

ಉತ್ತರ ಕನ್ನಡ ಜಿ.ಪಂ. ನ ಮಾಜಿ ಸದಸ್ಯ ಜಿ.ಎಸ್.ಭಟ್ ಗುಂಜಗೋಡು ಇಂದು ಮುಂಜಾನೆ ನಿಧನರಾಗಿದ್ದಾರೆ. 68 ವರ್ಷಗಳ ಪ್ರಾಯದ ಅವರು ಮಧುಮೇಹ,ರಕ್ತದೊತ್ತಡದಿಂದ ಬಳಲುತಿದ್ದರೂ ನಿನ್ನೆಯ ವರೆಗೂ ಆರೋಗ್ಯವಾಗಿಯೇ ಇದ್ದರು.

ಎರಡು ಬಾರಿ ಜನತಾದಳ, ಇನ್ನೊಂದು ಬಾರಿ ಸಮಾಜವಾದಿ ಪಕ್ಷಗಳಿಂದ ಮೂರು ಅವಧಿ ಉತ್ತರ ಕನ್ನಡ ಜಿ.ಪಂ.ಸದಸ್ಯರಾಗಿದ್ದ ಅವರು ಕೃಷಿಕರು,ಅಡಿಕೆ ವ್ಯಾಪಾರಿಗಳು, ಸ್ಥಳಿಯ ಸಂಸ್ಥೆಗಳ ಸದಸಸ್ಯರು,ಅಧ್ಯಕ್ಷರೂ ಆಗಿ ಕೆಲಸ ಮಾಡಿದ್ದರು. ಒಂದು ಅವಧಿಗೆ ಕ್ಯಾಪ್ಕೋ ನಿರ್ಧೇಶಕರಾಗಿ ಸೇವೆ ಸಲ್ಲಿಸಿದ್ದರು.
ಅವರ ಶೃದ್ಧಾಂ ಜಲಿ ಸಭೆ ಸಾಯಂಕಾಲ 5 ಕ್ಕೆ ಸಿದ್ಧಾಪುರ ಎ.ಪಿ.ಎಂ.ಸಿ. ಅಡಿಕೆ ಮನೆಯಲ್ಲಿ ನಡೆಯಲಿದೆ ಎಂದು ತಿಳಿಸಿರುವ ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಪಿ.ಎಂ.ಹೆಗಡೆ ಅವರೊಂದಿಗಿನ ಒಡನಾಟ ಸ್ಮರಿಸಿ ಕಂಬನಿ ಮಿಡಿದಿದ್ದಾರೆ. ಅವರ ನಿಧನದ ಪ್ರಯುಕ್ತ ಸಿದ್ಧಾಪುರದಲ್ಲಿ ಇಂದು ಅಡಿಕೆ ವ್ಯಾಪಾರ ಬಂದ್ ಮಾಡಿರುವುದಾಗಿ ತಿಳಿಸಿದ್ದಾರೆ.
ಅವರ ಸಾವಿಗೆ ಟಿ.ಎಂ.ಎಸ್. ಅಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ, ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಕೆ.ನಾಯ್ಕ ಸುಂಕತ್ತಿ, ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ, ಅಡಿಕೆ ವರ್ತಕರ ಸಂಘದ ಪಿ.ಎಂ.ಹೆಗಡೆ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
