

ಈ ವಾರದ ಪ್ರಾರಂಭದಿಂದ ಸುರಿಯುತ್ತಿರುವ ಮಳೆ ಮಲೆನಾಡು-ಕರಾವಳಿ ಭಾಗದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಮಳೆ ಪರಿಣಾಮ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಕಾರವಾರದ ಕಾಜುಬಾಗಿನ ಯುವಕ ಸುನಿಲ್ ಅಪಘಾತದ ಸ್ಥಳದಿಂದ ಆಸ್ಫತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಇವರು ತಮ್ಮ ಅಲ್ಟೋ ಕಾರಿನಲ್ಲಿ ಕಛೇರಿಗೆ ತೆರಳುತಿದ್ದರು.


ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಲವೆಡೆ ಮರ ಬಿದ್ದು ಮನೆಗಳಿಗೆ ಹಾನಿಯಾಗಿದೆ. ಸಿದ್ಧಾಪುರ ಹೆಜನಿಯ ವಾಸುದೇವ ಈರಪ್ಪ ನಾಯ್ಕರ ಮನೆಛಾವಣಿ ಹಾರಿ ತೊಂದರೆಯಾಗಿದೆ. ಅವರಗುಪ್ಪಾದ ಪುಂಡಲೀಕ ದ್ಯಾವಾ ನಾಯ್ಕರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಹೊಸೂರಿನ ಗೋವಿಂದ ತಿಮ್ಮ ನಾಯ್ಕರ ಮನೆ ಮೇಲೆ ಮರ ಬಿದ್ದು ಹಾನಿಯಾದ ಬಗ್ಗೆ ಸುದ್ದಿಯಾಗಿದೆ. ಈ ಪ್ರಕರಣಗಳು ಸೇರಿದಂತೆ ಅನೇಕ ಕಡೆ ಮಳೆ,ಗಾಳಿಯಿಂದ ಹಾನಿಯಾದ ಬಗ್ಗೆ ವರದಿಯಾಗಿದೆ.
ಕರೋನಾ-
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 57 ಜನರಲ್ಲಿ ಕರೋನಾ ದೃಢಪಟ್ಟಿದೆ. ಕಾರವಾರದಲ್ಲಿ 21ಜನರು, ಹಳಿಯಾಳ10, ಮುಂಡಗೋಡು 9 ಸೇರಿ ಒಟ್ಟೂ 57 ಜನರಲ್ಲಿ ಕರೋನಾ ದೃಢಪಟ್ಟಿದೆ. ಸಿದ್ಧಾಪುರದ ರವೀಂದ್ರನಗರದ ಹೊರರಾಜ್ಯದಿಂದ ಬಂದ ವ್ಯಕ್ತಿಯೊಬ್ಬರಲ್ಲಿ ಕರೋನಾ ದೃಢವಾಗಿದ್ದು ರೋಗ ಲಕ್ಷಣಗಳ ಹಿನ್ನೆಲೆಯಲ್ಲಿ ಅವರನ್ನು ಕಾರವಾರಕ್ಕೆ ಸ್ಥಳಾಂತರಿಸಲಾಗಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
