ಕೊರೋನಾ ಪಾಸಿಟಿವ್ ಬಂದರೂ ವೃದ್ಧ ತಾಯಿಯನ್ನು ಒಂಟಿಯಾಗಿ ಬಿಡಲು ಒಪ್ಪದ ಮಕ್ಕಳು!

ಕಾರವಾರ:ಕೊರೋನಾ ಪಾಸಿಟಿವ್ ದೃಢಪಟ್ಟ ಮೂವರು ಪುತ್ರರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ 90 ವರ್ಷದ ವೃದ್ಧ ತಾಯಿಯ ಕರುಣಾಜನಕ ಕಥೆ ಇದು.

Corona Test

ಕಾರವಾರ: ಕೊರೋನಾ ಪಾಸಿಟಿವ್ ದೃಢಪಟ್ಟ ಮೂವರು ಪುತ್ರರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ 90 ವರ್ಷದ ವೃದ್ಧ ತಾಯಿಯ ಕರುಣಾಜನಕ ಕಥೆ ಇದು.

ಕಾರವಾರದಲ್ಲಿ ಮೂವರು ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದ ನಂತರ, ಅಧಿಕಾರಿಗಳು ಆ ಮೂರು ಮಕ್ಕಳನ್ನು ನಿಗದಿತ ಕೊವಿಡ್-19 ಆಸ್ಪತ್ರೆಗೆ ಶಿಫ್ಟ್ ಮಾಡಲು ಮುಂದಾದರು. ಆದರೆ ಈ ಮೂವರು ಮಕ್ಕಳನ್ನು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಗೆ ನಿರಂತರ ಆರೈಕೆಯ ಅಗತ್ಯವಿರುವುದರಿಂದ ನಾವು ತಾಯಿಯನ್ನು ಮನೆಯಲ್ಲಿ ಒಂಟಿಯಾಗಿ ಬಿಟ್ಟು ಆಸ್ಪತ್ರೆಗೆ ಬರಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದರು. 

ಮಕ್ಕಳ ಕಾಳಜಿಯನ್ನು ಗಮನಿಸಿದ ಅಧಿಕಾರಿಗಳು, ಅವರ ಮನವಿ ಮೇರೆಗೆ ಸೋಂಕಿತ ಮಕ್ಕಳು ಮತ್ತು ಅವರ ತಾಯಿಯನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದರೆ ತಾಯಿಗೆ ಕೊರೋನಾ ನೆಗಟಿವ್ ಬಂದಿದ್ದರಿಂದ ಅವರಿಗೆ ಪ್ರತ್ಯೇಕ ವಾರ್ಡ್ ನೀಡಿದ್ದಾರೆ.

ಏಳು ದಿನಗಳ ನಂತರ ಈ ಮೂವರು ಮಕ್ಕಳು ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿ, ತಾಯಿಯೊಂದಿಗೆ ಮನೆಗೆ ಬಂದಿದ್ದಾರೆ. 

96 ವರ್ಷದ ಮಹಿಳೆ ಕಾರವಾರ ಬಳಿಯ ಸದಾಶಿವಘಡ ದ‌ಲ್ಲಿ ವಾಸಿಸುತ್ತಿದ್ದರೆ, ಪುತ್ರರು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಇತ್ತೀಚೆಗೆ ತಮ್ಮ ಊರಿಗೆ ಮರಳಿದ ನಂತರ, ಮೂವರಿಗೂ ಕೊರೋನಾ ಪಾಸಿಟಿವ್ ಬಂದಿತ್ತು. ಆದರೆ ಅವರು ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದರು. ಅಧಿಕಾರಿಗಳು ವಿಚಾರಿಸಿದಾಗ, ಪುತ್ರರು ತಮ್ಮ ವೃದ್ಧ ತಾಯಿಯನ್ನು ಮನೆಯಲ್ಲಿಯೇ ಬಿಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಅವಳನ್ನು ನೋಡಿಕೊಳ್ಳಲು ನಮ್ಮ ಬಿಟ್ಟು ಬೇರೆ ಯಾರೂ ಇಲ್ಲ ಎಂದಿದ್ದಾರೆ.

ಈ ಕುರಿತು ನಾವು ಕಾರವಾರ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದೆವು. ಅವರು ಸಹ ವಯಸ್ಸಾದ ತಾಯಿಗೆ ಸೋಂಕು ತಗುಲಿದರೆ ಹೆಚ್ಚು ಅಪಾಯ. ಹೀಗಾಗಿ ಅವರನ್ನು ಮನೆಯಲ್ಲಿ ಬಿಟ್ಟು ನೀವು ಆಸ್ಪತ್ರೆದೆ ದಾಖಲಾಗಿ ಎಂದು ಮನವರಿಕೆ ಮಾಡಲು ಯತ್ನಿಸಿದರು. ಆದರೆ ಅವರು ಒಪ್ಪಿಕೊಳ್ಳದಿದ್ದಾಗ, ಅವರ ಒಪ್ಪಿಗೆ ಮೇರೆಗೆ ತಾಯಿನ್ನು ಮಕ್ಕಳು ಇರುವ ಸಮೀಪದ ವಾರ್ಡ್ ನಲ್ಲಿರಿಸುವ ವ್ಯವಸ್ಥೆ ಮಾಡಲಾಯಿತು ಮತ್ತು ಯಾವುದೇ ಸೋಂಕಿತರು ವೃದ್ಧೆಯ ಸಂಪರ್ಕಕ್ಕೆ ಬರದಂತೆ ನೋಡಿಕೊಳ್ಳಲಾಯಿತು ಎಂದು ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಗಜಾನನ್ ನಾಯಕ್ ಅವರು ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *