corona scam of karnataka govt- ರಾಜ್ಯ ಸರ್ಕಾರದ ದೊಡ್ಡ ಹಗರಣದ 2 ನೇ ಕಂತಿನ ವರದಿಯಿದು, ಶಾಸಕ ನಿರಾಣಿ ಹೇಳಿಕೆ ಮತ್ತು ರಾಜ್ಯದ 2 ಸಾವಿರ ಕೋಟಿ ಹಗರಣ!

ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ 2 ಸಾವಿರ ಕೋಟಿ ಕರೋನಾ ಹಗರಣದ ಬಗ್ಗೆ ಆರೋಪಿಸಿದ್ದಾರೆ. ಇದೇ ವಿಚಾರದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮೀತಿ ತನಿಖೆಗೆ ತಡೆಯಾಜ್ಞೆ ನೀಡಿದ ಪ್ರಾಮಾಣಿಕತೆ ಬಗ್ಗೆ ಕರ್ನಾಟಕ ರಾಷ್ಟ್ರಸಮೀತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಸರ್ಕಾರಕ್ಕೆ ಸವಾಲು ಹಾಕಿದ್ದರು.
ಈ ನಡುವೆ ಶಿರಸಿಯ ಟಿ.ಎಸ್.ಎಸ್. ನಲ್ಲಿ ಖರೀದಿಮಾಡಿರುವ ಕಿಟ್ ಗಳಿಗೆ ಕಾರ್ಮಿಕ ಇಲಾಖೆ ನೂರುಪಟ್ಟು (ಮುದ್ರಿತ 1500 ವಾಸ್ತವ ಬೆಲೆಗಿಂತ)ಹೆಚ್ಚು ಬೆಲೆ ದಾಖಲಿಸಿದೆ ಎಂದು ಮಾಹಿತಿ ಕಾರ್ಯಕರ್ತರೊಬ್ಬರು ಆರೋಪಿಸಿದ್ದರು. ಈ ವಿಚಾರದಲ್ಲಿ ಆರೋಗ್ಯ ಇಲಾಖೆ ಖರೀದಿಸಿರುವ ಕರೋನಾ ಉಪಕರಣಗಳ ಮೇಲೆ ನೂರಾರು ಪಟ್ಟು ಹೆಚ್ಚುವರಿ ಬಿಲ್ ಮಾಡಿರುವ ಬಗ್ಗೆ ದಾಖಲೆ ಸಿಕ್ಕಿದೆ. ವಿಚಿತ್ರವೆಂದರೆ……
ಶಿರಸಿ ಟಿ.ಎಸ್.ಎಸ್. ನಿಂದ ಎಷ್ಟು ಆಹಾರದ ಕಿಟ್ ಗಳನ್ನು ಕಾರ್ಮಿಕ ಇಲಾಖೆ ಖರೀದಿಸಿದೆ, ಅದಕ್ಕೆ ಸರ್ಕಾರದಿಂದ ಪಾವತಿಸಿರುವ ಕಿಟ್ ಗಳ ಮೊತ್ತವೆಷ್ಟು? ಎಂದರೆ ಕಾರ್ಮಿಕ ಇಲಾಖೆ ‘ಮಾಹಿತಿಇಲ್ಲ-ದಾಖಲೆ ಇಲ್ಲ ಎಂದು ಉತ್ತರ ನೀಡಿದೆ.

ರಾಜ್ಯ ಸರ್ಕಾರ ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆಯಿಂದ ಖರೀದಿಸಿದ ವಸ್ತುಗಳ ವಾಸ್ತವದ ಬೆಲೆ ಎರಡು ನೂರರಿಂದ ಮೂರುನೂರು ಕೋಟಿ ರೂಪಾಯಿ ಆದರೆ ಸರ್ಕಾರದ ದಾಖಲೆಯಲ್ಲಿ ಈ ಖರೀದಿ ಮೊತ್ತ 2-3 ಸಾವಿರ ಕೋಟಿ!
ಅಲ್ಲಿಗೆ ರಾಜ್ಯ ಸರ್ಕಾರದ ಹಗಲು ದರೋಡೆ ಹಗರಣ ನಡೆದಿರುವುದಂತೂ ಸತ್ಯ. ಅದರಲ್ಲಿ ಹಳೆಯ ಗಣಿ ಸ್ನೇಹಿತರಾದ ಬಳ್ಳಾರಿ,ಕಾರವಾರ (ಉ.ಕ.)ದ ಹಳೆ ದೋಸ್ತಿಗಳ ಕೈವಾಡ ಪಕ್ಕಾ ಎನ್ನುವುದು ಸಾಬೀತಾಗಿದೆ.
ಈ ಹಗರಣದಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತ ಅವರ ರಾತ್ರಿ ದೋಸ್ತಿಯ ಕಾಂಗ್ರೆಸ್ ಸಂಸ್ಥೆ ಟಿ.ಎಸ್.ಎಸ್. ಪಾತ್ರ ಪಕ್ಕಾ ಆಗಿದೆ. ಈ ಹಗರಣದ ಸಂಪೂರ್ಣ ವಿವರ ಮುರಗೇಶ್ ನಿರಾಣಿಯವರ ಬಳಿ ಇರುವ ಬಗ್ಗೆ ಚರ್ಚೆ ನಡೆದಿದೆ. ಆದರೆ ಈ ಹಗರಣದ ಮಾಹಿತಿ ನನ್ನ ಬಳಿ ಇದೆ ಎನ್ನುವುದು ನಿರಾಧಾರ ಎಂದು ನಿರಾಣಿ ಹೇಳಿದ್ದಾರೆ.

ಇಷ್ಟೆಲ್ಲಾ ಹಸಿಬಿಸಿ ಚರ್ಚೆಗಳ ನಡುವೆ ಶಾಸಕ ಮುರಗೇಶ್ ನಿರಾಣಿ ಕಾರವಾರದ ಶಾಸಕಿ ರೂಪಾಲಿ ನಾಯ್ಕರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಏನು ಚರ್ಚಿಸಿದರು!? ಎನ್ನುವುದು ಅನುಮಾನಸ್ಫದ ಸಂಗತಿಯಾಗಿದೆ.
ಒಟ್ಟಾರೆ ಕರೋನಾ ಹೆಸರಲ್ಲಿ ಕಾರವಾರ, ಯಲ್ಲಾಪುರ ಶಿರಸಿಗಳಿಂದ ಪ್ರಾರಂಭವಾದ ಲಿಂಕ್ ಒಂದು ಬೆಂಗಳೂರಿನವರೆಗೆ ಸುತ್ತುಹೊಡೆಯುತ್ತಿದೆ. ಸಿದ್ಧರಾಮಯ್ಯ ಜೈಲಿಗೆ ಕಳಿಸಿದ ಗಣಿಧಣಿಗಳ ಆಪ್ತರು ಮುಂದೆ ಜೈಲುಪಾಲಾಗುವರೆ ಎನ್ನುವುದು ಈಗ ಯಕ್ಷ ಪ್ರಶ್ನೆಯಾಗಿದೆ. ಬಿ.ಜೆ.ಪಿ.ಯ ಮಾಸ್ಟರ್ ಮೈಂಡ್ ಇರುವ ಉತ್ತರಕನ್ನಡದಲ್ಲಿ ಕಾಂಗ್ರೆಸ್ ಸದಸ್ಯಬಾಹುಳ್ಯದ ಸಂಸ್ಥೆಯೊಂದನ್ನೂ
ಬಳಸಿಕೊಂಡಿರುವುದು ದೇಶಪ್ರೇಮಿಗಳ ನಿರಂತರ ನಾಟಕದ ಪ್ರಮುಖ ಅಂಕ ಎನ್ನಲಾಗುತ್ತಿದೆ.
ಈ ಬಗೆಗಿನಒಂದು ಮಾಹಿತಿಗಾಗಿ ಈ ಲಿಂಕ್ ನೋಡಿ-https://www.youtube.com/watch?v=O6U7VI88LiQ @#samajamukhi ಸಮಾಜಮುಖಿ ಕನ್ನೇಶ್ youtube channel#

(one more news-) ಕುಮಟಾದಲ್ಲಿ ಅರ್ಧದಿನ ಲಾಕ್ಡೌನ್ ಗೆ ಸರ್ವಪಕ್ಷ ಮುಖಂಡರ ತೀರ್ಮಾನ
ಉತ್ತರ ಕಕನ್ನಡ ಜಿಲ್ಲೆಯಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಜಿಲ್ಲೆಯಲ್ಲಿ ದೃಢವಾಗುತ್ತಿರುವ 27 ಪ್ರಕರಣಗಳಲ್ಲಿ ಯಥಾ ಪ್ರಕಾರ ಭಟ್ಕಳಕ್ಕೆ ಸಿಂಹಪಾಲು ಉಳಿದಂತೆ ಕುಮಟಾ, ಶಿರಸಿ, ಹಳಿಯಾಳ ಸೇರಿದ ಪ್ರಕರಣಗಳಿವೆ. ಇದೇವಾರದಲ್ಲಿ ಒಂದು ಕಾಲು ಶತಕ ಕರೋನಾ ಸೋಂಕಿತರ ಸಂಖ್ಯೆ ದಾಖಲಿಸಿರುವ ಉತ್ತರಕನ್ನಡ ಜಿಲ್ಲೆ ಈ ವರೆಗೆ ಮೂರು ಸಾವುಗಳಿಗೂ ಸಾಕ್ಷಿಯಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *