ಅವಿಶ್ವಾಸ ನಿರ್ಣಯ: ಮತದಾನಕ್ಕೆಅವಕಾಶವಿಲ್ಲ- ಕಾಗೇರಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲದ ವಿರುದ್ಧ ಕಾಂಗ್ರೆಸ್ ಮಂಡಿಸಿರುವ ಅವಿಶ್ವಾಸ ನಿರ್ಣಯದ ಪ್ರಸ್ತಾವದ ಚರ್ಚೆಯ ನಂತರ ಧ್ವನಿ ಮತದ ಮೂಲಕ ನಿರ್ಧಾರ ಕೈಗೊಳ್ಳಲು ವಿಧಾನ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Speaker Kageri

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲದ ವಿರುದ್ಧ ಕಾಂಗ್ರೆಸ್ ಮಂಡಿಸಿರುವ ಅವಿಶ್ವಾಸ ನಿರ್ಣಯದ ಪ್ರಸ್ತಾವದ ಚರ್ಚೆಯ ನಂತರ ಧ್ವನಿ ಮತದ ಮೂಲಕ ನಿರ್ಧಾರ ಕೈಗೊಳ್ಳಲು ವಿಧಾನ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪಾಸಿಟಿವ್ ಬಂದಿರುವ ಶಾಸಕರನ್ನು ಸದನಕ್ಕೆ ಕರೆಸಲು ಸಾಧ್ಯವಿಲ್ಲದಿರುವ ಕಾರಣ ಮತದಾನಕ್ಕೆ ಅವಕಾಶವಿಲ್ಲ ಎಂದು ಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದರು. 

ಕೆಲವು ಸಚಿವರು ಹಾಗೂ ಶಾಸಕರು ಕೊರೊನಾ ಸೋಂಕಿಗೆ ಒಳಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದರಿಂದ ಅವಿಶ್ವಾಸ ನಿರ್ಣಯವನ್ನು ಮತ ವಿಭಜನೆಗೆ ಒತ್ತಾಯಿಸದೆ ಧ್ವನಿಮತದ ಮೂಲಕ ತೀರ್ಮಾನ ಕೈಗೊಳ್ಳಲು ವಿಧಾನಸಭೆಯಲ್ಲಿಂದು ಮತ ಸಮ್ಮತ ನಿರ್ಧಾರ ಕೈಗೊಳ್ಳಲಾಯಿತು. ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅವರು ಇಂದು ಸದನದಲ್ಲಿ ನಾಲ್ಕು ಮಸೂದೆಗಳ ಚರ್ಚೆ ಮತ್ತು ಅಂಗೀಕಾರವಾಗಬೇಕಾಗಿದೆ. ಹಾಗೆಯೇ ಮಹತ್ವದ ಅವಿಶ್ವಾಸ ನಿರ್ಣಯದ ಬಗ್ಗೆಯೂ ಚರ್ಚೆ ನಡೆಸಬೇಕಿದೆ ಎಂದಾಗ ಎದ್ದು ನಿಂತ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು, ನಾನು ಕಳೆದ ಗುರುವಾರ ಯಡಿಯೂರಪ್ಪ ನೇತೃತ್ವದ ಮಂತ್ರಿಮಂಡಲದ ಮೇಲೆ ಈ ಸದನ ವಿಶ್ವಾಸ ಕಳೆದುಕೊಂಡಿದೆ ಎಂಬ ನಿರ್ಣಯವನ್ನು ಮಂಡಿಸಿದೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕು ಎಂದರು.

ಆಗ ಸಭಾಧ್ಯಕ್ಷರು ಕಾರ್ಯಕಲಾಪ ಪಟ್ಟಿಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯನ್ನು ಸೇರಿಸಲಾಗಿದೆ. ಮಧ್ಯಾಹ್ನದ ನಂತರ ಚರ್ಚೆಗೆ ಅವಕಾಶ ಕೊಡುತ್ತೇನೆ ಮೊದಲು ಮಸೂದೆಗಳನ್ನು ಅಂಗೀಕರಿಸೋಣ ನಂತರ ಮಧ್ಯಾಹ್ನ 3 ಗಂಟೆಗೆ ಅವಿಶ್ವಾಸ ನಿರ್ಣಯದ ಚರ್ಚೆಯನ್ನ ಕೈಗೆತ್ತಿಕೊಳ್ಳುತ್ತೇನೆ ಎಂದರು. ಆದರೆ ಕೊರೊನಾ ಸೋಂಕಿಗೆ ಒಳಗಾಗಿರುವ ಸದಸ್ಯರನ್ನು ಸದನಕ್ಕೆ ಬಿಡಲು ಅವಕಾಶವಿಲ್ಲ. ಪಿಪಿಇ ಕಿಟ್ ಧರಿಸಿ ಕೊರೊನಾ ಸೋಂಕಿತ ಶಾಸಕರನ್ನು ಸದನಕ್ಕೆ ಕರೆ ತರಲು ಅವಕಾಶ ನೀಡುವುದಿಲ್ಲ. ಹೀಗೆ ಮಾಡುವುದು ಸರಿಯಲ್ಲ. 25ಕ್ಕೂ ಹೆಚ್ಚು ಶಾಸಕರು, 6-7 ಸಚಿವರಿಗೆ ಕೊರೊನಾ ಪಾಸಿಟಿವ್ ಇದೆ. ಇವರನ್ನು ಸದನಕ್ಕೆ ಬಿಟ್ಟುಕೊಳ್ಳುವುದು ಸೂಕ್ತವಲ್ಲ. ಸದನದ ಘನತೆ, ಗೌರವ ದೃಷ್ಟಿಯಿಂದ ಈ ರೀತಿ ಪಿಪಿಇ ಕಿಟ್ ಧರಿಸಿ ಬರುವುದು ಸರಿ ಎನಿಸುವುದಿಲ್ಲ. ಹಾಗಾಗಿ ವಿರೋಧ ಪಕ್ಷದ ನಾಯಕರುಗಳು ಮತ ವಿಭಜನೆಗೆ ಒತ್ತಾಯಿಸದೆ ಸಹಕರಿಸಬೇಕು ಎಂದರು.

ಇದಕ್ಕೆ ದ್ವನಿಗೂಡಿಸಿದ ಕಾನೂನು ಸಚಿವ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕರು ಮತ ವಿಭಜನೆಗೆ ಒತ್ತಾಯಿಸುತ್ತೇನೆ ಎಂದು ಹೇಳಿದರೆ, ನಾವು ನಮ್ಮ ಸದಸ್ಯರನ್ನು ಒಟ್ಟುಗೂಡಿಸಬೇಕಾಗುತ್ತದೆ. ಸೋಂಕಿತರನ್ನ ಪಿಪಿಇ ಕಿಟ್ ಹಾಕಿ ಕರೆತರುವ ಅನಿವಾರ್ಯ ತೀರ್ಮಾನವನ್ನು ಕೈಗೊಳ್ಳಬೇಕಾಗುತ್ತದೆ. ಹಾಗಾಗಿ ವಿರೋಧ ಪಕ್ಷದ ನಾಯಕರು ಮತ ವಿಭಜನೆಗೆ ಒತ್ತಾಯಿಸದೆ ಧ್ವನಿ ಮತದಿಂದ ಈ ನಿರ್ಣಯದ ಪರವಾಗಿ ತೀರ್ಮಾನಕ್ಕೆ ಅವಕಾಶ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಡಿಜೆ ಹಳ್ಳಿ ಗಲಭೆ ಬಗ್ಗೆ ನಿಯಮ 69ರ ಚರ್ಚೆಯೂ ಇದೆ. ಈ ವಿಚಾರವನ್ನು ಅವಿಶ್ವಾಸ ನಿರ್ಣಯದಲ್ಲಿ ಸೇರಿಸಿ ಮಾತನಾಡಬಹುದು. ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಯಾವುದೇ ಮಿತಿ ಇಲ್ಲ. ನಾವು ಉತ್ತರ ಕೊಡುತ್ತೇವೆ. ಮಧ್ಯಾಹ್ನ 3 ಗಂಟೆ ನಂತರ ಚರ್ಚೆ ಕೈಗೆತ್ತಿಕೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ ಮತ ವಿಭಜನೆಗೆ ಒತ್ತಾಯಿಸದೆ ವಿರೋಧ ಪಕ್ಷದ ನಾಯಕರು ಸಹಕರಿಸಬೇಕು ಎಂದು ಮತ್ತೊಮ್ಮೆ ಮಾಧುಸ್ವಾಮಿ ಅವರು ಮನವಿ ಮಾಡಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *