

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್ನಲ್ಲಿ ಪಿಸ್ತೂಲ್ ಕೊಂಡೊಯ್ದ ಕಾರಣಕ್ಕಾಗಿ ಬಂಧಿಸಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್ನಲ್ಲಿ ಪಿಸ್ತೂಲ್ ಕೊಂಡೊಯ್ದ ಕಾರಣಕ್ಕಾಗಿ ಬಂಧಿಸಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಸಿಐಎಸ್ಎಫ್ ಭದ್ರತಾ ಪರಿಶೀಲನೆಯ ಸಮಯದಲ್ಲಿ, ಪಿಸ್ತೂಲ್ ಅನ್ನು ಚೀಲದಲ್ಲಿ ಇಟ್ಟುಕೊಂಡಿರುವುದು ಪತ್ತೆಯಾಗಿದೆ.
ಗೋವಾಕ್ಕೆ ತೆರಳುವ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಸ್ನೋಟಿಕರ್ ಅವರನ್ನು ಸಿಬ್ಬಂದಿಗಳು ಪರಿಶೀಲಿಸಿದಾಗ ಪಿಸ್ತೂಲ್ ಸಿಕ್ಕಿದೆ.
ಘಟನೆಯನಂತರ ಸಿಐಎಸ್ಎಫ್ ಸಿಬ್ಬಂದಿ ಅಸ್ನೋಟಿಕರ್ ಅವರನ್ನು ವಶಕ್ಕೆ ತೆಗೆದುಕೊಂಡರು ಮತ್ತು ತನಿಖೆ ಕೈಗೊಂಡಿದ್ದಾರೆ.
ಮಾಜಿ ಸಚಿವ ಅಸ್ನೋಟಿಕರ್ ಭದ್ರತಾ ಸಿಬ್ಬಂದಿಗೆ ತಮ್ಮಬಳಿ ಪಿಸ್ತೂಲಿನ ಪರವಾನಗಿ ಇರುವುದಾಗಿ ತಿಳಿಸಿದ್ದಾರೆ. ತಾನೊಬ್ಬ ಉದ್ಯಮಿಯಾಗಿದ್ದು ಆತ್ಮರಕ್ಷಣೆಗಾಗಿ ಪಿಸ್ತೂಲನ್ನು ಇರಿಸಿಕೊಂಡಿದ್ದಾಗಿ ವಿವರಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
