ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ರೈತರ ಆದಾಯ ಹೆಚ್ಚಲಿದೆ: ಸಂದರ್ಶನದಲ್ಲಿ ಆರ್.ಅಶೋಕ್

ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು., ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ರೈತ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಇದೇ ವೇಳ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಸಂದರ್ಶನ ನೀಡಿರುವ ಕಂದಾಯ ಸಚಿವ ಆರ್, ಅಶೋಕ್, ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ದವಾಗಿದೆ. ಎಂದಿದ್ದಾರೆ

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು., ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ರೈತ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಇದೇ ವೇಳ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಸಂದರ್ಶನ ನೀಡಿರುವ ಕಂದಾಯ ಸಚಿವ ಆರ್, ಅಶೋಕ್, ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ದವಾಗಿದೆ ಎಂದು ಹೇಳಿದ್ದಾರೆ.

ಪ್ರ: ಭೂ ಸುಧಾರಣಾ ಕಾಯ್ದೆಯಲ್ಲಿ ಬದಲಾವಣೆಗಳನ್ನು ಮಾಡಲು ಸರ್ಕಾರ ಏಕೆ ನಿರ್ಧರಿಸಿದೆ?
-ಕೃಷಿ ಕ್ಷೇತ್ರ ಮತ್ತು ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗಾಗಿ ನಾವು ನಿರ್ಧರಿಸಿದ್ದೇವೆ, ಈ ಮೊದಲು ಕೃಷಿಕರಲ್ಲದವರು ಭೂಮಿ ಖರೀದಿಸಲು ನಿರ್ಬಂಧ ಹೇರಲಾಗಿತ್ತು, ಜನರನ್ನು ಕಿರುಕುಳ ಮಾಡಲು ಕಂದಾಯ ಇಲಾಖೆ ಅಧಿಕಾರಿಗಳು ಮಾತ್ರ ಬಳಕೆ ಮಾಡುತ್ತಿದ್ದರು. ಕಳೆದ 45 ವರ್ಷಗಳಲ್ಲಿ ಈ ಸಂಬಂಧ ಹಲವು ಹಿಂಸಾಚಾರ ಪ್ರಕರಣಗಳು ದಾಖಲಾಗಿವೆ.

ಪ್ರ: ಕೃಷಿ ಮತ್ತು ಉದ್ಯೋಗ ಸೃಷ್ಟಿ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಸೇರಿವೆ. ಉದ್ದೇಶಿತ ಬದಲಾವಣೆಗಳು ಹೇಗೆ ಸಹಾಯ ಮಾಡುತ್ತವೆ?
-ಒಮ್ಮೆ ಕಾಯ್ದೆಗೆ ಬದಲಾವಣೆ ತಂದರೆ ಕೃಷಿ ಸಂಸ್ಕರಣಾ ಕೈಗಾರಿಕೆಗಳು, ಗೋದಾಮುಗಳು,ಶೈಥ್ಯಾಗಾರಗಳು ಗ್ರಾಮೀಣ ಪ್ರದೇಶದಲ್ಲಿ ತೆರೆಯುತ್ತವೆ.ನಮಗೆ ಮಾವಿನ ಹಣ್ಣಿನ ಜ್ಯೂಸ್, ಟೊಮೆಟೊ ಸಂಸ್ಕರಣಾ ಘಟಕಗಳು, ಸಕ್ಕರೆ ಕಾರ್ಖಾನೆ ಮತ್ತು ತೆಂಗಿನಕಾಯಿ ಸಂಸ್ಕರಣಾ ಘಟಕಗಳು ಸ್ಥಾಪನೆಯಾಗುವುದರಿಂದ ಗ್ರಾಮೀಣ ಪ್ರದೇಶದ ಜನತೆಗೆ ಸಹಾಯವಾಗುತ್ತದೆ. ಹೀಗಾಗಿ ಸಾರಿಗೆ ವೆಚ್ಚದ ಪ್ರಮಾಣ ತಗ್ಗುತ್ತದೆ. ಇದರಿಂದ ರೈತರಿಗೆ ಹೊರೆ ಕಡಿಮೆಯಾಗಲಿದೆ, ಈ ಮಾದರಿಯನ್ನು ಹಲವು ದೇಶಗಳು ಅನುಸರಿಸುತ್ತಿವೆ ಇದರಿಂದ ಕೃಷಿ ತ್ಯಾಜ್ಯಗಳು ಕಡಿಮೆಯಾಗುತ್ತದೆ.

ಅಭಿವೃದ್ದಿ ಹೊಂದಿದ ದೇಶಗಳಲ್ಲಿ ಕೃಷಿ ತ್ಯಾಜ್ಯ ಶೇ.3-4 ರಷ್ಟು ಇರುತ್ತದೆ. ನಮ್ಮ ಗ್ರಾಮೀಣ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ , ಗೋದಾಮಗಳು ಇರದ ಕಾರಣ ಶೇ, 30 ರಷ್ಟು ಕೃಷಿ ತ್ಯಾಜ್ಯ ಬರುತ್ತದೆ, ಒಮ್ಮೆ ಇವೆಲ್ಲಾ ಸ್ಥಾಪನೆಯಾದರೆ ರೈತರಿಗೆ ಆದಾಯ ಕೂಡ ಹೆಚ್ಚಾಗಲಿದೆ. ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಳು ಹೆಚ್ಚಿನ ಪ್ರಮಾಣದಲ್ಲಿ ಸೃಷ್ಟಿಯಾಗಲಿವೆ. ಇನ್ನು ಕೃಷಿ ವಿವಿಗಳಿಂದ ಬರುವ ಪದವೀಧರರಿಗೆ ಇದರಿಂದ ಸಹಾಯವಾಗಲಿದೆ.

ಉದ್ದೇಶಿತ ಬದಲಾವಣೆಗಳನ್ನು ದುರುಪಯೋಗವಾಗದಂತೆ ಖಚಿತಪಡಿಸಿಕೊಳ್ಳಲು ಯಾವ ಕಾರ್ಯವಿಧಾನಗಳನ್ನು ಕೈಗೊಳ್ಳುವಿರಿ?
ಪ್ರತಿ ಕುಟುಂಬ 108 ಎಕರೆ ಮಾತ್ರ ಭೂಮಿ ಖರೀದಿಸಲು ಅವಕಾಶವಿರುತ್ತದೆ, ಹೀಗಾಗಿ ಕಾಯ್ದೆಯನ್ನು ಯಾರೂ ಕೂಡ ಯಾವುದೇ ರೀತಿಯಲ್ಲಿ ದುರುಪಯೋಗ ಪಡಿಸಿಕೊಳ್ಳಲು ಸಾಧ್ಯವಿಲ್ಲ.

ಪ್ರ: ವಿಧಾನಸಭೆಯಲ್ಲಿ ಅಂಗೀಕಾರಗೊಳ್ಳುವ ಬದಲು ಸರ್ಕಾರವು ಸುಗ್ರೀವಾಜ್ಞೆಯ ಮಾರ್ಗವನ್ನು ಏಕೆ ಆಲೋಚಿಸುತ್ತಿದೆ?
ಕೊರೋನಾ ಕಾರಣದಿಂದಾಗಿ ಸದ್ಯ ವಿಧಾನಸಭೆ ಅಧಿವೇಶನ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾವು ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತರಲು ನಿರ್ಧರಿಸಿದ್ದೇವೆ. ಮತ್ತೆ ಅಧಿವೇಶನ ಆರಂಭವಾದಾಗ ಸದನದಲ್ಲೂ ಕೂಡ ಚರ್ಚೆ ನಡೆಸುತ್ತೇವೆ.

ಪ್ರ: ಕಾರ್ಪೊರೇಟ್‌ಗಳಿಗೆ ಸಹಾಯ ಮಾಡಲು ಸರ್ಕಾರವು ಈ ಕಾಯ್ದೆಗೆ ತಿದ್ದುಪಡಿ ತಂದಿದೆ ಮತ್ತು ವಿರೋಧ ಪಕ್ಷಗಳು ರಾಜ್ಯವ್ಯಾಪಿ ಆಂದೋಲನಕ್ಕೆ ಯೋಜಿಸುತ್ತಿವೆಯಲ್ಲಾ?
-ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಈ ಕಾಯ್ದೆ ಜಾರಿಗೆ ತಂದ ಕಾರಣದಿಂದಾಗಿ ವಿರೋಧ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತ ಪಡಿಸುತ್ತಿದೆ.ಸದ್ಯದ ಅವಶ್ಯಕತೆಗೆ ತಕ್ಕ ಹಾಗೆ ನಾವು ಬದಲಾವಣೆ ಮಾಡುತ್ತಿದ್ದೇವೆ, ಆ ಸಮಯದಲ್ಲಿ ಯಾವುದು ಅಪ್ರಸ್ತುತವಾಗಿತ್ತೋ ಅದು ಸದ್ಯ ಪ್ರಸ್ತುತವಾಗಿದೆ, ಜನರು ಕಿರುಕುಳಕ್ಕೊಳಗಾಗುವುದಕ್ಕೆ ನಾವು ಅಂತ್ಯ ಹಾಡಬೇಕಿದೆ,
ರಾಜಕೀಯ ಕಾರಣಕ್ಕಾಗಿ ವಿರೋಧ ಪಕ್ಷಗಳು ಇದನ್ನು ವಿರೋಧಿಸಿದರೇ ನಾವು ಏನು ಮಾಡಲಾಗುವುದಿಲ್ಲ, ಅವರಿಗೆ ಕಾಯ್ದೆಯ ಉದ್ದೇಶ ತಿಳಿಸಲು ಪ್ರಯತ್ನಿಸುತ್ತೇವೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ತಿದ್ದುಪಡಿ ಕಾಯ್ದೆ ರೈತರ ಮೇಲೆ ಹೇಗೆ ಪರಿಣಾಮ ಬೀರುತ್ತದೆ?
ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದರಿಂದಾಗಿ ರೈತರು ಈಗ ತಾವೇ ನೇರವಾಗಿ ಎಪಿಎಂಸಿ ಮಾರುಕಟ್ಟೆ ಮತ್ತು ಹೊರೆ ಮಾರಬಹುದಾಗಿದೆ, ಇದರಿಂದ ಸ್ಪರ್ಧೆ ಏರ್ಪಟ್ಟು ಮಧ್ಯವರ್ತಿಗಳ ಹಾವಳಿ ತಪ್ಪುತ್ತದೆ, ರೈತರ ಮತ್ತು ಸಮಸ್ತ ರಾಜ್ಯದ ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *