ಅವಿಶ್ವಾಸ ನಿರ್ಣಯ: ಮತದಾನಕ್ಕೆಅವಕಾಶವಿಲ್ಲ- ಕಾಗೇರಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲದ ವಿರುದ್ಧ ಕಾಂಗ್ರೆಸ್ ಮಂಡಿಸಿರುವ ಅವಿಶ್ವಾಸ ನಿರ್ಣಯದ ಪ್ರಸ್ತಾವದ ಚರ್ಚೆಯ ನಂತರ ಧ್ವನಿ ಮತದ ಮೂಲಕ ನಿರ್ಧಾರ ಕೈಗೊಳ್ಳಲು ವಿಧಾನ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Speaker Kageri

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲದ ವಿರುದ್ಧ ಕಾಂಗ್ರೆಸ್ ಮಂಡಿಸಿರುವ ಅವಿಶ್ವಾಸ ನಿರ್ಣಯದ ಪ್ರಸ್ತಾವದ ಚರ್ಚೆಯ ನಂತರ ಧ್ವನಿ ಮತದ ಮೂಲಕ ನಿರ್ಧಾರ ಕೈಗೊಳ್ಳಲು ವಿಧಾನ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪಾಸಿಟಿವ್ ಬಂದಿರುವ ಶಾಸಕರನ್ನು ಸದನಕ್ಕೆ ಕರೆಸಲು ಸಾಧ್ಯವಿಲ್ಲದಿರುವ ಕಾರಣ ಮತದಾನಕ್ಕೆ ಅವಕಾಶವಿಲ್ಲ ಎಂದು ಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದರು. 

ಕೆಲವು ಸಚಿವರು ಹಾಗೂ ಶಾಸಕರು ಕೊರೊನಾ ಸೋಂಕಿಗೆ ಒಳಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದರಿಂದ ಅವಿಶ್ವಾಸ ನಿರ್ಣಯವನ್ನು ಮತ ವಿಭಜನೆಗೆ ಒತ್ತಾಯಿಸದೆ ಧ್ವನಿಮತದ ಮೂಲಕ ತೀರ್ಮಾನ ಕೈಗೊಳ್ಳಲು ವಿಧಾನಸಭೆಯಲ್ಲಿಂದು ಮತ ಸಮ್ಮತ ನಿರ್ಧಾರ ಕೈಗೊಳ್ಳಲಾಯಿತು. ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅವರು ಇಂದು ಸದನದಲ್ಲಿ ನಾಲ್ಕು ಮಸೂದೆಗಳ ಚರ್ಚೆ ಮತ್ತು ಅಂಗೀಕಾರವಾಗಬೇಕಾಗಿದೆ. ಹಾಗೆಯೇ ಮಹತ್ವದ ಅವಿಶ್ವಾಸ ನಿರ್ಣಯದ ಬಗ್ಗೆಯೂ ಚರ್ಚೆ ನಡೆಸಬೇಕಿದೆ ಎಂದಾಗ ಎದ್ದು ನಿಂತ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು, ನಾನು ಕಳೆದ ಗುರುವಾರ ಯಡಿಯೂರಪ್ಪ ನೇತೃತ್ವದ ಮಂತ್ರಿಮಂಡಲದ ಮೇಲೆ ಈ ಸದನ ವಿಶ್ವಾಸ ಕಳೆದುಕೊಂಡಿದೆ ಎಂಬ ನಿರ್ಣಯವನ್ನು ಮಂಡಿಸಿದೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕು ಎಂದರು.

ಆಗ ಸಭಾಧ್ಯಕ್ಷರು ಕಾರ್ಯಕಲಾಪ ಪಟ್ಟಿಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯನ್ನು ಸೇರಿಸಲಾಗಿದೆ. ಮಧ್ಯಾಹ್ನದ ನಂತರ ಚರ್ಚೆಗೆ ಅವಕಾಶ ಕೊಡುತ್ತೇನೆ ಮೊದಲು ಮಸೂದೆಗಳನ್ನು ಅಂಗೀಕರಿಸೋಣ ನಂತರ ಮಧ್ಯಾಹ್ನ 3 ಗಂಟೆಗೆ ಅವಿಶ್ವಾಸ ನಿರ್ಣಯದ ಚರ್ಚೆಯನ್ನ ಕೈಗೆತ್ತಿಕೊಳ್ಳುತ್ತೇನೆ ಎಂದರು. ಆದರೆ ಕೊರೊನಾ ಸೋಂಕಿಗೆ ಒಳಗಾಗಿರುವ ಸದಸ್ಯರನ್ನು ಸದನಕ್ಕೆ ಬಿಡಲು ಅವಕಾಶವಿಲ್ಲ. ಪಿಪಿಇ ಕಿಟ್ ಧರಿಸಿ ಕೊರೊನಾ ಸೋಂಕಿತ ಶಾಸಕರನ್ನು ಸದನಕ್ಕೆ ಕರೆ ತರಲು ಅವಕಾಶ ನೀಡುವುದಿಲ್ಲ. ಹೀಗೆ ಮಾಡುವುದು ಸರಿಯಲ್ಲ. 25ಕ್ಕೂ ಹೆಚ್ಚು ಶಾಸಕರು, 6-7 ಸಚಿವರಿಗೆ ಕೊರೊನಾ ಪಾಸಿಟಿವ್ ಇದೆ. ಇವರನ್ನು ಸದನಕ್ಕೆ ಬಿಟ್ಟುಕೊಳ್ಳುವುದು ಸೂಕ್ತವಲ್ಲ. ಸದನದ ಘನತೆ, ಗೌರವ ದೃಷ್ಟಿಯಿಂದ ಈ ರೀತಿ ಪಿಪಿಇ ಕಿಟ್ ಧರಿಸಿ ಬರುವುದು ಸರಿ ಎನಿಸುವುದಿಲ್ಲ. ಹಾಗಾಗಿ ವಿರೋಧ ಪಕ್ಷದ ನಾಯಕರುಗಳು ಮತ ವಿಭಜನೆಗೆ ಒತ್ತಾಯಿಸದೆ ಸಹಕರಿಸಬೇಕು ಎಂದರು.

ಇದಕ್ಕೆ ದ್ವನಿಗೂಡಿಸಿದ ಕಾನೂನು ಸಚಿವ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕರು ಮತ ವಿಭಜನೆಗೆ ಒತ್ತಾಯಿಸುತ್ತೇನೆ ಎಂದು ಹೇಳಿದರೆ, ನಾವು ನಮ್ಮ ಸದಸ್ಯರನ್ನು ಒಟ್ಟುಗೂಡಿಸಬೇಕಾಗುತ್ತದೆ. ಸೋಂಕಿತರನ್ನ ಪಿಪಿಇ ಕಿಟ್ ಹಾಕಿ ಕರೆತರುವ ಅನಿವಾರ್ಯ ತೀರ್ಮಾನವನ್ನು ಕೈಗೊಳ್ಳಬೇಕಾಗುತ್ತದೆ. ಹಾಗಾಗಿ ವಿರೋಧ ಪಕ್ಷದ ನಾಯಕರು ಮತ ವಿಭಜನೆಗೆ ಒತ್ತಾಯಿಸದೆ ಧ್ವನಿ ಮತದಿಂದ ಈ ನಿರ್ಣಯದ ಪರವಾಗಿ ತೀರ್ಮಾನಕ್ಕೆ ಅವಕಾಶ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಡಿಜೆ ಹಳ್ಳಿ ಗಲಭೆ ಬಗ್ಗೆ ನಿಯಮ 69ರ ಚರ್ಚೆಯೂ ಇದೆ. ಈ ವಿಚಾರವನ್ನು ಅವಿಶ್ವಾಸ ನಿರ್ಣಯದಲ್ಲಿ ಸೇರಿಸಿ ಮಾತನಾಡಬಹುದು. ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಯಾವುದೇ ಮಿತಿ ಇಲ್ಲ. ನಾವು ಉತ್ತರ ಕೊಡುತ್ತೇವೆ. ಮಧ್ಯಾಹ್ನ 3 ಗಂಟೆ ನಂತರ ಚರ್ಚೆ ಕೈಗೆತ್ತಿಕೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ ಮತ ವಿಭಜನೆಗೆ ಒತ್ತಾಯಿಸದೆ ವಿರೋಧ ಪಕ್ಷದ ನಾಯಕರು ಸಹಕರಿಸಬೇಕು ಎಂದು ಮತ್ತೊಮ್ಮೆ ಮಾಧುಸ್ವಾಮಿ ಅವರು ಮನವಿ ಮಾಡಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *