ಮುಖ್ಯಮಂತ್ರಿಗಳಿಗೆ ಮನವಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನದ ಸನ್ಮಾನ

ಈ ವಾರ ಉತ್ತರ ಕನ್ನಡ-01-

ನಿನ್ನೆ ಕೋಲಾರ ಬಂಗಾರಪೇಟೆಯಲ್ಲಿ ನಡೆದ ತಹಸಿಲ್ಧಾರರ ಹತ್ಯೆಗೆ ರಾಜ್ಯದಾದ್ಯಂತ ತೀವೃ ವಿರೋಧ ವ್ಯಕ್ತವಾಗಿದೆ. ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಮನವಿ ನೀಡಿದ ರಾಜ್ಯ ನೌಕರರ ಸಂಘ ಮತ್ತು ಕಂದಾಯ ಇಲಾಖೆ ನೌಕರರು ಈ ಪ್ರಕರಣದ ಸೂಕ್ತ ತನಿಖೆ ಮಾಡಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲು ಮತ್ತು ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆಗೆ ಆಗ್ರಹಿಸಿ ತಹಸಿಲ್ಧಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸಿದ್ಧಾಪುರ ಸೋಮುವಾರದಿಂದ ಮಧ್ಯಾಹ್ನ 2 ಗಂಟೆಗೆ ಕ್ಲೋಜ್-
ಉತ್ತರ ಕನ್ನಡ ದಲ್ಲಿ ಬಹುತೇಕ ತಾಲೂಕುಗಳಲ್ಲಿ ಅರ್ಧದಿನದ ಲಾಕ್ ಡೌನ್ ನಡೆಯುತ್ತಿದೆ. ಇದೇ ರೀತಿ ಸಿದ್ಧಾಪುರದಲ್ಲಿ ಕೂಡಾ ಜುಲೈ13 ರ ಸೋಮವಾರದಿಂದ ಮಧ್ಯಾಹ್ನ 2 ರ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುವ ಬಗ್ಗೆ ರವಿವಾರದ ಒಳಗೆ ನಿರ್ಧರಿಸುವುದಾಗಿ ಪ.ಪಂ. ಸದಸ್ಯ ಕೆ.ಜಿ.ನಾಯ್ಕ ಹಣಜಿಬೈಲ್ ತಿಳಿಸಿದ್ದಾರೆ. ಸಮಾಜಮುಖಿ ಗೆ ಪ್ರತಿಕ್ರೀಯೆ ನೀಡಿದ ಻ಅವರು ಹಣ,ವ್ಯಾಪಾರಕ್ಕಿಂತ ಬದುಕು ದೊಡ್ಡದು, ಕರೋನಾ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ಮುಂದಿನ ವಾರ ಮಧ್ಯಾಹ್ನದ ನಂತರ ಸ್ವಯಂಪ್ರೇರಿತ ಲಾಕ್ಡೌನ್ ಮಾಡುತ್ತೇವೆ. ಈ ಬಗ್ಗೆ ಎರಡು ದಿವಸಗಳಲ್ಲಿ ಸಾರ್ವಜನಿಕವಾಗಿ ಪ್ರಕಟಣೆ ಮಾಡುತ್ತೇವೆ ಎಂದರು.


ಮರತೆಗೆಸಿ- ಸಿದ್ಧಾಪುರ ನಗರದಲ್ಲಿ ಬೀಳಬಹುದಾದ ಹಳೆಯ ಮರಗಳನ್ನು ಕಡಿಸಲು ಜೆ.ಡಿ.ಎಸ್. ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್ ಇಬ್ರಾಹಿಂ ಶೇಖ್ ಆಗ್ರಹಿಸಿದ್ದಾರೆ. ಈ ಬಗ್ಗೆ ಲಿಖಿತ ಮನವಿಯೊಂದನ್ನು ಸ್ಥಳಿಯ ವಲಯ ಅರಣ್ಯಾಧಿಕಾರಿಗಳಿಗೆ ನೀಡಿರುವ ಅವರು ಮಳೆಗಾಲದಲ್ಲಿ ಬೀಳಬಹುದಾದ ಈ ಮರಗಳನ್ನು ತೆರವು ಮಾಡಿ ಸಂಭಾವ್ಯ ಅನಾಹುತ ತಪ್ಪಿಸುವಂತೆ ಕೋರಿದ್ದಾರೆ.
ಆಶಾ ಕಾಳಜಿ- ಕೋವಿಡ್ ಕಾರ್ಯಕರ್ತರಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ವೇತನ, ಗೌರವ ಧನ ನೀಡಿ ಅವರ ನಿಸ್ವಾರ್ಥ ಸೇವೆ ಗೌರವಿಸಬೇಕೆಂದು ಇಲಿಯಾಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಆಶಾಕಾರ್ಯಕರ್ತೆಯರ ಗೌರವ ಧನ, ಸುರಕ್ಷತಾ ವಸ್ತುಗಳನ್ನು ನೀಡಿ ಅವರ ಶ್ರಮಕ್ಕೆ ಗೌರವಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆಶಾ ಗೌರವ-

ಕರೋನಾ ಮತ್ತು ಮಂಗನ ಕಾಯಿಲೆ ತಡೆಗೆ ಶ್ರಮಿಸಿದ ವಾಜಗೋಡು ಭಾಗದ ಆಶಾ ಕಾರ್ಯಕರ್ತರನ್ನು ವಾಜಗೋಡು ಸೇವಾ ಸಹಕಾರಿ ಸಂಘ ಗೌರವಿಸಿದೆ. ಅವರ ಕೆಲಸವನ್ನು ಅಭಿನಂದಿಸಿದ ಸಂಘ ಆಶಾ ಕಾರ್ಯಕರ್ತೆಯರನ್ನು ಗೌರವಿಸಿ ಗೌರವ ಧನ ನೀಡುವ ಮೂಲಕ ಅವರ ಸೇವೆಯನ್ನು ಪ್ರಶಂಸಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *