ರಾಜ್ಯದಲ್ಲಿ ತೀವ್ರಗೊಂಡ ರೈತರ ಕಿಚ್ಚು: ಏರ್’ಪೋರ್ಟ್ ಗೆ ಮುತ್ತಿಗೆ, ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ  ಸೋಮವಾರ ಕರ್ನಾಟಕ ಬಂದ್ ಮಾಡಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ. 

Karnataka Rakshana Vedike protest

ಬೆಂಗಳೂರು: ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ  ಸೋಮವಾರ ಕರ್ನಾಟಕ ಬಂದ್ ಮಾಡಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ. 

ಮೆಜೆಸ್ಟಿಕ್ ಹಾಗೂ ಬೆಂಗಳೂರು ರೈಲ್ವೇ ನಿಲ್ದಾಣ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕನ್ನಡಪರ, ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು ಕೆಂಪೇಗೌಡ ರೈಲು ನಿಲ್ದಾಣಕ್ಕೆ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. 

ಈ ವೇಳೆ ಇದಕ್ಕೆ ಪೊಲೀಸರು ತಡೆಯೊಡ್ಡಿದ್ದು, ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಈ ನಡುವೆ ವಿವಿಧ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯುತ್ತಿರುವ ವರದಿಗಳು ಬಂದಿವೆ.

ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಬೆಂಗಳೂರು ರೈಲ್ವೆ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತ ವಿರೋಧಿ ಮಸೂದೆಗಳನ್ನು ಸರ್ಕಾರ ಹಿಂಪಡೆಯಬಹುದು ಎಂಬ ನಿರೀಕ್ಷೆಯನ್ನು ಸರ್ಕಾರ ಹುಸಿಗೊಳಿಸಿದೆ. ಈ ಧೋರಣೆಯನ್ನು ವಿರೋಧಿಸಿ, ಉಗ್ರ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಬೇಡಿಕೆ ಈಡೇರುವ ತನಕ ಹೋರಾಟ ನಿಲ್ಲುವುದಿಲ್ಲ ತಿಳಿಸಿದ್ದಾರೆ.

ಕರವೇ ಕಾರ್ಯಕರ್ತರಿಂದ ಏರ್ ಪೋರ್ಟ್ ಗೆ ಮುತ್ತಿಗೆ, ಬಿಗಿಭದ್ರತೆ
ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರೈತ ಮತ್ತು ಹಲವು ಕನ್ನಡಪರ ಸಂಘಟನೆಗಳು ಸಾಥ್ ನೀಡಿವೆ.

ಪ್ರತಿಭಟನೆ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರೈತರಿಗಾಗಿ ಜೈಲಿಗೆ ಹೋಗಲು ಸಿದ್ದ ಎಂದು ರೈತ ಮುಖಂಡರು ಹೇಳಿದ್ದಾರೆ. ಪ್ರತಿಭಟನಾಕಾರನ್ನು ಕರೆದುಕೊಂಡು ಪೊಲೀಸರು 400 ಬಿಎಂಟಿಸಿ ಬಸ್ ಸಿದ್ದ ಮಾಡಿಕೊಂಡಿದ್ದಾರೆ.

ಕರವೇ ಕಾರ್ಯಕರ್ತರು ಇಂದು ಬೆಳ್ಳಂಬೆಳಗ್ಗೆ ಏರ್ಪೋರ್ಟ್ಗೆ ಮುತ್ತಿಗೆ ಹಾಕಲು ಮುಂದಾಗಿದ್ದು ಈ ವೇಳೆ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.

ಸಿಲಿಕಾನ್ ಸಿಟಿ ರಸ್ತೆಗಿಳಿದ 5,000 ರೈತರು: ಸರ್ಕಾರದ ವಿರುದ್ಧ ಆಕ್ರೋಶ, ಹಲವರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರಿನಲ್ಲಿ ರೈತ ಸಂಘಟನೆಗಳು ನೀಡಿದ ಕರ್ನಾಟಕ ಬಂದ್‌ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಟೌನ್‌ಹಾಲ್‌ ಬಳಿ ಆಯೋಜಿಸಲಾದ ಪ್ರತಿಭಟನೆಗೆ ಭಾರೀ ಸಂಖ್ಯೆಯಲ್ಲಿ ಪ್ರತಿಭನಕಾರರು ಆಗಮಿಸಿದ್ದಾರೆ. ರೈತ ಸಂಘ, ಹಸಿರು ಸೇನೆ, ಕನ್ನಡ ಪರ ಸಂಘಟನೆಗಳು ಸೇರಿ ಇನ್ನಿತರ ಸಂಘಟನೆಗಳು ಒಟ್ಟಿಗೆ ಸೇರಿಕೊಂಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಟೌನ್‌ಹಾಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ವಾಹನ ಸಂಚಾರಕ್ಕೆ ಭಾರೀ ಸಮಸ್ಯೆಗಳು ಎದುರಾಗಿದ್ದು, ಹಲವೆಡೆ ಸಂಫುರ್ಣವಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕೆಲ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *