ಒಂದೇ ವಾರದಲ್ಲಿ 800 ರ ಪೈಕಿ 500 ಜನರು ಗುಣಮುಖ!ಕೆಲಸ ಮಾಡುತ್ತಿದೆ ‘ಅವೇಕ್ ಪ್ರೋನಿಂಗ್’

ಕೋವಿಡ್-19 ನ್ನು ಎದುರಿಸಲು ಭಿನ್ನ ಭಿನ್ನ ಮಾದರಿಯ ಚಿಕಿತ್ಸೆಗಳ ಮೊರೆ ಹೋಗುತ್ತಿದೆ ವೈದ್ಯ ಲೋಕ.  2 ವಾರಗಳ ಹಿಂದಷ್ಟೇ ಸರ್ಕಾರ ಘೋಷಣೆ ಮಾಡಿದ್ದ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಕೋವಿಡ್-19 ನಿಂದ ಗುಣಮುಖವಾಗುವುದಕ್ಕೆ ಒಂದಷ್ಟು ಆಶಾಕಿರಣ ಮೂಡಿಸಿದೆ.

COVID-19 vaccine

ಕೋವಿಡ್-19 ನ್ನು ಎದುರಿಸಲು ಭಿನ್ನ ಭಿನ್ನ ಮಾದರಿಯ ಚಿಕಿತ್ಸೆಗಳ ಮೊರೆ ಹೋಗುತ್ತಿದೆ ವೈದ್ಯ ಲೋಕ.  2 ವಾರಗಳ ಹಿಂದಷ್ಟೇ ಸರ್ಕಾರ ಘೋಷಣೆ ಮಾಡಿದ್ದ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಕೋವಿಡ್-19 ನಿಂದ ಗುಣಮುಖವಾಗುವುದಕ್ಕೆ ಒಂದಷ್ಟು ಆಶಾಕಿರಣ ಮೂಡಿಸಿದೆ.

ಅವೇಕ್ ಪ್ರೋನಿಂಗ್ ವಿಧಾನದ ಮೂಲಕ ಚಿಕಿತ್ಸೆ ಪಡೆದಿದ್ದ 800 ಜನರ ಪೈಕಿ 500 ಜನರು ಕೋವಿಡ್-19 ನಿಂದ ಕೇವಲ ಒಂದು ವಾರದಲ್ಲಿ ಗುಣಮುಖರಾಗಿದ್ದಾರೆ.

ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶದ 45 ವರ್ಷದ ವೈದ್ಯರೊಬ್ಬರು ಅವೇಕ್ ಪ್ರೋನಿಂಗ್ ವಿಧಾನದ ಮೂಲಕ ಕೋವಿಡ್-19 ಗುಣಮುಖರಾಗಿದ್ದಾರೆ.

ಪ್ರಾರಂಭದ ದಿನಗಳಲ್ಲಿ ಅವರ ಪರಿಸ್ಥಿತಿ ಹದಗೆಟ್ಟಿತ್ತು. ಪ್ರತಿ ದಿನಕ್ಕೆ 4-5 ಲೀಟರ್ ನಷ್ಟು ಆಕ್ಸಿಜನ್ ಅಗತ್ಯವಿತ್ತು. ಆದರೆ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಪ್ರಯೋಗಿಸಿದ ನಂತರ ಅವರ ಆರೋಗ್ಯ ಸುಧಾರಣೆಯಾಯಿತು. ಒಂದು ವಾರದ ಅವಧಿಯಲ್ಲಿ ಉತ್ತಮ ಫಲಿತಾಂಶ ದೊರೆಯಲಾರಂಭಿಸಿ ಆಕ್ಸಿಜನ್ ಅಗತ್ಯತೆಯಿಂದ ಹೊರಬಂದರು. ಪ್ರಮಾಣೀಕೃತ ಥೆರೆಪಿಗಳ ಜೊತೆಗೆ ಆಕ್ಟೀವ್ ಪ್ರೋನಿಂಗ್ ನ್ನೂ ಮಾಡಲಾಯಿತು ಎನ್ನುತ್ತಾರೆ ಕ್ರಿಟಿಕಲ್ ಕೇರ್ ಸಪೋರ್ಟ್ ಟೀಮ್ ನ ಸದಸ್ಯ ಹಾಗೂ ಮಣಿಪಾಲ್ ಆಸ್ಪತ್ರೆಯ  ಬೋರ್ಡ್ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ವಿಭಾಗದ  ಅಧ್ಯಕ್ಷ ಡಾ. ಅನೂಪ್ ಅಮರನಾಥ್.

ಅವೇಕ್ ಪ್ರೋನಿಂಗ್ ಎಂದರೇನು?

ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನದಲ್ಲಿ ರೋಗಿಗಳನ್ನು, ಮೇಲ್ಕಂಡ ಚಿತ್ರದಲ್ಲಿ ತೋರಿಸಿರುವಂತೆ ಹೊಟ್ಟೆ ಕೆಳಭಾಗಕ್ಕೆ ಬರುವ ಭಂಗಿಯಲ್ಲಿ ಮಲಗಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ಶ್ವಾಸಕೋಶಕ್ಕೆ ಆಮ್ಲಜನಕ ಹೆಚ್ಚಿನ ಪ್ರಮಾಣದಲ್ಲಿ ತಲುಪುತ್ತದೆ. ದಿನವೊಂದಕ್ಕೆ 16-18 ಗಂಟೆಗಳ ಕಾಲ ಈ ಪ್ರಕ್ರಿಯೆಯನ್ನು ನಡೆಸಬೇಕಾಗುತ್ತದೆ.

ಕೋವಿಡ್-19 ಸೋಂಕು ತೀವ್ರವಾದ ಹಂತಕ್ಕೆ ಹೋದ 300 ರೋಗಿಗಳಿಗೆ ಮಾತ್ರ ಈ ಚಿಕಿತ್ಸಾ ವಿಧಾನ ಕೆಲಸ ಮಾಡಿಲ್ಲ. ಪ್ರಾರಂಭಿಕ ಹಂತದಲ್ಲಿದ್ದವರಿಗೆ ಈ ಚಿಕಿತ್ಸಾ ವಿಧಾನ ಫಲಿಸುತ್ತಿದೆ ಇದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ಡಾ ಅಮರ್ ನಾಥ್ ಹೇಳಿದ್ದಾರೆ.

ಸರ್ವೈಕಲ್ ಸ್ಪಾಂಡಿಲೋಸಿಸ್ ಎದುರಿಸುತ್ತಿರುವ ಗರ್ಭಿಣಿ ಮಹಿಳೆಯರಿಗೆ ಈ ಚಿಕಿತ್ಸಾ ವಿಧಾನ ಸೂಕ್ತವಲ್ಲ ಎಂದೂ ವೈದ್ಯರು ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ...

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ,...

ವಿಪರೀತ ಮಳೆ ವಾಸ್ತವ್ಯ & ನಿರ್ಮಾಣ ಹಂತದ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿ

ನಿರ್ಮಾಣ ಹಂತದ ಆಶ್ರಯ ಮನೆ ಮತ್ತು ವಾಸ್ತವ್ಯದ ಕಚ್ಚಾ ಮನೆ ಸೇರಿ ಒಂದೇ ಕುಟುಂಬದ ಎರಡೂ ಮನೆಗಳಿಗೆ ಹಾನಿಯಾಗಿರುವ ದುರ್ಘಟನೆ ಸಿದ್ಧಾಪುರ ತಾಲೂಕು ಕಂಸಲೆಯಿಂದ...

ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *