಯಿಂದ ರೈತರ ಅಸ್ಥಿತ್ವವೇ ಅಲುಗಾಡುತ್ತಿದೆ. ಸ್ಥಾನಿಕ ಸಂಘ ಸಂಸ್ಥೆಗಳು, ಸಹಕಾರಿ ಸಂಸ್ಥೆಗಳ ಸದಸ್ಯರು, ಆತ್ಮಸಾಕ್ಷಿಯಿದ್ದರೆ ಬಿ.ಜೆ.ಪಿ. ಕಾರ್ಯಕರ್ತರು, ಸಾಮಾಜಿಕ ಪ್ರಜ್ಞೆಯ ಜನಸಾಮಾನ್ಯರು ಎಲ್ಲರೂ ಸರ್ಕಾರದ ಈ ಕ್ರಮದ ವಿರುದ್ಧ ಸಂಘಟಿತ ಹೋರಾಟ ಮಾಡಬೇಕು.
  • ಊಳುವವನೇ ಒಡೆಯನಿಂದ ಉಳ್ಳವನೇ ಒಡೆಯನಾಗುವ ಈ ಕಾಯಿದೆ ತಿದ್ದುಪಡಿಯಿಂದ ರೈತರ ತೆರಿಗೆ ರಿಯಾಯತಿ ತಪ್ಪಲಿದೆ.
    *ಶ್ರೀಮಂತರನ್ನೇ ಶ್ರೀಮಂತರನ್ನಾಗಿ ಮಾಡುವ ಕಾರ್ಪೋರೇಟ್ ಹಿತದ ಈ ತಿದ್ದುಪಡಿಯಿಂದ ಸಾಮಾಜಿ ಅಸಮಾನತೆ ಹೆಚ್ಚಿ ನಕ್ಸಲಿಸಂ, ಬಂಡಾಯ, ಸಾಮಾಜಿಕ ಅಶಾಂತಿ ಉಂಟುಮಾಡುವ ಸಾಮಾಜಿಕ ಅವ್ಯವಸ್ಥೆ ತಲೆದೋರಲಿದೆ.
    * ಯಾವ ವ್ಯಕ್ತಿಯ ಆರಾಧನೆಯೂ ಒಳ್ಳೆಯದಲ್ಲ, ರೈತರು, ನಾಡಿನ ಹಿತ ಬಲಿಕೊಟ್ಟು ರಾಜ್ಯಸರ್ಕಾರ ಯಾರ ಹಿತ ಕಾಪಾಡುತ್ತಿದೆ.? ಬಂಡವಾಳಶಾಹಿಗಳು, ಶ್ರೀಮಂತರ ಹಿತ ಕಾಯುವ ರೈತರನ್ನು ಪರದೇಶಿಗಳನ್ನಾಗಿಸುವ ಈ ತಿದ್ದುಪಡಿ ವಿರುದ್ಧ ಸಂಘಟಿತ ಹೋರಾಟವೊಂದೇ ಅನಿವಾರ್ಯ

ಬಲಪಂಥೀಯ ಪಕ್ಷಗಳು ರೈತ ವಿರೋಧಿ ಮತ್ತು ಬಂಡವಾಳಶಾಹಿ ಪರ ಎನ್ನುವುದನ್ನು ಭೂಸುಧಾರಣೆ ಕಾಯಿದೆ ತಿದ್ದುಪಡಿ ಮೂಲಕ ಮತ್ತೊಮ್ಮೆ ಸಾಬೀತು ಮಾಡಿವೆ ಎಂದು ಬಲವಾಗಿ ಆರೋಪಿಸಿರುವ ಜಾತ್ಯಾತೀತ ಜನತಾದಳ ಮುಖಂಡ ಡಾ.ಶಶಿಭೂಷಣ ಹೆಗಡೆ ಈ ಕಾಯಿದೆ ತಿದ್ದುಪಡಿ ಮಾಡುವ ಮೂಲಕ ಬಿ.ಜೆ.ಪಿ. ಸರ್ಕಾರ ಐತಿಹಾಸಿಕ ಪ್ರಮಾದ ಮಾಡುತ್ತಿದೆ ಎಂದು ಆಕ್ಷೇಪಿಸಿದ್ದಾರೆ.

ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ಆರೋಪ ಮಾಡಿದ ಅವರು ಕರ್ನಾಟಕದ ಪಂಚಾಯತ್ ರಾಜ್ ಮಸೂದೆ ಮತ್ತು ಭೂಸುಧಾರಣೆ ಕಾಯಿದೆಯನ್ನು ದೇಶದ ಚಾರಿತ್ರಿಕ ಶಾಸನಗಳು ಎನ್ನುತ್ತಾರೆ. ಇಂಥ ಮಹತ್ವದ ಮಸೂದೆಯ ಕೆಲವು ಪರಿಶ್ಚೇಧಗಳನ್ನು ತಿದ್ದುಪಡಿ ಮಾಡುವ ಮೂಲಕ ರಾಜ್ಯ ಸರ್ಕಾರ ರೈತರ ಪಾಲಿಗೆ ಮರಣಶಾಸನ ಬರೆಯುತ್ತಿದೆ ಎಂದರು.

https://www.youtube.com/channel/UCTvZUkLGbidUHKd8BHTMJbg/videos

ರೈತರ ಹಿತ ಕಾಪಾಡುವ ಶಾಸನವೊಂದನ್ನು ತಿದ್ದುಪಡಿ ಮಾಡುವಾಗ ರೈತರ ಬವಣೆ ಬಗ್ಗೆ ಚಿಂತಿಸದ ಸರ್ಕಾರದ ಆದ್ಯತೆ ಏನು ಎನ್ನುವುದು ಸ್ಫಸ್ಟವಾಗುತ್ತದೆ. ಈ ರೈತವಿರೋಧಿ ತಿದ್ದುಪಡಿ ವಿರುದ್ಧ ಪಕ್ಷ,ಪ್ರಾದೇಶಿಕತೆಗಳ ಬೇಧವಿಲ್ಲದೆ ಎಲ್ಲರೂ ಒಂದಾಗಿ ಹೋರಾಟ ಮಾಡುವ ಕಾಲ ಬಂದಿದೆ ಎಂದರು.

ಅವರ ಮಾತಿನ ಪ್ರಮುಖಾಂಶಗಳು-ಕೃಷಿಯೇತರ ಆದಾಯದ ವ್ಯಕ್ತಿ ಕೃಷಿಭೂಮಿ ಖರೀದಿಸಲು ಅವಕಾಶ ನೀಡುವ ಈ 63ಎ,79ಎ,ಬಿ, ಭೂಸುಧಾರಣೆ ಮಸೂದೆ ತಿದ್ದುಪಡಿ ಸಾಮಾಜಿಕ ಉದ್ಧೇಶದ ವಿರೋಧಿ………..

another news of the day-

ಎಸ್.ಎಸ್.ಎಲ್.ಸಿ. ಪರೀಕ್ಷೆ ಸಿದ್ಧತೆ ಸಂಪೂರ್ಣ, ಸುರಕ್ಷತೆಗಾಗಿ ಸರ್ಕಾರಕ್ಕೆ ಮನವಿ
ರಾಜ್ಯದಲ್ಲಿ ಇದೇ ತಿಂಗಳು ನಡೆಯುತ್ತಿರುವ ಎಸ್.ಎಸ್. ಎಲ್.ಸಿ. ಪರೀಕ್ಷೆಗೆ ಪೂರ್ವತಯಾರಿ ಸಿದ್ಧತೆಗಳು ಸಂಪೂರ್ಣವಾಗಿದ್ದು ವಿದ್ಯಾರ್ಥಿಗಳ ಸುರಕ್ಷತೆ,ಸುವ್ಯವಸ್ಥೆಗಳಿಗೆ ಆದ್ಯತೆ ನೀಡಲಾಗಿದೆ.ಹೊರ ಜಿಲ್ಲೆಗಳಲ್ಲಿ ವ್ಯಾಸಂಗಮಾಡುತಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಅವರವರ ತಾಲೂಕು ಕೇಂದ್ರ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯ, ಅನಿವಾರ್ಯತೆಗಳಿರುವಲ್ಲಿ ಸಾರಿಗೆ, ತುರ್ತು ವೈದ್ಯಕೀಯ ವ್ಯವಸ್ಥೆ ಸೇರಿದಂತೆ ಸಕಲ ವ್ಯವಸ್ಥೆಗಳ ಏರ್ಪಾಡು ಮಾಡಿರುವ ಶಿಕ್ಷಣ ಇಲಾಖೆ ಈ ತಿಂಗಳಲ್ಲಿ ಮುಖಯ ಪರೀಕ್ಷೆ ನಡೆಸಿ, ಮುಂದಿನ ತಿಂಗಳಲ್ಲಿ ಮತ್ತೆ ಪೂರಕ ಪರೀಕ್ಷೆ ನಡೆಸಲು ಉದ್ದೇಶಿಸಿದ್ದು ಅನಿವಾರ್ಯ ಕಾರಣಗಳಿಂದ ಈಗ ಪರೀಕ್ಷೆ ಬರೆಯಲಾರದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪೂರಕ ಪರೀಕ್ಷೆ ಬರೆದರೂ ಅವರನ್ನು 2019-2020 ರ ಪ್ರೆಶ್ ವಿದ್ಯಾರ್ಥಿಗಳೆಂದು ಪರಿಗಣಿಸುವುದಾಗಿ ಸರ್ಕಾರ ತಿಳಿಸಿದೆ. ಈ ಬಗ್ಗೆ ಇಂದು ಸಿದ್ಧಾಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸ್ಥಳಿಯ ತಹಸಿಲ್ಧಾರರು ವಿವರ ನೀಡಿದರು. ………. visit-samajamukhi.net

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *