siddapur local express-ಎಂ.ಆರ್. ನಾಯ್ಕ ಕೆಳಗಿನಸಶಿ ಅಧ್ಯಕ್ಷರಾಗಿ ಆಯ್ಕೆ

ಸಿದ್ದಾಪುರ – 28 : ನಿವೃತ್ತ ಸೈನಿಕರ ಸಂಘ ಸಿದ್ದಾಪುರ ತಾಲೂಕಾ ಘಟಕಕ್ಕೆ ನಿವೃತ್ತ ಸೇನಾ ಸುಬೇದಾರ ಎಂ.ಆರ್. ನಾಯ್ಕ ಕೆಳಗಿನಸಶಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಉಪಾಧ್ಯಕ್ಷರಾಗಿ ಗೌರವ ಕ್ಯಾಪ್ಟನ್ ರಾಜೇಶ ನಾಯ್ಕ, ಕಾರ್ಯದರ್ಶಿಯಾಗಿ ನಾಯಬ್ ಸುಭೇದಾರ ಕುಮಾರ ಗೌಡರ್ ಸಿದ್ದಾಪುರ, ಜೊತೆ ಕಾರ್ಯದರ್ಶಿಯಾಗಿ ಸುಬೇದಾರ ಸಂತೋಷಕುಮಾರ ಅವರು ಆಯ್ಕೆ ಹೊಂದಿದ್ದಾರೆ.
ಈ ಸಂದರ್ಭದಲ್ಲಿ, ನಿವೃತ್ತ ಸೇನಾ ಸಿಬ್ಬಂದಿ, ವಿ.ಎಸ್. ಹೆಗಡೆ ಕಾನಗೋಡ (ಜಂಟೀ ನಿರ್ದೇಶಕರು ಕೈಗಾರಿಕಾ ಇಲಾಖೆ, ಹಾಸನ) ರವರ ನಿಧನಕ್ಕೆ ಸಂತಾಪ ಕೋರಲಾಯಿತು.

ಹಳ್ಳಿಬೈಲು : ಲಯನ್ಸದಿಂದ 80 ಕುಟುಂಬಗಳಿಗೆ ಪರಿಹಾರ ಕಿಟ್
ಸಿದ್ದಾಪುರ-28 : ತಾಲೂಕಿನ ಚಪ್ಪರಮನೆ ಸೋವಿನಕೊಪ್ಪ ಭಾಗದಲ್ಲಿ ಅತಿವೃಷ್ಠಿಯಿಂದ ಹಾನಿಗಳೊಗಾದ 80 ಕುಟುಂಬಗಳಿಗೆ ಬಟ್ಟೆ, ಔಷಧಿ ಮತ್ತು ಆರೋಗ್ಯ ರಕ್ಷಕ ಪರಿಕರ ಹಾಗೂ ದವಸಧಾನ್ಯಗಳನ್ನು ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆ ಜಿಲ್ಲೆ 317 ರ ಪರವಾಗಿ ಸಿದ್ದಾಪುರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಹಳ್ಳಿಬೈಲ್ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ವಿತರಿಸಲಾಯಿತು.
ಲಯನ್ಸ್ ಜಿಲ್ಲಾ ಗವರ್ನರ್ ಡಾ. ಗಿರೀಶ ಕುಚ್ಚಿನಾಡ್ ಕಿಟ್ ವಿತರಿಸಿ ಮಾತನಾಡಿ – ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯು ಅತಿವೃಷ್ಠಿಯಿಂದ ಹಾನಿಗೊಳಗಾದವರಿಗೆ, ಆರ್ಥಿಕ ಸಹಾಯ ನೀಡಿದ್ದು, ಇದರೊಂದಿಗೆ ಲಯನ್ಸ್ ಜಿಲ್ಲೆಯ ಆರ್ಥಿಕ ನೆರವನ್ನು ಸೇರಿಸಿ 600 ಕುಟುಂಬಗಳಿಗೆ ಪರಿಹಾರ ಕಿಟ್‍ಗಳನ್ನು ವಿತರಿಸಲು ನಿರ್ಧರಿಸಿದ್ದು, ಸಿದ್ದಾಪುರ ತಾಲೂಕಿನಲ್ಲಿಯೂ ಸಹಕರಿಸಲಾಗಿದೆ. ಇದೊಂದು ತುರ್ತು ಪರಿಹಾರ ನೆರವಾಗಿದೆ. ಜನಸಮುದಾಯ ಕಷ್ಟದಿಂದ ಮೇಲೆ ಬರಲು ಸಾರ್ವಜನಿಕ ಸಹಯೋಗ ಅಗತ್ಯ ಎಂದರು.

ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಡಾ. ರವಿ ಹೆಗಡೆ ಹೂವಿನಮನೆ ಮಾತನಾಡಿ – ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆ ವಿಶ್ವದ ಅನೇಕ ಕಡೆ ತುರ್ತು ಪರಿಹಾರ ಕಾರ್ಯಗಳಲ್ಲಿ ನೆರವಾಗಿದೆ. ಕೋವಿಡ್-19 ನೆರವಿಗಾಗಿ ಕೋಟ್ಯಾಂತರ ರೂಪಾಯಿಗಳ ನೆರವನ್ನು ನಮ್ಮ ದೇಶಕ್ಕೂ ನೀಡಿದೆ. ಆರೋಗ್ಯ ಹಾಗೂ ಶಿಕ್ಷಣ ಸೇವೆಗಾಗಿ, ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಸದಾ ಆರ್ಥಿಕ ಸಹಾಯವನ್ನು ನೀಡುತ್ತಿದೆ ಎಂದು ಹೇಳಿ ಪರಿಹಾರ ಕಿಟ್‍ಗಳನ್ನು ವಿತರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷೆ ಶ್ಯಾಮಲಾ ರವಿ ಹೆಗಡೆ ಹೂವಿನಮನೆ ಮಾತನಾಡಿ – ಆರೋಗ್ಯ ರಕ್ಷಣೆ ಮುಖ್ಯವಾದ ವಿಚಾರ. ಸ್ವಚ್ಛ ಪರಿಸರವನ್ನು ಕಾಯ್ದುಕೊಂಡು ಆರೋಗ್ಯ ನಿಯಮವನ್ನು ಪಾಲನೆ ಮಾಡಿಕೊಂಡು ಬರುವಂತೆ ಸೂಚಿಸಿ ನೆರವನ್ನು ವಿತರಿಸಿದರು.
ವೇದಿಕೆಯಲ್ಲಿ ಸಾಮಾಜಿಕ ಕಾರ್ಯಕರ್ತ ಗಜಾನನ ಹೆಗಡೆ ಮುಟ್ಟೇರ್ಮನೆ, ನ್ಯಾಯವಾದಿ ಎಂ.ಎನ್. ಹೆಗಡೆ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಂದ್ರು ನಾಯ್ಕ, ಸಾಮಾಜಿಕ ಕಾರ್ಯಕರ್ತ ಗಿರೀಶ ಶೇಟ್, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ನಾಗರಾಜ ಎಂ. ದೋಶೆಟ್ಟಿ, ಕೋಶಾಧ್ಯಕ್ಷ ಪ್ರಶಾಂತ ಡಿ. ಶೇಟ್ ಹಾಳದಕಟ್ಟಾ ಉಪಸ್ಥಿತರಿದ್ದು.
ಪ್ರೌಢಶಾಲಾ ಶಿಕ್ಷಕ ಗಣೇಶ ಹೆಗಡೆ ಸ್ವಾಗತಿಸಿ ನಿರೂಪಿಸಿದರು. ಜಿ.ಜಿ. ಹೆಗಡೆ ಬಾಳಗೋಡ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *