kovid nk today- ಬೆಂಗಳೂರಿನಿಂದ ಮರಳಿದ ಸಿದ್ಧಾಪುರದ ಮೂರು ಗ್ರಾಮೀಣ ಪ್ರಕರಣಗಳು ಸೇರಿ ಇಂದು ಉ.ಕ. ದ 79 ಜನರಲ್ಲಿ ಕೋವಿಡ್ ದೃಢ

ಉತ್ತರ ಕನ್ನಡ ಜಿಲ್ಲೆಯ ಕರೋನಾ ಕೇಸ್ ಗಳ ನಾಗಾಲೋಟಕ್ಕೆ ಸಾಕ್ಷಿಯಾಗುವಂತೆ ಇಂದು ಜಿಲ್ಲೆಯ 79 ಜನರಲ್ಲಿ ಕೋವಿಡ್ ದೃಢ ಪಟ್ಟಿದೆ.

ಹಳಿಯಾಳ,ದಾಂಡೇಲಿಗಳಲ್ಲಿ 35,ಭಟ್ಕಳ 11, ಮುಂಡಗೋಡು 8 ಕಾರವಾರ 7, ಕುಮಟಾ5, ಶಿರಸಿ,ಹೊನ್ನಾವರ,ಯಲ್ಲಾಪುರಗಳಲ್ಲಿ ತಲಾ ಒಂದು ಹಾಗೂ ಸಿದ್ಧಾಪುರದ ಮೂವರಲ್ಲಿ ಕರೋನಾ ದೃಢಪಟ್ಟಿದೆ.
ಸಿದ್ಧಾಪುರದ ಕೊರ್ಲಕೈ ಪಂಚಾಯತ್ ನ ಆಡುಕಟ್ಟಾ, ಬೇಡ್ಕಣಿ ಮತ್ತು ಹಾರ್ಸಿಕಟ್ಟಾ ಪಂಚಾಯತ್ ಗಳ ತಲಾ ಒಬ್ಬರಲ್ಲಿ ಕರೋನಾ ದೃಢ ಪಟ್ಟಿದೆ. ಈ ಪಂಚಾಯತ್ಗಳ ಮೂರೂ ಪ್ರದೇಶಗಳಲ್ಲಿ ಕಂಟೇನ್ ಮೆಂಟ್ ಪ್ರದೇಶ ಎಂದು ಘೋಶಿಸಲಾಗಿದ್ದು ಈ ಮೂರೂ ಪ್ರಕರಣಗಳ ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳಿಗೆ ಕಾರಂಟೈನ್ ಮಾಡಲಾಗಿದೆ.

ಸಿದ್ದಾಪುರ
ಕರೊನಾ ವೈರಸ್ ಎಲ್ಲ ಕಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ನಾಡಿನ ಪ್ರಸಿದ್ದ ಉಂಚಳ್ಳಿ ಜಲಪಾತ ವೀಕ್ಷಣೆಯನ್ನು ತಾತ್ಕಾಲಿಕವಾಗಿ ಬಂದ್ ಮಾ ಡಲಾಗಿದೆ.
ನಿತ್ಯ ಸಾವಿರಾರು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಬರುತ್ತಿರುವುದರಿಂದ ಸ್ಥಳೀಯ ಜನತೆ ಆತಂಕ ವ್ಯಕ್ತಪಡಿಸಿದ್ದರಿಂದ ಗ್ರಾಮ ಅರಣ್ಯ ಸಮಿತಿ ಉಂಚಳ್ಳಿ ಸಾರ್ವಜನಿಕರ ಒತ್ತಾಯದ ಮೇರೆಗೆ ಜಲಪಾತ ವೀಕ್ಷಣೆಯನ್ನು ತಾತ್ಕಾಲಿಕವಾಗಿ ಬಂದ ಮಾಡಲು ತೀರ್ಮಾನಿಸಿ ಜೋಗಕ್ಕೆ ತೆರಳುವ ರಸ್ತೆಯನ್ನು ಬಂದ್ ಮಾಡಿದೆ. ಪ್ರವಾಸಿಗರು ಸಹಕರಿಸುವಂತೆ ಉಂಚಳ್ಳಿ ಗ್ರಾಮ ಅರಣ್ಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಿದ್ದಾಪುರ; ಫೇಸ್‍ಬುಕ್‍ನಲ್ಲಿ ಬಸವ ಪ್ರಿಯಾ ಉಮೇಶ ಕುಮಾರಎನ್ನುವಖಾತೆ ಹೊಂದಿರುವವ್ಯಕ್ತಿಜಾತಿನಿಂದನೆ, ಧರ್ಮನಿಂದನೆ ಮಾಡಿ ಅವಹೇಳನಕಾರಿ ಪೋಸ್ಟ್ ಮಾಡಿದನ್ನು ಖಂಡಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಉತ್ತರಕನ್ನಡಜಿಲ್ಲಾ ವೀರಶೈವ, ಜಂಗಮ, ಅರ್ಚಕರು ಮತ್ತು ಪರೋಹಿತ ಸಂಘವು ತಹಶೀಲ್ದಾರ ಹಾಗೂ ಪೋಲಿಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿದೆ. ಇಂತಹಕೃತ್ಯವು ನಾವು ಶ್ರದ್ಧಾ ಭಕ್ತಿಯಿಂದಆರಾಧಿಸುವ ಹಾಗೂ ಪಾಲಿಸುವ ವೈದಿಕ ಪರಂಪರೆಗೆಅಪಮಾನ ಮಾಡಿದಂತೆ.ಇಂತಹ ಬರಹ ಸಮಾಜದಲ್ಲಿ ಶಾಂತಿಕದಡಿ ಗಲಭೆಗೆ ಪ್ರಚೋದಿಸಿದಂತಾಗುತ್ತದೆ.ಕಾರಣ ಸೈಬರ್‍ಕ್ರೈಮ್‍ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕು. ನಮ್ಮಜಾತಿ, ಧರ್ಮ, ವೃತ್ತಿ , ಸಂಸ್ಕೃ ತಿ ಕಾಪಾಡಿಕೊಳ್ಳಲು ರಕ್ಷಣೆ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈಸಂರ್ಭದಲ್ಲಿಉತ್ತರಕನ್ನಡಜಿಲ್ಲಾ ವೀರಶೈವ, ಜಂಗಮ, ಅರ್ಚಕರು ಮತ್ತು ಪರೋಹಿತ ಸಂಘದಅಧ್ಯಕ್ಷ ಪರಮೇಶ್ವರಯ್ಯ ಕಾನಳ್ಳಿಮಠ, ಪ್ರಧಾನ ಕಾರ್ಯದರ್ಶಿ ಪುಟ್ಟಯ್ಯ ಶಾಸ್ತ್ರಿ ಹಾಗೂ ಇತರರಿದ್ದರು.

ಸಿದ್ದಾಪುರ
ತಾಲೂಕಿನ ಭುವನಗಿರಿ ಭುವನೇಶ್ವರಿ ದೇವಾಲಯಕ್ಕೆ ಜು.8ರಿಂದ ಅನಿರ್ಧಿಷ್ಠಾವಧಿಯವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿ ಸಿದೆ.
ನಾಡಿನಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ವ್ಯಾಪಕವಾಗಿ ಹರಿಡುತ್ತಿದ್ದು ಸಮುದಾಯಕ್ಕೆ ಹರಡುವ ಬೀತಿ ಇರುವ ಹಿನ್ನೆಲೆಯಲ್ಲಿ ಭುವನಗಿರಿ ಭುವನೇಶ್ವರಿ ಅಡಳಿತ ಮಂಡಳಿ ಸರ್ವಾನುಮತದಿಂದ ಸ್ವಯಂಪ್ರೇರಿತವಾಗಿ ಸಾರ್ವಜನಿಕರಿಗೆ ದೇವಾಲಯದ ಪ್ರವೇಶ ಅನಿರ್ಧಿಷ್ಠಾವಧಿಯವರೆಗೆ ನಿರ್ಬಂಧಿಸಿದ್ದಲ್ಲದೇ ಈ ಸಮಯದಲ್ಲಿ ದೇವರಿಗೆ ಯಾವುದೇ ಸೇವಾ ಅವಕಾಶ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *