
ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣ ಕೆಲಸ ಮಾಡಿದ ಕಾರ್ಮಿಕರಿಗೆ ಹಾಗೂ ಜೋಳ ಬೆಳೆಗಾರರಿಗೆ ಮುಖ್ಯ ಮಂತ್ರಿ ಬಿಡುಗಡೆ ಮಾಡಿರುವ ಅನುದಾನ ಪ್ಯಾಕೇಜ್ಗಳನ್ನು ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವಂತೆ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ ತಿಳಿಸಿದ್ದ


ಹಾಸನ: ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣ ಕೆಲಸ ಮಾಡಿದ ಕಾರ್ಮಿಕರಿಗೆ ಹಾಗೂ ಜೋಳ ಬೆಳೆಗಾರರಿಗೆ ಮುಖ್ಯ ಮಂತ್ರಿ ಬಿಡುಗಡೆ ಮಾಡಿರುವ ಅನುದಾನ ಪ್ಯಾಕೇಜ್ಗಳನ್ನು ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವಂತೆ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ತಡೆಗಟ್ಟಲು ಯಾವುದೇ ಕೊರತೆಯಾಗದಂತೆ ಎಲ್ಲಾ ಇ.ಎಸ್.ಐ. ಆಸ್ಪತ್ರೆ ಹಾಗೂ ವಿವಿಧ ಆಸ್ಪತ್ರೆಗಳಿಗೆ ಔಷಧಗಳನ್ನು ಪೂರೈಸಲಾಗಿದೆ ಎಂದರು.
ಮುಖ್ಯಮಂತ್ರಿಯವರು ಕಟ್ಟಡ ಕಾರ್ಮಿಕರಿಗೆ ತಲಾ 5,000ರೂ. ನಂತೆ 14 ಲಕ್ಷ ಕಟ್ಟಡ ಕಾರ್ಮಿಕರಿಗೆ 800 ಕೋಟಿ ರೂ.ಗಳ ಅನುದಾನ ವಿತರಿಸಲಾಗಿದೆ.2.40 ಲಕ್ಷ ಕ್ಷೌರಿಕರು ಹಾಗೂ 70 ಸಾವಿರ ಅಗಸರು ಒಟ್ಟಾರೆ 3 ಲಕ್ಷ ಫಲಾನುಭವಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ್ದು,ಹಲವರ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹಾಗೂ ಐ.ಎಫ್.ಎಸ್.ಸಿ. ಕೋಡ್ ದೊರೆಯದಿರುವ ಕಾರಣ ಡಿ.ಬಿ.ಟಿ. ಮೂಲಕ ವರ್ಗಾವಣೆ ಮಾಡಲಾಗಿಲ್ಲ ಎಂದರು.
ಈ ಎರಡು ಸಮುದಾಯಗಳಿಗೆ ಹಣ ದೊರೆಯುವುದು ಸ್ವಲ್ಪ ವಿಳಂಬವಾಗಿದ್ದು, ಒಂದು ವಾರದೊಳಗೆ ಈ ಎಲ್ಲಾ ಫಲಾನುಭವಿಗಳಿಗೆ ಹಣ ದೊರೆಯುವಂತೆ ಮಾಡಲಾಗುತ್ತದೆ ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವರು ತಿಳಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
