

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದೆ.

ಹುಬ್ಬಳ್ಳಿ: ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದೆ.

ಇಂಡಿಗೊ ಸಂಸ್ಥೆಯ ಬೆಂಗಳೂರು-ಹುಬ್ಬಳ್ಳಿ ನಡುವೆ ಪ್ರಯಾಣಿಸುವ 6E 7162 ವಿಮಾನ ಬೆಳಗ್ಗೆ 8.55ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಬೇಕಿತ್ತು. ಆದರೆ, ವಿಮಾನ ಕೆಳಗಿಳಿಸಲು ಅನುಕೂಲಕರ ಹವಾಮಾನ ಇಲ್ಲದ್ದರಿಂದ ಸುಮಾರು ಒಂದು ಗಂಟೆಯ ಕಾಲ ವಿಮಾನ ಗಾಳಿಯಲ್ಲಿಯೇ ಹಾರಾಡುತ್ತಿತ್ತು. ಕೊನೆಗೆ 10.25ರ ಸುಮಾರು ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.
ವಿಮಾನದಲ್ಲಿ ಸಾಕಷ್ಟು ಇಂಧನ ಸಂಗ್ರಹವಿತ್ತು. ಹೀಗಾಗಿ ಏನೂ ತೊಂದರೆ ಇರಲಿಲ್ಲ. ವಾತಾವರಣ ಸಮಸ್ಯೆಯಿಂದ ತಡವಾಗಿ ಲ್ಯಾಂಡ್ ಆಗಿದೆ. ಸ್ಥಳೀಯ ವಾತಾವರಣ ಹಾಗೂ ಲ್ಯಾಂಡಿಂಗ್ ತಡವಾಗುವುದರ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂದು ಇಂಡಿಗೊ ಸಂಸ್ಥೆಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. ಈ ವಿಮಾನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 40 ಪ್ರಯಾಣಿಕರು ಇದ್ದರು.


ಇತ್ತೀಚೆಗಷ್ಟೇ ಕೇರಳದ ಕಲ್ಲಿಕೋಟೆಯಲ್ಲಿ ಇದೇ ರೀತಿಯ ಪ್ರತೀಕೂಲ ಹವಾಮಾನದಿಂದಾಗಿ ಏರ್ ಇಂಡಿಯಾದ ವಿಮಾನ ದುರಂತಕ್ಕೀಡಾಗಿತ್ತು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






