ಎಲ್.ಎಂ.ನಾಯ್ಕ ಹಸ್ವಂತೆ ಸಾವು, ಮಳೆಗಾಲ,ಕರೋನಾ ನೋವು

ಕರಾವಳಿ, ಮಲೆನಾಡಿನಲ್ಲಿ ಪ್ರಾರಂಭವಾಗಿರುವ ಮಳೆ ಅನೇಕ ತೊಂದರೆಗಳಿಗೆ ಕಾರಣವಾಗಿದೆ. ಶಿರಸಿಯ ಯಲ್ಲಾಪುರ ರಸ್ತೆಯ ಆಶಾಪ್ರಭು ಆಸ್ಫತ್ರೆ ಎದುರು ಪ್ರತಿವರ್ಷದಂತೆ ಈ ವರ್ಷಕೂಡಾ ಮಳೆ ನೀರು ತುಂಬಿ ತೊಂದರೆಯಾಗಿದೆ.

ಶಿರಸಿ ಶಾಸಕರು ಮತ್ತು ಉತ್ತರ ಕನ್ನಡ ಜಿಲ್ಲಾ ಸಂಸದರು ಇದೇ ಮಾರ್ಗದಲ್ಲಿ ಪ್ರತಿದಿನ ಸಂಚರಿಸಿದರೂ ಈ ಸಮಸ್ಯೆಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಯಾಕೆಂದರೆ ಉತ್ತರ ಕನ್ನಡ ಜಿಲ್ಲೆಯ ಜನರು ಜಾತಿ-ಧರ್ಮದ ಕಾರಣಕ್ಕೆ ಮತದಾನ ನೀಡುತ್ತಾರೆಯೆ ವಿನ: ಅಭಿವೃದ್ಧಿಗಲ್ಲ ಎನ್ನುವುದನ್ನು ಈ ಎಂಎಲ್ಲೆ, ಎಂ.ಪಿ.ಗಳು ಅರಿತಿದ್ದಾರೆ ಎಂದು ಆ ಭಾಗದ ಜನರಿಗೆ, ಜನಪ್ರತಿನಿಧಿಗಳಿಗೆ ಸ್ಥಳಿಯರು ವಿರೋಧಿಸಿದ್ದಾರೆ.

ಸಾಯಿನಗರ-

ಸಿದ್ಧಾಪುರದ ಹೊಸ ಬಡಾವಣೆ ಸಾಯಿನಗರದ ರಸ್ತೆಗಳು ಕೆಸರು ತುಂಬಿದ ಹೊಂಡಗಳಾಗಿದ್ದು ಇದರಿಂದ ಸ್ಥಳಿಯರು ಇತರರಿಗಾಗುತ್ತಿರುವ ತೊಂದರೆ ಬಗ್ಗೆ ಸ್ಥಳಿಯ,ಜನಪ್ರತಿನಿಧಿಗಳು, ಶಾಸಕರು, ಸಂಸದರು ಕೇಳುತ್ತಿಲ್ಲ ಎಂದು ಇಲ್ಲಿಯ ನಿವಾಸಿಗಳು ದೂರಿ ಶಾಪಹಾಕುತಿದ್ದಾರೆ.

ಅಕಾಲಿಕ ಸಾವು-

ಸಿದ್ಧಾಪುರದ ಹಸ್ವಂತೆಯ ಉಪನ್ಯಾಸಕ ಎಲ್.ಎಂ. ನಾಯ್ಕ ಅಕಾಲಿಕ ನಿಧನಕ್ಕೆ ಸಾಗರ ಮತ್ತು ಸಿದ್ಧಾಪುರದ ಜನತೆ ಮರುಗಿದ್ದಾರೆ. ಎಲ್.ಎಂ.ಎನ್. ಮೊದಲು ಸಿದ್ಧಾಪುರದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿ ನಂತರ ಸಾಗರ ತಾಳಗುಪ್ಪಾದ ನಳಂದ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತಿದ್ದರು. ಸಿದ್ಧಾಪುರ ಎಂ.ಜಿ.ಸಿ ಕಾಲೇಜಿನಲ್ಲಿ ಕಲಿತು, ಅಲ್ಲಿಯೇ ಉಪನ್ಯಾಸಕರಾಗಿ ಅನೇಕರ ಸ್ನೇಹ-ಸಂಪರ್ಕ, ಸಂಬಂಧ ಹೊಂದಿದ್ದ ಅವರು ಸಾಗರದ ರಾಜಕಾರಣಿ ಭೀಮನೇರಿ ಶಿವಪ್ಪನವರ ಅಳಿಯನಾಗಿದ್ದರು.

ಹುಟ್ಟೂರು ಸಿದ್ಧಾಪುರ, ಮಾವನ ಊರು ಸಾಗರ, ಕೆಲಸದ ಸ್ಥಳ ತಾಳಗುಪ್ಪಗಳಲ್ಲಿ ಜನಪ್ರೀಯರಾಗಿದ್ದ ನಾಯ್ಕರ 51 ನೇ ವರ್ಷದ ಅಕಾಲಿಕ ಸಾವಿಗೆ ಅವರ ಶಿಷ್ಯವೃಂದ,ಸ್ನೇಹಿತ ವಲಯ ಮರುಕ ಪಟ್ಟಿದೆ. ಸಮಾಜಮುಖಿ ಹಿತೈಶಿ ಸ್ನೇಹಿತ ಬಳಗದ ಸದಸ್ಯರಂತಿದ್ದ ಇವರ ಸಾವಿಗೆ ಅವರ ಸಹೋದ್ಯೋಗಿಗಳಾದ ರತ್ನಾಕರ ನಾಯ್ಕ, ಎನ್.ಟಿ.ನಾಯ್ಕ, ಖಾಸಾ ಸ್ನೇಹಿತರಾಗಿದ್ದ ಡಿ.ಎಂ. ನಾಯ್ಕ ಹಸ್ವಂತೆ, ಮಮತಾ ಮತ್ತು ಶ್ಯಾಮಸುಂದರ್ ಜಿ.ಎಲ್..ಜಿಪಂ. ಸದಸ್ಯೆ ಮತ್ತು ಅವರ ಪತಿ ಸುಮಂಗಲಾ ಮತ್ತು ವಸಂತ ನಾಯ್ಕ ಮಳಲವಳ್ಳಿ, ಸ್ವಾಮಿಪಿ.,ವೀರಭದ್ರ ಮತ್ತು ಗೋಪಾಲ ನಾಯ್ಕ, ಡಾ. ನಾಗೇಂದ್ರಪ್ಪ, ಕೃಷ್ಣಮೂರ್ತಿ ಮಂಡಗಳಲೆ, ಜಗದೀಶ್ ನಾಯ್ಕ ಹೊಸೂರು, ಎಸ್.ಕೆ.ಕೋಲಶಿರ್ಸಿ ಸೇರಿದಂತೆ ಅನೇಕರು ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರೋನಾ-

ಉತ್ತರಕನ್ನಡದಲ್ಲಿ ಇಂದು 6 ಜನರಲ್ಲಿ ಕರೋನಾ ದೃಢಪಟ್ಟಿದ್ದು ಯಲ್ಲಾಪುರದ ಮೂವರು, ಹೊನ್ನಾವರ, ದಾಂಡೇಲಿ, ಭಟ್ಕಳಗಳ ತಲಾಒಬ್ಬೊಬ್ಬರು ಸೇರಿದ್ದಾರೆ. ಇವರೆಲ್ಲರೂ ಹೊರರಾಜ್ಯದಿಂದ ಬಂದವರು ಮತ್ತು ಅಂಥವರೊಂದಿಗೆ ನಿಕಟ ಸಂಪರ್ಕ ಹೊಂದಿದವರು ಎನ್ನಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *