sdp 1 death- ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಸಾರ್ವಕಾಲಿಕ ದಾಖಲೆಯ 95,735 ಕೇಸ್ ಪತ್ತೆ, 45 ಲಕ್ಷ ಸನಿಹಕ್ಕೆ ಸೋಂಕಿತರ ಸಂಖ್ಯೆ

ಸಿದ್ಧಾಪುರದಲ್ಲಿ ಈ ವಾರದ ಒಟ್ಟೂ ಪ್ರಕರಣಗಳ ವರದಿ ಒಂದೇ ದಿನ ಪ್ರಕಟವಾಗಿ ಕೆಲವರಲ್ಲಿ ಗೊಂದಲ ಉಂಟಾಗಿದೆ. ಕಳೆದ ವಾರದ ಪ್ರಕರಣಗಳಲ್ಲಿ ಜ್ವರ ನಿಯಂತ್ರಣಕ್ಕೆ ಬಾರದ ಇಲ್ಲಿಯ ಹಾಳದಕಟ್ಟಾದ ವ್ಯಕ್ತಿಯೊಬ್ಬರನ್ನು ಕಾರವಾರಕ್ಕೆ ಹೆಚ್ಚಿನ ಚಿಕಿತ್ಸೆಗೆ ಕೊಂಡೊಯ್ಯಲಾಗಿತ್ತು. ಅವರು ಬುಧವಾರ ರಾತ್ರಿ ಮೃತರಾಗಿದ್ದು ಅವರಿಗೆ 56 ವರ್ಷಗಳಾಗಿತ್ತು. ಈ ವ್ಯಕ್ತಿಯ ಶವ ಇಂದು ಸಂಜೆ ಜನ್ಮಸ್ಥಳಕ್ಕೆ ಬರಲಿದ್ದು ಸರ್ಕಾರಿ ನಿಯಮಗಳನುಸಾರ ಪಿ.ಪಿ. ಕಿಟ್ ಧರಿಸಿದ ಇಬ್ಬರು ಶವಸಂಸ್ಕಾರ ಮಾಡಬಹುದಾಗಿದೆ. ಇತರರಿಗೆ ನಿಗದಿತ ಅಂತರದಲ್ಲಿ ಪಾರ್ಥಿವ ಶರೀರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಸಿದ್ಧಾಪುರದ ಒಟ್ಟೂ144 ಕರೋನಾ ಸೋಂಕಿತರಲ್ಲಿ ಇದು ಮೊದಲ ಸಾವಾಗಿದೆ. ಇವರಿಗೆ ಅಸ್ತಮಾ ತೊಂದರೆ ಇದ್ದುದರಿಂದ ಕರೋನಾ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎನ್ನಲಾಗುತ್ತಿದೆ.

ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಗುರುವಾರ ಸಾರ್ವಕಾಲಿಕ ದಾಖಲೆಯ 95,735 ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 44,65,864ಕ್ಕೆ ತಲುಪಿದೆ.

File photo

ನವದೆಹಲಿ:  ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಗುರುವಾರ ಸಾರ್ವಕಾಲಿಕ ದಾಖಲೆಯ 95,735 ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 44,65,864ಕ್ಕೆ ತಲುಪಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 1,172 ಮಂದಿ ಸಾವನ್ನಪ್ಪಿದ್ದು, ಇದೂವರೆಗೂ ಮಹಾಮಾರಿ ವೈರಸ್ ದೇಶದಲ್ಲಿ 75062 ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

ಇನ್ನು 44,65,864 ಮಂದಿ ಸೋಂಕಿತರ ಪೈಕಿ ದೇಶದಲ್ಲಿ 3471784 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 919018 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶಾದ್ಯಂತ 24 ಗಂಟೆಗಳಲ್ಲಿ 11, 29,756 ಕೋವಿಡ್ ಪರೀಕ್ಷೆ, ಒಟ್ಟಾರೆ 5,29,34, 433 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11, 29,756 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11, 29,756 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.9ರವರೆಗೂ 5,29,34, 433 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *