cm yadiyurappa on id-ರಾಮರಾಜ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸಿ, ಅನ್ನದಾತನ ರಕ್ಷಿಸುವುದೇ ಸರ್ಕಾರದ ಪ್ರಥಮ ಆದ್ಯತೆ: ಯಡಿಯೂರಪ್ಪ

ನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

Yediyurappa

ಬೆಂಗಳೂರು: ನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಮಾಣೆಕ್ ಷಾ ಪರೇಡ್ ನಲ್ಲಿ ಜರುಗಿದ 74 ನೇ ಸ್ವಾತಂತ್ರ್ಯ ದಿನಾಚಾರಣೆಯ ಶುಭ ಸಂದರ್ಭದಲ್ಲಿ ದ್ವಜಾರೋಹಣ ಮಾಡಿ ಅವರು ಮಾತನಾಡಿದರು. ಕೃಷಿ ಆರ್ಥಿಕತೆಯ ಬೆನ್ನೆಲುಬಾಗಿರುವ ಸಹಕಾರ ವಲಯದಲ್ಲಿ ಸರ್ಕಾರ ಮಹತ್ತರ ಬದಲಾವಣೆಗಳನ್ನು ತಂದಿದೆ. ರೈತರು ತಾವು ಬೆಳೆದ ಬೆಳೆಗಳನ್ನು ತಮ್ಮ ಇಚ್ಚೆಯಂತೆ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನೀತಿಯಲ್ಲಿ ಮಾರ್ಪಾಡು ತರಲಾಗಿದೆ ಎಂದರು.

ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ‘ಕಲ್ಯಾಣ ರಾಜ್ಯ’ವನ್ನು ಕಟ್ಟುವುದೇ ನಮ್ಮ ಗುರಿ.ಕೋವಿಡ್-19 ಎಂಬ ಮಹಾ ಪಿಡುಗಿನ ವಿರುದ್ಧ ದ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿ ರಾಜ ಧರ್ಮ ಪಾಲನೆಗೆ ನಾವು ಮುಂದಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. 
ಜನ ಸೇವೆಯೇ ಜನಾರ್ಧನ ಸೇವೆ, ಜನಹಿತ ವನ್ನು ಮನದಲ್ಲಿರಿಸಿ ಜನಪರ ತೀರ್ಮಾನಗಳನ್ನು ತೆಗೆದುಕೊಂಡಿ ದ್ದೇವೆ.ಈ ಎಲ್ಲಾ ತೀರ್ಮಾನಗಳಿಗೂ ನನ್ನ ರಾಜ್ಯದ ಜನರು ಸಂಪೂರ್ಣ ಬೆಂಬಲ ನೀಡಿ ಸಹಕರಿಸಿದ್ದೀರಿ.ಅದಕ್ಕಾಗಿ ನಾನು ತಮಗೆ ಅಭಾರಿಯಾಗಿದ್ದೇನೆ ಎಂದರು.

ಕೋವಿಡ್-19 ಎಂಬುದು ಜಾಗತಿಕ ಪಿಡುಗಾಗಿದ್ದು ಎಲ್ಲಾ ಕ್ಷೇತ್ರಗಳನ್ನು ಬಾಧಿಸಿದೆ.ಲಾಕ್‍ಡೌನ್ ಕಾಲದಲ್ಲಿ ಮಂದಗತಿಯ ಜನ ಜೀವನ ಇಂದು ಚೇತರಿಸಿ ಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಬಾಧಿತನಾಗಿ ಇದೀಗ ವೈದ್ಯಕೀಯ ಶುಶ್ರೂಷೆಯಿಂದ ಗುಣಮುಖ ನಾಗಿರುತ್ತೇನೆ.ಜನರು ಸೋಂಕಿನ ಬಗ್ಗೆ ಆತಂಕ, ಭಯಭೀತರಾಗುವ ಅಗತ್ಯವಿಲ್ಲ.ಜಾಗರೂಕತೆಯಿಂದ ಜೀವನ ನಡೆಸಬೇಕು ಎಂದು ಅವರು ಕರೆ ನೀಡಿದರು.

ನೇಗಿಲಯೋಗಿ ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆ. ರೈತರಿಗೆ ಕಿಸಾನ್ ಸಮ್ಮಾನ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುವುದು. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. 2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲ ಅರ್ಹ ರೈತರಿಗೆ ಸಾಲ ನೀಡಲಾಗುವುದು. 5.82 ಲಕ್ಷ ರೈತರಿಗೆ ಸರ್ಕಾರದಿಂದ ನೆರವು ನೀಡಲಾಗುವುದು. ಕೊರೋನಾದಿಂದ ಮೃತಪಟ್ಟಿರುವವರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಶಿವಮೊಗ್ಗ, ಕಾರವಾರ ಮತ್ತು ವಿಜಯಪುರದಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಂಚಾರದಟ್ಟಣೆಯನ್ನು ನಿವಾರಿಸಲು ಸಬ್ ಸರ್ಬನ್ ರೈಲ್ವೆ ಯೋಜನೆಗೆ ವೇಗ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. ಸರ್ಕಾರದ ಎಲ್ಲ ಪ್ರಯತ್ನಗಳಿಗೆ ಪ್ರಧಾನಿ ಮೋದಿ ಅವರ ಸಹಕಾರವಿದೆ
ಎಂದು ಸಿಎಂ ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *