

ಸಿಗಂದೂರಿಗೆ ನಾಳೆ ಜೂನ್ 17 ರಿಂದಲೇ ಒಂದು ಹೆಚ್ಚುವರಿ ಬಾರ್ಜ್ ಬಿಡುತ್ತಿರುವುದಾಗಿ ಸಾಗರ ಶಾಸಕ ಹೆಚ್.ಹಾಲಪ್ಪ ತಿಳಿಸಿದ್ದಾರೆ. ಕರೋನಾ,ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳುಗಳ ವರೆಗೆ ಸಿಗಂದೂರಿಗೆ ಬಾರ್ಜ್ ವ್ಯವಸ್ಥೆ ಇರಲಿಲ್ಲ, ಈಗಿರುವ ಏಕೈಕ ಬಾರ್ಜ್ ನಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯವಾದ ಹಿನ್ನೆಲೆಯಲ್ಲಿ ಪ್ರವಾಸಿಗರು,ಸ್ಥಳಿಯರು ಮತ್ತೊಂದು ಬಾರ್ಜ್ ವ್ಯವಸ್ಥೆ ಮಾಡುವಂತೆ ಶಾಸಕ ಹಾಲಪ್ಪನವರಿಗೆ ಮನವಿ ಮಾಡಿದ್ದರು.


ಈ ಮನವಿ ಹಿನ್ನೆಲೆಯಲ್ಲಿ ಕಾರವಾರದ ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಅಧಿಕಾರಿ ಕ್ಯಾ.ಸ್ವಾಮಿಯವರೊಂದಿಗೆ ಮಾತನಾಡಿ ನಾಳೆಯಿಂದಲೇ ಹೆಚ್ಚುವರಿ ಬಾರ್ಜ್ ಗೆ ವ್ಯವಸ್ಥೆ ಮಾಡಿದ್ದಾರೆ. ಈ ಬಗ್ಗೆ ಸ್ವತ: ಹಾಲಪ್ಪ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಗಿರೀಶ್,ಸುರೇಂದ್ರ ದಫೇದಾರ್ ಸೇರಿದ ಕೆಲವರು ಹಾಲಪ್ಪನವರ ಪ್ರಯತ್ನದಿಂದ ರಾಜ್ಯದ ಪ್ರವಾಸಿಗರು ಸಿಗಂದೂರು ಭಕ್ತರಿಗೆ ಅನುಕೂಲವಾಗಿದೆ ಎಂದು ಹಾಲಪ್ಪನವರ ಪ್ರಯತ್ನಕ್ಕೆ ಕೃತಜ್ಞತೆ ತಿಳಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
