nepal clarification- ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳ ಪ್ರಧಾನಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಕೊಟ್ಟ ಸ್ಪಷ್ಟತೆ ಏನು ಗೊತ್ತೇ?

ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಲು ಯತ್ನಿಸಿದೆ. 

PM K P Sharma Oli's remarks on Lord Ram not meant to debase Ayodhya's significance and cultural value: Nepal Foreign Ministry

ಕಠ್ಮಂಡು: ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ತೇಪೆ ಹಚ್ಚುವ ಕೆಲಸ ಮಾಡಿ ಸ್ಪಷ್ಟನೆ ನೀಡಲು ಯತ್ನಿಸಿದೆ. 

ಜು.13 ರಂದು ಕೆ.ಪಿ ಶರ್ಮಾ ಓಲಿ ನೀಡಿರುವ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಅಯೋಧ್ಯೆ ಹಾಗೂ ಅದರ ಸಾಂಸ್ಕೃತಿಕ ಮೌಲ್ಯಗಳನ್ನು  ಮಹತ್ವವನ್ನು ಕಡಿಮೆಮಾಡುವ ಉದ್ದೇಶ  ಪ್ರಧಾನಿಗಳ ಹೇಳಿಯಲ್ಲಿ ಇರಲಿಲ್ಲ ಎಂದು ಹೇಳಿದೆ.

ನೇಪಾಳಿ ಭಾಷೆಯ ರಾಮಾಯಣದ ಕರ್ತೃ ಆದಿಕವಿ ಭಾನು ಭಕ್ತ ಆಚಾರ್ಯರ 207 ನೇ ಜನ್ಮದಿನಾಚರಣೆ ಅಂಗವಾಗಿ ಮಾತನಾಡಿದ್ದ ನೇಪಾಳ ಪ್ರಧಾನಿ ರಾಮನ ನಿಜವಾದ ಜನ್ಮಭೂಮಿ ಇರುವುದು ಭಾರತದಲ್ಲಿ ಅಲ್ಲ ನೇಪಾಳದಲ್ಲಿ ಎಂದು ಹೇಳಿದ್ದರು.

ಈ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ನೇಪಾಳ ವಿದೇಶಾಂಗ ಸಚಿವಾಲಯ, ಪ್ರಧಾನಿಯವರ ಹೇಳಿಕೆ ಯಾವುದೇ ರಾಜಕೀಯ ವಿಷಯಕ್ಕೂ ಸಂಬಂಧಿಸಿದ್ದಾಗಲೀ ಯಾವುದೇ ಭಾವನೆಗಳಿಗೆ ನೋವುಂಟು ಮಾಡುವುದಾಗಲೀ ಅಲ್ಲ. ರಾಮಾಯಣ ಹಾಗೂ ಅವುಗಳ ಘಟನೆಗಳಿಗೆ ಬೆಸೆದುಕೊಂಡಿರುವ ಹಲವಾರು ಪ್ರದೇಶಗಳು ಪುರಾಣಗಳಲ್ಲಿ ಬಂದಿವೆ, ಈ ಸಂಬಂಧ ಹೆಚ್ಚಿನ ಅಧ್ಯಯನಕ್ಕೆ ಸಹಾಯವಾಗುವಂತೆ ಅವುಗಳ ಮಹತ್ವವನ್ನು ಪ್ರಧಾನಿ ಹೇಳಿದ್ದಾರೆ ಎಂದು ತಿಳಿಸಿದೆ.

ಪ್ರತಿ ವರ್ಷ ಬಿಭಾ ಪಂಚಮಿಯ ದಿನದಂದು ಭಾರತದ ಅಯೋಧ್ಯೆಯಿಂದ ನೇಪಾಳದ ಜನಕಪುರಿಗೆ ಮದುವೆ ದಿಬ್ಬಣ ಬರುವ ಸಂಪ್ರದಾಯ ಗಮನಾರ್ಹವಾಗಿದೆ. 2018 ರಲ್ಲಿ ನೇಪಾಳ ಪ್ರಧಾನಿಯೇ ರಾಮಾಯಣ ಸರ್ಕ್ಯೂಟ್ ಉದ್ಘಾಟಿಸಿ ಜನಕಪುರದಿಂದ ಅಯೋಧ್ಯೆಗೆ ಬಸ್ ಸೇವೆಯನ್ನು ಪ್ರಾರಂಭಿಸಿದ್ದನ್ನೂ ವಿದೇಶಾಂಗ ಇಲಾಖೆ ಉಲ್ಲೇಖಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *