corona today- ಕರೋನಾ: ಮಾರಕವಾಗಲಿದೆ ಈ ವಾರ!

ಈ ವಾರ ಭಾರತಕ್ಕೆ ಕರೋನಾ ಮಾರಕವಾಗಲಿರುವ ಲಕ್ಷಣಗಳಿವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕೂಡಾ ಒಂದೇ ದಿನ ಹತ್ತಿರತ್ತಿರ ಸಾವಿರ ಸಂಖ್ಯೆಯ ಜನರಲ್ಲಿ ಕರೋನಾ ದೃಢವಾಗಿದೆ.

ಉತ್ತರಕನ್ನಡ ಜಿಲ್ಲೆಯಲ್ಲಿ ರವಿವಾರದ 14 ಪ್ರಕರಣಗಳೊಂದಿಗೆ ಇಂದಿನ 19 ಕರೋನಾ ಸೋಂಕಿತ ಪ್ರಕರಣಗಳು ಸೇರಿ 33 ಪ್ರಕರಣಗಳು ಈ ವಾರದ ದಾಖಲೆಗೆ ಸೇರಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬೆಂಗಳೂರಿನಂತೆ ಪೊಲೀಸರಲ್ಲಿ ಕೋವಿಡ್19 ಪತ್ತೆಯಾಗಿ ಪೊಲೀಸ್ ಠಾಣೆ, ಪೊಲೀಸ್ ಉಪ ವರಿಷ್ಠರ ಕಛೇರಿಗಳನ್ನು ಕಂಟೇನ್ ಮೆಂಟ್ ಪ್ರದೇಶಗಳೆಂದು ಘೋಶಿಸಲಾಗಿದೆ.

ಕಳ್ಳತನದ ಆರೋಪಿಯಿಂದ ಪ್ರಾರಂಭವಾದ ಕರೋನಾ ನ್ಯಾಯಾಧೀಶರು, ಎ.ಪಿ.ಪಿ. ಪೊಲೀಸ್ ಅಧಿಕಾರಿಗಳ ವರೆಗೆ ಅನೇಕರನ್ನು ಕಾರಂಟೈನ್ ಆಗುವಂತೆ ಮಾಡಿದೆ. ರಾಜ್ಯದ ರಾಜಧಾನಿ ಬೆಂಗಳೂರು ಲಾಕ್ ಡೌನ್ ಆಗಿರುವಂತೆ ರಾಜ್ಯದ ಕೆಲವು ಜಿಲ್ಲೆಗಳನ್ನೂ, ತಾಲೂಕು, ಗ್ರಾ.ಪಂ., ವಾರ್ಡ್ಗಳನ್ನು ಲಾಕ್ ಡೌನ್ ಮಾಡುವ ಅನಿವಾರ್ಯತೆಯಿದ್ದು ಕರೋನಾ ವಿಶ್ವವ್ಯಾಪಕವಾಗಿ ಎಲ್ಲರಿಗೂ ಕಂಟಕವಾಗಿ ಪರಿಣಮಿಸಿದೆ.

(related) ಭಾರತಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣ ದಾಖಲು

ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

                                                                                                                                                          

Covid-19 Test

ನವದೆಹಲಿ: ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಆ ಮೂಲಕ ದೇಶದಲ್ಲಿ ಒಟ್ಟಾರೆ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 5,48,318ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,21,723  ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ದೇಶದಲ್ಲಿ ಪ್ರಸ್ತುತ 2,10,120 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 380 ಮಂದಿ ಸೋಂಕಿತರು ಸಾವನ್ಮಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 16,475ಕ್ಕೆ ಏರಿಕೆಯಾಗಿದೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 83 ಸಾವಿರ ಗಡಿದಾಟಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2889 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 83077ಕ್ಕೆ ಏರಿಕೆಯಾಗಿದೆ.

ಇನ್ನು ಕೊರೋನಾ ಸೋಂಕಿತರ ಗರಿಷ್ಠ ಸಂಖ್ಯೆ ಪಟ್ಟಿಯಲ್ಲಿ ಅಗ್ರ ಸ್ಥಾನಿಯಾಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 5493 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,64,626ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 156 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 7,429ಕ್ಕೆ ಏರಿಕೆಯಾಗಿದೆ. 

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಏರಿಕೆ ಕಾಣುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರವೊಂದರಲ್ಲೇ 783 ಪ್ರಕರಣಗಳು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1267 ಪ್ರಕರಣಗಳು ವರದಿಯಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 13190ಕ್ಕೇರಿಕೆಯಾಗಿದ್ದು, ಮೃತರ ಸಂಖ್ಯೆ 211 ತಲುಪಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *