siddapur local express-ಎಂ.ಆರ್. ನಾಯ್ಕ ಕೆಳಗಿನಸಶಿ ಅಧ್ಯಕ್ಷರಾಗಿ ಆಯ್ಕೆ

ಸಿದ್ದಾಪುರ – 28 : ನಿವೃತ್ತ ಸೈನಿಕರ ಸಂಘ ಸಿದ್ದಾಪುರ ತಾಲೂಕಾ ಘಟಕಕ್ಕೆ ನಿವೃತ್ತ ಸೇನಾ ಸುಬೇದಾರ ಎಂ.ಆರ್. ನಾಯ್ಕ ಕೆಳಗಿನಸಶಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಉಪಾಧ್ಯಕ್ಷರಾಗಿ ಗೌರವ ಕ್ಯಾಪ್ಟನ್ ರಾಜೇಶ ನಾಯ್ಕ, ಕಾರ್ಯದರ್ಶಿಯಾಗಿ ನಾಯಬ್ ಸುಭೇದಾರ ಕುಮಾರ ಗೌಡರ್ ಸಿದ್ದಾಪುರ, ಜೊತೆ ಕಾರ್ಯದರ್ಶಿಯಾಗಿ ಸುಬೇದಾರ ಸಂತೋಷಕುಮಾರ ಅವರು ಆಯ್ಕೆ ಹೊಂದಿದ್ದಾರೆ.
ಈ ಸಂದರ್ಭದಲ್ಲಿ, ನಿವೃತ್ತ ಸೇನಾ ಸಿಬ್ಬಂದಿ, ವಿ.ಎಸ್. ಹೆಗಡೆ ಕಾನಗೋಡ (ಜಂಟೀ ನಿರ್ದೇಶಕರು ಕೈಗಾರಿಕಾ ಇಲಾಖೆ, ಹಾಸನ) ರವರ ನಿಧನಕ್ಕೆ ಸಂತಾಪ ಕೋರಲಾಯಿತು.

ಹಳ್ಳಿಬೈಲು : ಲಯನ್ಸದಿಂದ 80 ಕುಟುಂಬಗಳಿಗೆ ಪರಿಹಾರ ಕಿಟ್
ಸಿದ್ದಾಪುರ-28 : ತಾಲೂಕಿನ ಚಪ್ಪರಮನೆ ಸೋವಿನಕೊಪ್ಪ ಭಾಗದಲ್ಲಿ ಅತಿವೃಷ್ಠಿಯಿಂದ ಹಾನಿಗಳೊಗಾದ 80 ಕುಟುಂಬಗಳಿಗೆ ಬಟ್ಟೆ, ಔಷಧಿ ಮತ್ತು ಆರೋಗ್ಯ ರಕ್ಷಕ ಪರಿಕರ ಹಾಗೂ ದವಸಧಾನ್ಯಗಳನ್ನು ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆ ಜಿಲ್ಲೆ 317 ರ ಪರವಾಗಿ ಸಿದ್ದಾಪುರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಹಳ್ಳಿಬೈಲ್ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ವಿತರಿಸಲಾಯಿತು.
ಲಯನ್ಸ್ ಜಿಲ್ಲಾ ಗವರ್ನರ್ ಡಾ. ಗಿರೀಶ ಕುಚ್ಚಿನಾಡ್ ಕಿಟ್ ವಿತರಿಸಿ ಮಾತನಾಡಿ – ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯು ಅತಿವೃಷ್ಠಿಯಿಂದ ಹಾನಿಗೊಳಗಾದವರಿಗೆ, ಆರ್ಥಿಕ ಸಹಾಯ ನೀಡಿದ್ದು, ಇದರೊಂದಿಗೆ ಲಯನ್ಸ್ ಜಿಲ್ಲೆಯ ಆರ್ಥಿಕ ನೆರವನ್ನು ಸೇರಿಸಿ 600 ಕುಟುಂಬಗಳಿಗೆ ಪರಿಹಾರ ಕಿಟ್‍ಗಳನ್ನು ವಿತರಿಸಲು ನಿರ್ಧರಿಸಿದ್ದು, ಸಿದ್ದಾಪುರ ತಾಲೂಕಿನಲ್ಲಿಯೂ ಸಹಕರಿಸಲಾಗಿದೆ. ಇದೊಂದು ತುರ್ತು ಪರಿಹಾರ ನೆರವಾಗಿದೆ. ಜನಸಮುದಾಯ ಕಷ್ಟದಿಂದ ಮೇಲೆ ಬರಲು ಸಾರ್ವಜನಿಕ ಸಹಯೋಗ ಅಗತ್ಯ ಎಂದರು.

ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಡಾ. ರವಿ ಹೆಗಡೆ ಹೂವಿನಮನೆ ಮಾತನಾಡಿ – ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆ ವಿಶ್ವದ ಅನೇಕ ಕಡೆ ತುರ್ತು ಪರಿಹಾರ ಕಾರ್ಯಗಳಲ್ಲಿ ನೆರವಾಗಿದೆ. ಕೋವಿಡ್-19 ನೆರವಿಗಾಗಿ ಕೋಟ್ಯಾಂತರ ರೂಪಾಯಿಗಳ ನೆರವನ್ನು ನಮ್ಮ ದೇಶಕ್ಕೂ ನೀಡಿದೆ. ಆರೋಗ್ಯ ಹಾಗೂ ಶಿಕ್ಷಣ ಸೇವೆಗಾಗಿ, ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಸದಾ ಆರ್ಥಿಕ ಸಹಾಯವನ್ನು ನೀಡುತ್ತಿದೆ ಎಂದು ಹೇಳಿ ಪರಿಹಾರ ಕಿಟ್‍ಗಳನ್ನು ವಿತರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷೆ ಶ್ಯಾಮಲಾ ರವಿ ಹೆಗಡೆ ಹೂವಿನಮನೆ ಮಾತನಾಡಿ – ಆರೋಗ್ಯ ರಕ್ಷಣೆ ಮುಖ್ಯವಾದ ವಿಚಾರ. ಸ್ವಚ್ಛ ಪರಿಸರವನ್ನು ಕಾಯ್ದುಕೊಂಡು ಆರೋಗ್ಯ ನಿಯಮವನ್ನು ಪಾಲನೆ ಮಾಡಿಕೊಂಡು ಬರುವಂತೆ ಸೂಚಿಸಿ ನೆರವನ್ನು ವಿತರಿಸಿದರು.
ವೇದಿಕೆಯಲ್ಲಿ ಸಾಮಾಜಿಕ ಕಾರ್ಯಕರ್ತ ಗಜಾನನ ಹೆಗಡೆ ಮುಟ್ಟೇರ್ಮನೆ, ನ್ಯಾಯವಾದಿ ಎಂ.ಎನ್. ಹೆಗಡೆ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಂದ್ರು ನಾಯ್ಕ, ಸಾಮಾಜಿಕ ಕಾರ್ಯಕರ್ತ ಗಿರೀಶ ಶೇಟ್, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ನಾಗರಾಜ ಎಂ. ದೋಶೆಟ್ಟಿ, ಕೋಶಾಧ್ಯಕ್ಷ ಪ್ರಶಾಂತ ಡಿ. ಶೇಟ್ ಹಾಳದಕಟ್ಟಾ ಉಪಸ್ಥಿತರಿದ್ದು.
ಪ್ರೌಢಶಾಲಾ ಶಿಕ್ಷಕ ಗಣೇಶ ಹೆಗಡೆ ಸ್ವಾಗತಿಸಿ ನಿರೂಪಿಸಿದರು. ಜಿ.ಜಿ. ಹೆಗಡೆ ಬಾಳಗೋಡ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *