ಶಿರಸಿಯನ್ನು ನಡುಗಿಸಿದ ಆ ಎರಡು ಪ್ರಕರಣಗಳ್ಯಾವು ಗೊತ್ತಾ?

ಕರೋನಾ ನಾಗಾಲೋಟ ಮುಂದುವರಿದಿದೆ. ಉತ್ತರಕನ್ನಡ,ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಕರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಈ ವಾಸ್ತವದ ಜೊತೆ ಶಿರಸಿಯನ್ನು ಆತಂಕಕ್ಕೀಡುಮಾಡಿದ್ದು ಆ ಎರಡು ಪ್ರಕರಣಗಳು.

ಮೊದಲ ಪ್ರಕರಣ ಶಿರಸಿಯ ಸುಗಾವಿ ಪ್ರಾ.ಆ. ಕೇಂದ್ರದ ಸಿಬ್ಬಂದಿಯೊಬ್ಬರಲ್ಲಿ ಕರೋನಾ ಪತ್ತೆಯಾಗಿರುವುದು ಮತ್ತು ವಿಶಾಲನಗರದ ಬೆಂಗಳೂರಿನಿಂದ ಮರಳಿದ ವ್ಯಕ್ತಿಯಲ್ಲಿ ಕೋವಿಡ್ ದೃಢಪಟ್ಟಿರುವುದು.
ವಿಶಾಲನಗರದ ವ್ಯಕ್ತಿ ಚಿಕಿತ್ಸೆಗಾಗಿ ತೆರಳಿದ್ದ ಎರಡು ಖಾಸಗಿ ಆಸ್ಫತ್ರೆಗಳು ಮತ್ತು ವಿಶಾಲನಗರದ ನಾಲ್ಕು ಮನೆಗಳನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಶಿಸಲಾಗಿದೆ. ಶಿರಸಿಯ ಗ್ರಾಮೀಣ ಪ್ರದೇಶ ಸುಗಾವಿ ಸರ್ಕಾರಿ ಆಸ್ಫತ್ರೆಯ ಸಿಬ್ಬಂದಿಯಲ್ಲಿ ಕರೋನಾ ದೃಢಪಟ್ಟಿರುವುದರಿಂದ ಆ ಪ್ರಾ.ಆ.ಕೇಂದ್ರವನ್ನು ಶೀಲ್ ಡೌನ್ ಮಾಡಲಾಗಿದೆ.

(related) ಕರೋನಾದಿಂದ ತತ್ತರಿಸಲಿದೆ ಮಲೆನಾಡು?
ಬೆಂಗಳೂರಿನಿಂದ ಬಂದವರ ಬಗ್ಗೆಯೂ ಜಾಗೃತೆ ವಹಿಸಿ
ಕರೋನಾ ವಾರದಿಂದ ವಾರಕ್ಕೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ಈ ವರೆಗೆ 6.5 ಲಕ್ಷ ಕರೋನಾ ಪೀಡಿತರನ್ನು ಹೊಂದಿರುವ ಭಾರತಕ್ಕೆ ಕರೋನಾ ಸೋಂಕಿತರ ಸಂಖ್ಯೆಯ ಏರಿಕೆ ಕ್ರಮ ಭಾರವಾಗುವ ಅಪಾಯ ಸಮೀಪಿಸುವಂತಿದೆ. ಜುಲೈ 4 ರ ಶನಿವಾರವಾದ ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ 34 ಜನರಲ್ಲಿ, ಪಕ್ಕದ ಶಿವಮೊಗ್ಗ ಜಿಲ್ಲೆಯಲ್ಲಿ 25 ಜನರಲ್ಲಿ ಕರೋನಾ ಸೋಂಕು ದೃಢವಾಗುವ ಸಾಧ್ಯತೆ ನಿಚ್ಚಳವಾಗಿದೆ. ಈ ಮಾಹಿತಿಯ ಆಧಾರದಲ್ಲಿ ಮಳೆಯಿಂದ ತತ್ತರಿಸಲಿರುವ ಮಲೆನಾಡು, ಕರಾವಳಿಯನ್ನು ಕರೋನಾ ಕಾಡುವುದು ನಿಶ್ಚಿತವಾಗಿದೆ.
ಬೆಂಗಳೂರಿಗರಿಂದ ಅಪಾಯ-
ಇಲ್ಲಿಯವರೆಗೆ ಹೊರರಾಜ್ಯ ವಿಶೇಶವಾಗಿ ಮಹಾರಾಷ್ಟ್ರದವರಿಂದ ಬಳಲಿದ ನಮಗೆ ಈಗ ಬೆಂಗಳೂರು ಅಪಾಯದ ಮೂಲವಾಗಿದೆ. ಕಳೆದ ತಿಂಗಳು ಮಹಾರಾಷ್ಟ್ರದಿಂದ ಮರಳಿದವರಲ್ಲಿ ಸರಣಿಯಲ್ಲಿ ಪತ್ತೆಯಾದ ಕರೋನಾ ಈ ತಿಂಗಳು ಬೆಂಗಳೂರಿನಿಂದ ಮರಳಿದವರ ಬೆನ್ನುಬಿದ್ದಿದೆ. ಮಹಾರಾಷ್ಟ್ರ, ಬೆಂಗಳೂರು ಅಥವಾ ಪರ ಊರು, ಹೊರ ಜಿಲ್ಲೆ, ಹೊರರಾಜ್ಯಗಳಿಂದ ಬರುವವರು ಸ್ವಯಂ ಜಾಗೃತಿ, ನಿಯಂತ್ರಣ ಮಾಡಿಕೊಳ್ಳುವುದು, ಸ್ಥಳಿಯರೂ ಹೊರ ಪ್ರದೇಶಗಳಿಂದ ಬರುವವರನ್ನು ನಿಗದಿತ ಅಂತರದಲ್ಲಿಡುವುದು, ಸೂಕ್ತ ಮುನ್ನೆಚ್ಚರಿಕೆ,ತಪಾಸಣೆ,ಶೀಘ್ರ ಚಿಕಿತ್ಸೆ ಈ ಉಪಕ್ರಮಗಳ ಮೂಲಕವೂ ಕೋವಿಡ್ ನಿಂದ ರಕ್ಷಿಸಿಕೊಳ್ಳಬಹುದಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *