

ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಿದ ಜನವಿರೋಧಿ ಕಾಯಿದೆಗಳ ವಿರುದ್ಧ ಜಾತ್ಯಾತೀತ ಜನತಾದಳ ತನ್ನ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಕೇಂದ್ರ ತಾಲೂಕು ಕೇಂದ್ರಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಆಯಾ ಜಿಲ್ಲಾಧಿಕಾರಿಗಳು, ತಹಸಿಲ್ಧಾರರ ಮೂಲಕ ಮನವಿ ರವಾನಿಸಿರುವ ಪಕ್ಷ ಪ್ರಗತಿಪರ,ರೈತಪರ, ಕಾರ್ಮಿಕಪರ ಇದ್ದ ಕಾಯಿದೆಗಳನ್ನು ತಿದ್ದುಪಡಿ ಮಾಡಿ ರೈತರು, ಕಾರ್ಮಿಕರು, ಜನಸಾಮಾನ್ಯರಿಗೆ ಅನ್ಯಾಯವಾಗುವ ಅಂಶಗಳನ್ನು ಸೇರಿಸಿ ಕಾಯಿದೆಯ ಆಶಯಗಳಿಗೆ ವಿರುದ್ಧವಾದ ಬದಲಾವಣೆಗಳನ್ನು ಮಾಡಲಾಗಿದೆ. ಈ ಬದಲಾವಣೆಗಳನ್ನು ಹಿಂದೆ ಪಡೆಯುವ ಮೂಲಕ ರಾಜ್ಯದ ಜನಸಾಮಾನ್ಯರ ಹಿತಾಸಕ್ತಿ ಕಾಪಾಡಲು ಸರ್ಕಾರವನ್ನು ಪಕ್ಷ ಆಗ್ರಹಿಸಿ.


ಜೆ.ಡಿ.ಎಸ್. ಪರವಾಗಿ ಬರೆದ ಲಿಖಿತ ಮನವಿಯಲ್ಲಿ ಕರ್ನಾಟಕ ಭೂಸುಧಾರಣೆ ಸುಗ್ರಿವಾಜ್ಞೆ2020, ಕರ್ನಾಟಕ ಕೃಷಿ ಉತ್ಫನ್ನ ಮಾರುಕಟ್ಟೆ ಸಮೀತಿ ಸುಗ್ರಿವಾಜ್ಞೆ 2020, ಹಾಗೂ ಕಾರ್ಮಿಕ ಕಾಯಿದೆಗಳ ತಿದ್ದುಪಡಿ ಗಳನ್ನು ತಕ್ಷಣ ಹಿಂದೆ ಪಡೆಯಬೇಕು. ಈ ಬದಲಾವಣೆಗಳ ತಿದ್ದುಪಡಿ ವಿಧೇಯಕಗಳನ್ನು ಹಿಂದೆ ಪಡೆಯದಿದ್ದರೆ ರಾಜ್ಯ ಜಾತ್ಯಾತೀತ ಜನತಾದಳ ಉಗ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಈ ಬಗ್ಗೆ ರಾಜ್ಯಾದ್ಯಂತ ಮುಖ್ಯಮಂತ್ರಿಗಳಿಗೆ ನೀಡಲಾದ ಮನವಿಯನ್ನು ಸಿದ್ಧಾಪುರ ತಾಲೂಕಿನ ಜಾತ್ಯಾತೀತ ಜನತಾದಳದ ಮುಖಂಡರು ತಾಲೂಕಾಧ್ಯಕ್ಷ ಎಸ್.ಕೆ. ನಾಯ್ಕ ಮತ್ತು ಜಿಲ್ಲಾಧ್ಯಕ್ಷ ಬಿ.ಆರ್. ನಾಯ್ಕ ನೇತೃತ್ವದಲ್ಲಿ ತಹಿಸಿಲ್ಧಾರ ಮಂಜುಳಾಭಜಂತ್ರಿಯವರಿಗೆ ನೀಡಲಾಯಿತು. ಪ್ರೊ.ಎನ್.ಟಿ.ನಾಯ್ಕ, ಸತೀಶ್ ಹೆಗಡೆ ಬೈಲಳ್ಳಿ,ರಾಘು ಸೇರಿದಂತೆ ಕೆಲವು ಪ್ರಮುಖರು ಈ ಸಮಯದಲ್ಲಿ ಉಪಸ್ಥಿತರಿದ್ದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
