ಸಚಿವಕಾಂಕ್ಷಿಗಳಿಗೆ ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ: 4 ಶಾಸಕರಿಂದ ರಿಜೆಕ್ಟ್

ಸಂಪುಟ ಪುನಾರಚನೆ ಕಾರ್ಯ ರಾಜ್ಯ ಸರ್ಕಾರದಲ್ಲಿ ಚುರುಕುಗೊಳ್ಳುತ್ತಿದ್ದು, ಈ ನಡುವೆ ಭುಗಿಲೇಳಲಿರುವ ಅತೃಪ್ತಿಯನ್ನು ಶಮನ ಮಾಡಲು ಯತ್ನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಖುಷಿಯಲ್ಲಿಯೇ 24 ಮಂದಿ ಶಾಸಕರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ನೀಡಿ ಆದೇಶ ಹೊರಡಿಸಿದ್ದಾರೆ…

yeddyurappa

ಬೆಂಗಳೂರು: ಸಂಪುಟ ಪುನಾರಚನೆ ಕಾರ್ಯ ರಾಜ್ಯ ಸರ್ಕಾರದಲ್ಲಿ ಚುರುಕುಗೊಳ್ಳುತ್ತಿದ್ದು, ಈ ನಡುವೆ ಭುಗಿಲೇಳಲಿರುವ ಅತೃಪ್ತಿಯನ್ನು ಶಮನ ಮಾಡಲು ಯತ್ನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಖುಷಿಯಲ್ಲಿಯೇ 24 ಮಂದಿ ಶಾಸಕರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ನೀಡಿ ಆದೇಶ ಹೊರಡಿಸಿದ್ದಾರೆ. ಆದರೆ, ಈ ನೇಮಕಕ್ಕೆ ಹಲವರು ಅಸಮಾಧಾನಗೊಂಡಿದ್ದು, 3 ಶಾಸಕರು ಹುದ್ದೆ ತಿರಸ್ಕರಿಸಿದ್ದಾರೆಂದು ತಿಳಿದುಬಂದಿದೆ. 

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹಲವು ಶಾಸಕರಿಗೆ ನಿಗಮ ಮಂಡಳಿ ಸ್ಥಾನ ಹಂಚಿಕೆ ಸಾಕಷ್ಟು ಅಸಮಾಧಾನವನ್ನುಂಟು ಮಾಡಿದೆ. ನಿಗಮ ಮಂಡಳಿಗೆ ಆಯ್ಕೆಯಾದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವರು ಮುಖ್ಯಮಂತ್ರಿಗಳನ್ನೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. 

ಚಿತ್ರದುರ್ಗದ ಬಿಜೆಪಿ ಹಿರಿಯನಾಯಕ ಜಿಹೆಚ್.ತಿಪ್ಪಾರೆಡ್ಡಿಯವರು ಸಾರ್ವಜನಿಕವಾಗಿಯೇ ನೇಮಕಾತಿಯನ್ನು ತಿರಸ್ಕರಿಸಿದ್ದು, ಇದು ನಮಗೆ ಮಾಡಿದ ಅವಮಾನವೆಂದು ತಿಳಿಸಿದ್ದಾರೆ. 

ನಾನು ಆರು ಬಾರಿ ಶಾಸಕನಾದವರು. ನನಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಬೇಕಿಲ್ಲ. ನಾನು ಸಚಿವ ಸ್ಥಾನಕ್ಕೆ ಅರ್ಹನಾದ ವ್ಯಕ್ತಿ. ಇದು ನನ್ನ ಹಕ್ಕು ಕೂಡ ಹೌದು. ಸಂಜೆ ಮುಖ್ಯಮಂತ್ರಿಗಳು ಖುದ್ದು ಕರೆ ಮಾಡಿದ್ದು, ನೇಮಕದ ಆದೇಶ ತಡೆ ಹಿಡಿದಿರುವುದಾಗಿ ಹೇಳಿದ್ದಾರೆಂದು ತಿಪ್ಪಾರೆಡ್ಡಿ ತಿಳಿಸಿದ್ದಾರೆ. 

ಶಾಸಕ ಪ್ರೀತಂ ಗೌಡರನ್ನು ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಅಧ್ಯಕ್ಷರಾಗಿ ಹಾಗೂ ದತ್ತಾತ್ರೇಯ ಪಾಟೀಲ್ ರೆವೂರ್ ಅವರನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಅಸಮಾಧಾನವನ್ನು ವೈಯಕ್ತಿಕವಾಗಿ ಹಾಗೂ ನೇರವಾಗಿ ಮುಖ್ಯಮಂತ್ರಿಗಳ ಬಳಿಯೇ ಹೇಳಲು ನಿರ್ಧರಿಸಿದ್ದಾರೆ. 

ನಿಜಕ್ಕೂ ಈ ಬೆಳವಣಿಗೆ ಆಶ್ಚರ್ಯವನ್ನು ತಂದಿದೆ. ಇಂತಹ ದೊಡ್ಡ ಜವಾಬ್ದಾರಿ ನನಗೆ ಬೇಡ. ಇದಕ್ಕೆ ಮುಖ್ಯಮಂತ್ರಿಗಳು ಬೇರೆ ಯಾರನ್ನಾದರೂ ನೇಮಕ ಮಾಡಲಿ ಎಂದಿದ್ದಾರೆ. 

ಮಾಜಿ ಸಚಿವ ಹರತಾಳ್ ಹಾಲಪ್ಪ, ಎಂ.ಪಿ ಕುಮಾರಸ್ವಾಮಿ, ರಾಜು ಗೌಡ, ಎ.ಎಸ್. ಪಾಟೀಲ್ ನಡಹಳ್ಳಿ ಹಾಗೂ ಕಾಳಪ್ಪ ಬಂಡಿಯವರೂ ಕೂಡ ನೇಮಕಾತಿಗೆ ಅಸಮಾಧಾನಗೊಂಡಿದ್ದಾರೆ. ಆದರೆ, ಮೌನದಿಂದಿರುವ ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. 

ಆದರೆ. ಎಂ.ಚಂದ್ರಪ್ಪ, ಅರಗ ಜ್ಞಾನೇಂದ್ರ ಅವರು ಯಡಿಯೂರಪ್ಪ ಜೊತೆಗೆ ಕೆಲಸ ಮಾಡಲು ಯಾವುದೇ ಸ್ಥಾನ ನೀಡಿದರೂ ಕೆಲಸ ಮಾಡಲು ನಾವು ಸಿದ್ಧ ಎಂದು ಹೇಳಿದ್ದಾರೆ. 

ಈ ನಡುವೆ 20 ಮಂದಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡವುದರಿಂದ ಸಂಪುಟ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ. ಸಿಪಿ ಯೋಗೇಶ್ವರ್ ಹಾಗೂ ಹೆಚ್.ವಿಶ್ವನಾಥ್ ಅವರಿಗೆ ಕೊಂಚ ನಿರಾಳ ಎದುರಾದಂತಾಗಿದೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *