
ಕರೋನಾ ವಿಚಾರದಲ್ಲಿ ಉತ್ತರ ಕನ್ನಡಕ್ಕೆ ಈ ವಾರ ಕರಾಳವಾರವಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನಾ ವಾರದ ಕೊನೆಯ ದಿವಸವಾದ ಇಂದು ಶಿರಸಿಯ ಮಾರಿಕಾಂಬಾ ದೇವಾಲಯದ ಸಿಬ್ಬಂದಿಗಳು ಹಾಗೂ ಕೆ.ಡಿ.ಸಿ.ಸಿ. ಬ್ಯಾಂಕ್ ಸಿಬ್ಬಂದಿಗಳು ಸೇರಿ ಒಟ್ಟೂ 25 ಜನರಲ್ಲಿ ದೃಢವಾಗುವ ಬಗ್ಗೆ ಮಾಹಿತಿಗಳಿವೆ. ನಿನ್ನೆ ಶಿರಸಿಯಲ್ಲಿ ಮಾರಿಕಾಂಬಾ ದೇವಾಲಯದ 5 ಜನ ಸಿಬ್ಬಂದಿಗಳಲ್ಲಿ ಕರೋನಾ ಸೋಂಕು ದೃಢವಾಗುವ ಸಾಧ್ಯತೆಗಳ ಬಗ್ಗೆ ವದಂತಿಗಳಿದ್ದವು. ಈ ವದಂತಿಯನ್ನು ಮಾರಿಕಾಂಬಾ ದೇವಾಲಯದ ಆಡಳಿತ ಮಂಡಳಿ ನಿರಾಕರಿಸಿತ್ತು. ಆದರೆ ಇಂದಿನ ವರ್ತಮಾನದ ಪ್ರಕಾರ ಇಲ್ಲಿಯ ಮಾರಿಕಾಂಬಾ ದೇವಾಲಯ ಮತ್ತು ಕೆ.ಡಿ.ಸಿ.ಸಿ. ಬ್ಯಾಂಕ್ ಸಿಬ್ಬಂದಿಗಳು ಸೇರಿ ಶಿರಸಿಯಲ್ಲೇ ಇಂದು 25 ಜನರಲ್ಲಿ ಕರೋನಾ ದೃಢಪಡುವ ಸಾಧ್ಯತೆಯನ್ನು ನಿರೀಕ್ಷಿಸಿವೆ. ಶುಕ್ರವಾರ ಮಾರಿಕಾಂಬಾ ದೇವಾಲಯ ಅಲ್ಲಗಳೆದ ಕರೋನಾ ವದಂತಿ ವಿಚಾರವನ್ನು ಈ ಲಿಂಕ್ ನಲ್ಲಿ ನೋಡಬಹುದಾಗಿದೆ.https://studio.youtube.com/video/L3nMzPgQ8FE/edit/basic

visit-samajamukhi.net, samajamukhi ಸಮಾಜಮುಖಿಕನ್ನೇಶ್ youtube channel
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
