ಮಗನ ಹುಟ್ಟುಹಬ್ಬಕ್ಕೆ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಿದ ಪತ್ರಕರ್ತ

ಕರೋನಾ ಅವಧಿಯಲ್ಲಿ ಆರೋಗ್ಯ ಇಲಾಖೆ, ಆರೋಗ್ಯ ಸಿಬ್ಬಂದಿಗಳ ಕಾರ್ಯ ಗುರುತರ. ಈ ಕಾರಣಕ್ಕೆ ಸಿದ್ಧಾಪುರದ ಪತ್ರಕರ್ತ ದಿವಾಕರ ನಾಯ್ಕ ತಮ್ಮ ಮಗ ಲಿಖಿತ್ ನ ಮೊದಲ ಹುಟ್ಟುಹಬ್ಬದ ನಿಮಿತ್ತ ವಾಜಗೋಡು ಪಂಚಾಯತ್ ವ್ಯಾಪ್ತಿಯ ಆಶಾಕಾರ್ಯಕರ್ತೆಯರನ್ನು ಅಭಿನಂದಿಸಿ, ಗೌರವಿಸಿ ಗೌರವಧನ ನೀಡಿದರು.

ಈ ಸಂಬಂಧ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪತ್ರಕರ್ತ ಸಮಾಜಮುಖಿ ಕನ್ನೇಶ್ ಆಶಾ ಕಾರ್ಯಕರ್ತೆಯರ ಅಪರಿಮಿತ ಕೆಲಸಕ್ಕೆ ಸರ್ಕಾರ ಅವರಿಗೆ ನೀಡುವ ವೇತನ, ಅನುಕೂಲ ಅಲ್ಪ. ಆದರೆ ಈ ಕರೋನಾ ಸೇನಾನಿಗಳ ಕೆಲಸ ಚರಿತ್ರೆ, ಇತಿಹಾಸದುದ್ದಕ್ಕೂ ನೆನಪಿನಲ್ಲಿ ಉಳಿಯುತ್ತದೆ ಎಂದರು. ದಿವಾಕರ ನಾಯ್ಕ ದಂಪತಿಗಳ ಕಳಕಳಿ ಪ್ರಯತ್ನ ಶ್ಲಾಘಿ ಸಿದ ಅವರು ಪ್ರತಿಫಲಾಪೇಕ್ಷೆ ಇಲ್ಲದೆ ಕೆಲಸ ಮಾಡುವವರನ್ನು ಗೌರವಿಸುವುದೆಂದರೆ ಅವರ ಕೆಲಸ ಪ್ರಶಂಸಿಸಿದಂತೆ ಎಂದು ವಿವರಿಸಿದರು.

ಪ್ರಾಸ್ಥಾವಿಕವಾಗಿ ಮಾತನಾಡಿದ ದಿವಾಕರ ನಾಯ್ಕ ಮಗನ ಹುಟ್ಟುಹಬ್ಬದ ಕಾರಣಕ್ಕೆ ಉತ್ತಮ ಕೆಲಸಮಾಡುವುದನ್ನು ಅಭಿನಂದಿಸಲು ಇದೊಂದು ನೆಪದಂತೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಜಗೋಡು ಗ್ರಾ.ಪಂ. ಮಾಜಿ ಅಧ್ಯಕ್ಷ ಕೃಷ್ಣ ಮೂರ್ತಿ ನಾಯ್ಕ ಐಸೂರು ಮಾತನಾಡಿ ಬೇರೆ ಪ್ರದೇಶದ ಆಶಾ ಕಾರ್ಯಕರ್ತೆಯರಿಗಿಂತ ಈ ಭಾಗ, ಈ ತಾಲೂಕಿನ ಆಶಾ ಕಾರ್ಯಕರ್ತೆಯರು ಮಂಗನ ಖಾಯಿಲೆಗೆ ಹೆಚ್ಚುವರಿ ಕೆಲಸ ಮಾಡಿ ದಣಿಯುತ್ತಾರೆ. ನಮ್ಮ ತಾಲೂಕಿನ ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ತಕ್ಕ ಗೌರವ-ಧನ ಸಿಗಬೇಕಿದೆ ಎಂದರು. ನಯನಾ ದಿವಾಕರ ಆಶಾ ಕಾರ್ಯಕರ್ತೆಯರಿಗೆ ಅರಿಶಿಣ ಕುಂಕುಮ ನೀಡಿ ಅಭಿನಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *