ಕೈ ನಾಯಕತ್ವದ ಕುರಿತು ಪ್ರಶ್ನೆ: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಅಮರೀಂದರ್ ಸಿಂಗ್, ಸಿದ್ದರಾಮಯ್ಯ, ಇತರೆ ನಾಯಕರು!

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ.

Gandhi family leadership

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ ‘ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು‌  ನಾವೆಲ್ಲರೂ ಪ್ರಯತ್ನಿಸಬೇಕೇ ಹೊರತು ದುರ್ಬಲಗೊಳಿಸುವುದಲ್ಲ’ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿದರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಗಾಂಧಿ ಕುಟುಂಬದ ನಾಯಕತ್ವದಿಂದಲೇ ಕಾಂಗ್ರೆಸ್ ಒಗ್ಗಟ್ಟಾಗಿದೆ. ಚುನಾವಣೆಯಲ್ಲಿನ ಸೋಲು ನಾಯಕತ್ವದ ಬದಲಾವಣೆಗೆ ಮಾರ್ಗವಲ್ಲ. ದೇಶವನ್ನು ಜಾತಿಯ ಹಾದಿಯಲ್ಲಿ ವಿಭಜಿಸುವ ಮಹತ್ವಾಕಾಂಕ್ಷೆ ಮತ್ತು  ಧರ್ಮವನ್ನು ಹೊಂದಿರುವ ಬಿಜೆಪಿ ಹಾದಿಯಲ್ಲಿ ನಿಸ್ವಾರ್ಥ ಬದ್ಧತೆ ಮತ್ತು ಊಹಿಸಲಾಗದ ತ್ಯಾಗಗಳ ಮೂಲಕ ಬಂಡೆಯಂತೆ ನಿಲ್ಲಲು ಅವಕಾಶ ಮಾಡಿಕೊಟ್ಟಿರುವ ಕುಟುಂಬವನ್ನು ದುರ್ಬಲಗೊಳಿಸುವುದು ತಪ್ಪು. ಗಾಂಧಿ ಕುಟುಂಬದ ಕಾಂಗ್ರೆಸ್ ನಾಯಕತ್ವಕ್ಕೆ ಯಾವುದೇ ಸವಾಲನ್ನು ವಿರೋಧಿಸುತ್ತೇವೆ ಎಂದು  ಹೇಳಿದ್ದಾರೆ.

ಅಂತೆಯೇ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಕೂಡ ಗಾಂಧಿ ಕುಟುಂಬದ ಬೆಂಬಲಕ್ಕೆ ನಿಂತಿದ್ದು, ‘ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿ ಸವಾಲಿನಲ್ಲೂ ನಮಗೆ ಭರವಸೆಯ ಕಿರಣ. ನಾವೆಲ್ಲರೂ ನಿಮ್ಮೊಂದಿಗಿದ್ದೇವೆ. ಕೋಟಿಗಟ್ಟಲೆ ಕಾರ್ಮಿಕರು ಮತ್ತು ಛತ್ತೀಸ್‌ಗಡ ಮತ್ತು ದೇಶದ  ದೇಶವಾಸಿಗಳು ನಿಮ್ಮೊಂದಿಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಕೂಡ ಈ ಕುರಿತು ಮಾತನಾಡಿದ್ದು, ಕರ್ನಾಟಕ ಕಾಂಗ್ರೆಸ್ ಘಟಕ ಗಾಂಧಿ ಕುಟುಂಬದ ನಾಯಕತ್ವಕ್ಕೆ ಬೆಂಬಲ ನೀಡುತ್ತದೆ. ಬಿಕ್ಕಿಟ್ಟಿನ ಸಂದರ್ಭದಲ್ಲೂ ಸೋನಿಯಾ ಅವರು ಯಾವುದೇ ರೀತಿಯ ದೃತಿಗೆಡದೆ ಪಕ್ಷವನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ವಿಷಯ ಯಾವುದೇ  ಇರಲಿ ಅದನ್ನು ಪಕ್ಷದೊಳಗೆ ಚರ್ಚಿಸಬೇಕೇ ಹೊರತು ಮಾಧ್ಯಮಗಳ ಮೂಲಕ ಅಲ್ಲ ಎಂದು ಹೇಳಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *