ಕಾರವಾರ: ಅಂತರ್ಜಾಲ ಸೇವೆಯಿಂದ ವಂಚಿತ ಗ್ರಾಮದ ವಿದ್ಯಾರ್ಥಿಗಳಿಗೆ ನೆರವಾದ ಯುವಕ!

ಈ ಡಿಜಿಟಲ್ ಯುಗದಲ್ಲಿಯೂ ಅಂತರ್ಜಾಲ ಸೇವೆಯಿಂದ ವಂಚಿತವಾಗಿರುವ ಅದೆಷ್ಟೋ ಗ್ರಾಮಗಳಿವೆ. ಅಂತಹ ಗ್ರಾಮಗಳ ಪೈಕಿ ಕಾರವಾರದ ವೈಲ್ವಾಡ  ಗ್ರಾಮವೂ ಒಂದು. 

Sagar Naik

ಕಾರವಾರ: ಈ ಡಿಜಿಟಲ್ ಯುಗದಲ್ಲಿಯೂ ಅಂತರ್ಜಾಲ ಸೇವೆಯಿಂದ ವಂಚಿತವಾಗಿರುವ ಅದೆಷ್ಟೋ ಗ್ರಾಮಗಳಿವೆ. ಅಂತಹ ಗ್ರಾಮಗಳ ಪೈಕಿ ಕಾರವಾರದ ವೈಲ್ವಾಡ  ಗ್ರಾಮವೂ ಒಂದು. 

ಈ ಗ್ರಾಮದಲ್ಲಿರುವ ವಿದ್ಯಾರ್ಥಿಗಳಿಗೆ ಅಂತರ್ಜಾಲವಿರಲಿ ಮೊಬೈಲ್ ನೆಟ್ವರ್ಕ್ ಸರಿಯಾಗಿ ದೊರೆಯುವುದೂ ಕಷ್ಟ ಸಾಧ್ಯ. ಹೀಗಿರುವಾಗ ಕೋವಿಡ್-19 ಪರಿಸ್ಥಿತಿಯಲ್ಲಿ ಆನ್ ಲೈನ್ ತರಗತಿಗಳನ್ನು ತಪ್ಪಿಸಿಕೊಳ್ಳುವಂತಿರಲಿಲ್ಲ.  https://m.youtube.com/watch?v=1S-j754l4qM&t=32s

ಅಭಿಷೇಕ್ ನಾಯ್ಕ್ ಎಂಬ 7 ನೇ ತರಗತಿಯ ವಿದ್ಯಾರ್ಥಿ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಕಾರವಾರದ ಬಳಿ ಇರುವ ತಮ್ಮ ಸಂಬಂಧಿಕರ ಮನೆಗೆ ಬರಬೇಕಿತ್ತು. ಇದು ಈ ವಿದ್ಯಾರ್ಥಿಯ ಪರಿಸ್ಥಿತಿಯಷ್ಟೇ ಅಲ್ಲದೇ ವೈಲ್ವಾಡ, ಬೊಡ್ಜುಗ್ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿರುವ ಅನೇಕ ವಿದ್ಯಾರ್ಥಿಗಳ ಸ್ಥಿತಿಯೂ ಆಗಿತ್ತು.  https://m.youtube.com/watch?v=5o3h3H7WV9Q&t=340s

ಆದರೆ ಗಿರಿಜಾಬಾಯಿ ಸೈಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿರುವ ಸಾಗರ್ ನಾಯ್ಕ್ ತಮ್ಮ ಮನೆಯಲ್ಲಿರುವ ಖಾಸಗಿ ಬ್ರಾಡ್ ಬ್ಯಾಂಡ್ ನ ಇಂಟರ್ ನೆಟ್ ಕನೆಕ್ಷನ್ ನಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ ನೆಟ್ ಸೌಲಭ್ಯ ಕಲ್ಪಿಸುತ್ತಿದ್ದಾರೆ. ಅಂದರೆ ಗ್ರಾಮದ ವಿದ್ಯಾರ್ಥಿಗಳಿಗೆ ತಮ್ಮ ಇಂಟರ್ ನೆಟ್ ಸಂಪರ್ಕದ ಪಾಸ್ವರ್ಡ್ ನೀಡಿದ್ದಾರೆ. ಈ ಮೂಲಕ ಸಾಗರ್ ನಾಯ್ಕ್ ಮನೆಯಲ್ಲಿ ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಇಲ್ಲದೇ ಆನ್ ಲೈನ್ ತರಗತಿಗಳಿಗೆ ಹಾಜರಾಗಬಹುದಾಗಿದೆ 

ಕೋವಿಡ್-19 ಕಾರಣದಿಂದಾಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ನಡೆಸುತ್ತಿವೆ. ಇಲ್ಲಿನ ವಿದ್ಯಾರ್ಥಿಗಳು ಅಡೆತಡೆ ಇಲ್ಲದೇ ತರಗತಿಗಳಿಗೆ ಹಾಜರಾಗಬೇಕು ಎಂದು ಬಯಸಿದೆ. ನನ್ನ ಮನೆಯಲ್ಲಿರುವ ಇಂಟರ್ ನೆಟ್ ನ್ನು ಅವರಿಗೆ ಉಚಿತವಾಗಿ ನೀಡುವಂತೆ ಮಾಡಿದೆ ಎಂದು ಸಾಗರ್ ನಾಯ್ಕ್ ಹೇಳುತ್ತಾರೆ. 

ಶಾಲೆಗಳಿಂದ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳ ವರೆಗೆ ಎಲ್ಲರಿಗೂ ಸಾಗರ್ ನಾಯ್ಕ್ ಮನೆಯಲ್ಲಿರುವ ಅಂತರ್ಜಾಲ ಅತ್ಯಂತ ಉಪಯುಕ್ತವಾಗಿದೆ. 

“ಗ್ರಾಮೀಣ ಭಾಗ ಹಾಗೂ ನಗರ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಲಭ್ಯತೆಯಲ್ಲಿ ಈಗಲೂ ಬಹಳ ವ್ಯತ್ಯಾಸವಿದೆ. ಸಿದ್ದಾರ್ ಗ್ರಾಮ ಹಾಗೂ ದೇವರಮಕ್ಕಿ ಗ್ರಾಮಗಳ ನಡುವೆ ಅಂತರ್ಜಾಲ ಸೇವೆಯೇ ಇಲ್ಲ. ಈ ಮಧ್ಯೆ ನದಿ ಹರಿಯುತ್ತಿದೆ.  ವೈಲ್ವಾಡ 100 ಮನೆಗಳಿರುವ ಗ್ರಾಮವಾಗಿದೆ. 

ಅಂತರ್ಜಾಲ ಸೇವೆ ಪಡೆಯಲು ಹೆಚ್ಚು ಹಣ ನೀಡಿ ಸುಮಾರು 1 ಕಿ.ಮೀ ದೂರದಿಂದ ಕೇಬಲ್ ಎಳೆಸಲಾಗಿದೆ. ಇಲ್ಲಿ ಅಂತರ್ಜಾಲ ಸೇವೆ ಇರುವ ಏಕೈಕ ಮನೆ ನಮ್ಮದು,  ವಿದ್ಯಾರ್ಥಿಗಳ ಕಷ್ಟವನ್ನು ಅರ್ಥಮಾಡಿಕೊಂಡು ಸಹಕಾರ ನೀಡುತ್ತಿರುವುದಕ್ಕೆ ಸಂತಸವಿದೆ ಎನ್ನುತ್ತಾರೆ ವೈಲ್ವಾಡಾ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಸನತ್ ನಾಯ್ಕ್. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *