ಶಾಸಕರು, ಸಂಸದರು, ಅಧಿಕಾರಗಳ ವಿರುದ್ಧ ಪ್ರತಿಭಟನೆ, ಕಾಂಗ್ರೆಸ್ ಎಚ್ಚರಿಕೆ

ತಾಲೂಕಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿವೆ, ರಸ್ತೆಗಳ ಮೇಲೆ ಬೀಳುವ ಮರಗಳು, ರಸ್ತೆ ಮುಚ್ಚುವ ಗಿಡಗಂಟಿಗಳು ವಾಹನ ಚಾಲಕರಿಗೆ ಅಪಾಯವನ್ನುಂಟುಮಾಡುತಿದ್ದರೂ ನಿರ್ವಹಣೆ ಆಗುತ್ತಿಲ್ಲ. ಇಂಥ ಮೂಲಭೂತ ಅಗತ್ಯಗಳ ಪೂರೈಕೆಗೆಗೂ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಹೀಗಿದ್ದರೂ ಶಾಸಕರು, ಸಂಸದರು ಮಾತನಾಡುತ್ತಿಲ್ಲ ಯಾಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇಂದು ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಜನಸಾಮಾನ್ಯರಿಗೆ ಸ್ಫಂದಿಸದ ಅಧಿಕಾರಿಗಳು, ಸ್ಥಳಿಯ ಸಂಸದರು, ಶಾಸಕರ ವಿರುದ್ಧ ಮುಂದಿನ 15 ದಿವಸಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

  • ತಾಲೂಕಿನಲ್ಲಿ ಕಂದಾಯ ಇಲಾಖೆ, ಅರಣ್ಯ ಇಲಾಖೆ ನೌಕರರು ಜನಸಾಮಾನ್ಯರಿಗೆ ಕಿರುಕುಳ ನೀಡುತಿದ್ದಾರೆ. ಇವರಿಂದ ತೊಂದರೆಗೊಳಗಾಗುತ್ತಿರುವ ಕೃಷಿಕರು, ಜನಸಾಮಾನ್ಯರನ್ನು ರಕ್ಷಿಸಬೇಕಾದ ಸ್ಥಳಿಯ ಶಾಸಕರು, ಸಂಸದರು ಅಧಿಕಾರಿಗಳಂತೆ, ಅಧಿಕಾರಿಗಳೇ ಜನಪ್ರತಿನಿಧಿಗಳಂತೆ ವರ್ತಿಸುವುದು ನಾಚಿಕೆಗೇಡು, ತಾಲೂಕಿನ ಅನೇಕ ಸಮಸ್ಯೆಗಳು 15 ದಿವಸಗಳಲ್ಲಿ ಬಗೆಹರಿಯದಿದ್ದರೆ ಈ ವ್ಯವಸ್ಥೆಯ ವಿರುದ್ಧ ಉಗ್ರ ಪ್ರತಿಭಟನೆ ಮಾಡುತ್ತೇವೆ. – ವಸಂತ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
  • ಭೂಸುಧಾರಣೆ ಕಾನೂನು, ಎ.ಪಿ.ಎಂ. ಸಿ. ಕಾಯಿದೆಯಂಥ ರೈತ ವಿರೋಧಿ, ಜನವಿರೋಧಿ ಕಾನೂನುಗಳನ್ನು ತರುವ ಮೂಲಕ ರಾಜ್ಯ-ಕೇಂದ್ರ ಸರ್ಕಾರಗಳು ಜನವಿರೋಧಿ ಎಂದು ಸಾಬೀತು ಮಾಡುತ್ತಿವೆ.- ಎಸ್,ಆರ್. ಹೆಗಡೆ, ಕುಂಬಾರಕುಳಿ
    • ತಾಲೂಕಿನಲ್ಲಿ ಪ್ರವಾಹಪೀಡಿತ ಜನರನ್ನು ಕೇಳುವವರಿಲ್ಲ. ನೆರೆ ಪರಿಹಾರ, ಬೆಳೆ-ಕೊಳೆ ಪರಿಹಾರ ವಿತರಣೆಯಾಗುತ್ತಿಲ್ಲ. ತಾಲೂಕಿನಲ್ಲಿ ಆಡಳಿತ ಪಕ್ಷವೂ ಇಲ್ಲ, ವಿರೋಧಪಕ್ಷವೂ ಇಲ್ಲ ಎನ್ನುವ ಸ್ಥಿತಿಯಲ್ಲಿ ಈಗ ವಿರೋಧ ಪಕ್ಷದ ಜವಾಬ್ಧಾರಿಯನ್ನು ಸಮರ್ಪಕವಾಗಿ ನಿಭಾಯಿಸುತಿದ್ದೇವೆ. -ಸಿ.ಆರ್. ನಾಯ್ಕ
    • ತಾಲೂಕಿನಲ್ಲಿ ಸಾರಾಯಿ ಮಾರಾಟವನ್ನು ಪ್ರತಿಬಿಂಬಿಸಿ ರಾಜಕೀಯ ಲಾಭ ಪಡೆದ ಜನಪ್ರತಿನಿಧಿಗಳು ಈಗ ಹೆಂಡ,ಅಕ್ರಮ, ಅನೈತಿಕ ವ್ಯಹಾರಗಳ ಮೂಲಕ ಲಾಭ ಮಾಡುತಿದ್ದಾರೆ. ಸಿದ್ಧಾಪುರದ ರಸ್ತೆಗಳು, ಇಲ್ಲಿಯ ಅವ್ಯವಸ್ಥೆ 15 ದಿವಸಗಳ ಕಾಲಮಿತಿಯಲ್ಲಿ ಸರಿಯಾಗದಿದ್ದರೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸರ್ಕಾರದ ದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ -ವಸಂತ ನಾಯ್ಕ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *