cm yadiyurappa on id-ರಾಮರಾಜ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸಿ, ಅನ್ನದಾತನ ರಕ್ಷಿಸುವುದೇ ಸರ್ಕಾರದ ಪ್ರಥಮ ಆದ್ಯತೆ: ಯಡಿಯೂರಪ್ಪ

ನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

Yediyurappa

ಬೆಂಗಳೂರು: ನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಮಾಣೆಕ್ ಷಾ ಪರೇಡ್ ನಲ್ಲಿ ಜರುಗಿದ 74 ನೇ ಸ್ವಾತಂತ್ರ್ಯ ದಿನಾಚಾರಣೆಯ ಶುಭ ಸಂದರ್ಭದಲ್ಲಿ ದ್ವಜಾರೋಹಣ ಮಾಡಿ ಅವರು ಮಾತನಾಡಿದರು. ಕೃಷಿ ಆರ್ಥಿಕತೆಯ ಬೆನ್ನೆಲುಬಾಗಿರುವ ಸಹಕಾರ ವಲಯದಲ್ಲಿ ಸರ್ಕಾರ ಮಹತ್ತರ ಬದಲಾವಣೆಗಳನ್ನು ತಂದಿದೆ. ರೈತರು ತಾವು ಬೆಳೆದ ಬೆಳೆಗಳನ್ನು ತಮ್ಮ ಇಚ್ಚೆಯಂತೆ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನೀತಿಯಲ್ಲಿ ಮಾರ್ಪಾಡು ತರಲಾಗಿದೆ ಎಂದರು.

ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ‘ಕಲ್ಯಾಣ ರಾಜ್ಯ’ವನ್ನು ಕಟ್ಟುವುದೇ ನಮ್ಮ ಗುರಿ.ಕೋವಿಡ್-19 ಎಂಬ ಮಹಾ ಪಿಡುಗಿನ ವಿರುದ್ಧ ದ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿ ರಾಜ ಧರ್ಮ ಪಾಲನೆಗೆ ನಾವು ಮುಂದಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. 
ಜನ ಸೇವೆಯೇ ಜನಾರ್ಧನ ಸೇವೆ, ಜನಹಿತ ವನ್ನು ಮನದಲ್ಲಿರಿಸಿ ಜನಪರ ತೀರ್ಮಾನಗಳನ್ನು ತೆಗೆದುಕೊಂಡಿ ದ್ದೇವೆ.ಈ ಎಲ್ಲಾ ತೀರ್ಮಾನಗಳಿಗೂ ನನ್ನ ರಾಜ್ಯದ ಜನರು ಸಂಪೂರ್ಣ ಬೆಂಬಲ ನೀಡಿ ಸಹಕರಿಸಿದ್ದೀರಿ.ಅದಕ್ಕಾಗಿ ನಾನು ತಮಗೆ ಅಭಾರಿಯಾಗಿದ್ದೇನೆ ಎಂದರು.

ಕೋವಿಡ್-19 ಎಂಬುದು ಜಾಗತಿಕ ಪಿಡುಗಾಗಿದ್ದು ಎಲ್ಲಾ ಕ್ಷೇತ್ರಗಳನ್ನು ಬಾಧಿಸಿದೆ.ಲಾಕ್‍ಡೌನ್ ಕಾಲದಲ್ಲಿ ಮಂದಗತಿಯ ಜನ ಜೀವನ ಇಂದು ಚೇತರಿಸಿ ಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಬಾಧಿತನಾಗಿ ಇದೀಗ ವೈದ್ಯಕೀಯ ಶುಶ್ರೂಷೆಯಿಂದ ಗುಣಮುಖ ನಾಗಿರುತ್ತೇನೆ.ಜನರು ಸೋಂಕಿನ ಬಗ್ಗೆ ಆತಂಕ, ಭಯಭೀತರಾಗುವ ಅಗತ್ಯವಿಲ್ಲ.ಜಾಗರೂಕತೆಯಿಂದ ಜೀವನ ನಡೆಸಬೇಕು ಎಂದು ಅವರು ಕರೆ ನೀಡಿದರು.

ನೇಗಿಲಯೋಗಿ ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆ. ರೈತರಿಗೆ ಕಿಸಾನ್ ಸಮ್ಮಾನ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುವುದು. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. 2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲ ಅರ್ಹ ರೈತರಿಗೆ ಸಾಲ ನೀಡಲಾಗುವುದು. 5.82 ಲಕ್ಷ ರೈತರಿಗೆ ಸರ್ಕಾರದಿಂದ ನೆರವು ನೀಡಲಾಗುವುದು. ಕೊರೋನಾದಿಂದ ಮೃತಪಟ್ಟಿರುವವರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಶಿವಮೊಗ್ಗ, ಕಾರವಾರ ಮತ್ತು ವಿಜಯಪುರದಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಂಚಾರದಟ್ಟಣೆಯನ್ನು ನಿವಾರಿಸಲು ಸಬ್ ಸರ್ಬನ್ ರೈಲ್ವೆ ಯೋಜನೆಗೆ ವೇಗ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. ಸರ್ಕಾರದ ಎಲ್ಲ ಪ್ರಯತ್ನಗಳಿಗೆ ಪ್ರಧಾನಿ ಮೋದಿ ಅವರ ಸಹಕಾರವಿದೆ
ಎಂದು ಸಿಎಂ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *