ಶ್ರೀರಾಮ ಭಾರತೀಯನಲ್ಲ, ಆತ ನೇಪಾಳಿ, ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ: ಪ್ರಧಾನಿ ಕೆಪಿ ಶರ್ಮಾ ಒಲಿ

ಹಿಂದೂಗಳ ಆರಾಧ್ಯ ದೈವ ಶ್ರೀರಾಮ ಭಾರತೀಯನಲ್ಲ, ಆತ ನೇಪಾಳಿ. ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಪ್ರಧಾನಿ ಕೆಪಿ ಶರ್ಮಾ ಒಲಿ  ಹೇಳಿದ್ದಾರೆ.

Nepal PM KP Sharma Oli

ಕಠ್ಮಂಡು: ಹಿಂದೂಗಳ ಆರಾಧ್ಯ ದೈವ ಶ್ರೀರಾಮ ಭಾರತೀಯನಲ್ಲ, ಆತ ನೇಪಾಳಿ. ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಪ್ರಧಾನಿ ಕೆಪಿ ಶರ್ಮಾ ಒಲಿ  ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ನಡೆದ ಸಾಂಸ್ಕ್ರೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು, ಭಾರತದ ಸಾಂಸ್ಕೃತಿಕ ದಬ್ಬಾಳಿಕೆ ಮತ್ತು ಅತಿಕ್ರಮಣದ ಮನೋಭಾವ ಹೊಂದಿದೆ ಎಂದು ಹೇಳಿದರು. ಭಾರತದಿಂದಾಗಿಯೇ ವಿಜ್ಞಾನಕ್ಕೆ ನೇಪಾಳ ನೀಡಿದ್ದ ಕೊಡುಗೆಯನ್ನು ನಗಣ್ಯವಾಗಿ ನೋಡಲಾಗುತ್ತಿದೆ. ಈಗಲೂ ರಾಮನಿಗಾಗಿ ನೇಪಾಳ ಸೀತೆಯನ್ನು ನೀಡಿದೆ ಎಂದು ನಂಬಿದ್ದಾರೆ. ಆದರೆ ನಿಜಾಂಶವೇನು ಎಂದರೆ ಶ್ರೀರಾಮನನ್ನು ನೀಡಿದ್ದೂ ಕೂಡ ನೇಪಾಳವೇ.. ಶ್ರೀರಾಮ ಭಾರತೀಯನಲ್ಲ. ಆತ ನೇಪಾಳಿ..ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ ಎಂದು ಹೇಳಿದ್ದಾರೆ.

ನೇಪಾಳ ರಾಜಧಾನಿ ಕಠ್ಮಂಡುವಿನಿಂದ ಸುಮಾರು 135 ಕಿ.ಮೀ ದೂರದಲ್ಲಿ ಬಿರ್ಗುಂಜ್ ಜಿಲ್ಲೆಯಿದ್ದು ಇಲ್ಲಿಯೇ ಶ್ರೀರಾಮ ಜನಿಸಿದ ನಿಜವಾದ ಅಯೋಧ್ಯೆ ಇದೆ. ನಾವು ಸಾಂಸ್ಕೃತಿಕವಾಗಿ ತುಳಿತಕ್ಕೊಳಗಾಗಿದ್ದು, ಭಾರತ ಸತ್ಯಾಂಶಗಳನ್ನು ಅತಿಕ್ರಮಿಸಿದೆ ಎಂದು ಹೇಳಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನು ಈ ಹಿಂದೆಯೂ ಕೂಡ ಗಡಿ ವಿಚಾರವಾಗಿ ತಗಾದೆ ತೆಗೆದಿದ್ದ ಕೆಪಿ ಶರ್ಮಾ ಒಲಿ, ಭಾರತ ಭೂ ಪ್ರದೇಶವನ್ನು ತಮ್ಮದೆಂದು ಹೇಳಿದ್ದರು. ಅಲ್ಲದೆ ಭಾರತ ಭೂಪ್ರದೇಶವನ್ನು ನೇಪಾಳದ್ದು ಎಂದು ಹೇಳುವ ನಕ್ಷೆಯನ್ನೂ ಕೂಡ ನೇಪಾಳದ ಸಂಸತ್ ನಲ್ಲಿ ಮಂಡಿಸಿ ಅನುಮೋದನೆ ಕೂಡ ಪಡೆದಿದ್ದರು. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *