ಶೀಘ್ರದಲ್ಲಿ ಇ-ಪುಸ್ತಕಗಳ ರೂಪದಲ್ಲಿ ಪಿ.ಲಂಕೇಶ್ ಬರಹಗಳು ಲಭ್ಯ!

ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಮತ್ತು ನಾಟಕಗಾರ ಪಿ. ಲಂಕೇಶ್ ನಾಡಿನ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರಾಗಿದ್ದಾರೆ. ಅವರ ಲಿಖಿತ ಕೃತಿಗಳು ಶೀಘ್ರದಲ್ಲೇ ಆಡಿಯೊ ಪುಸ್ತಕಗಳಾಗಿ ಬದಲಾಗಲಿವೆ.

LankeshsHulimavinamara1

ಬೆಂಗಳೂರು: ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಮತ್ತು ನಾಟಕಗಾರ ಪಿ. ಲಂಕೇಶ್ ನಾಡಿನ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರಾಗಿದ್ದಾರೆ.

ಪಿ. ಲಂಕೇಶ್ ಅವರ ಲಿಖಿತ ಕೃತಿಗಳು ಶೀಘ್ರದಲ್ಲೇ ಆಡಿಯೊ ಪುಸ್ತಕಗಳಾಗಿ ಬದಲಾಗಲಿವೆ ಎಂಬುದು ಓದುಗರಿಗೆ ಒಳ್ಳೆಯ ಸುದ್ದಿಯಾಗಿದೆ. ಯುವ ಪೀಳಿಗೆಗೆ ತಮ್ಮ ತಂದೆಯ ಕೆಲಸಗಳನ್ನು ತಲುಪಿಸುವ ನಿಟ್ಟಿನಲ್ಲಿ ಪುತ್ರ ಇಂದ್ರಜಿತ್ ಲಂಕೇಶ್ ಪ್ರಯತ್ನ ಮಾಡುತ್ತಿದ್ದಾರೆ.

ತಮ್ಮ ತಂದೆಯ ಕೃತಿಗಳು ಯಾವಾಗಲೂ ಸರ್ವತೋಮುಖವಾಗಿದ್ದು, ಯಾವುದೇ ಪೀಳಿಗೆಗೂ ಪ್ರಸ್ತುತವಾಗಲಿವೆ. ಡಿಜಿಟಲ್ ಮಾದರಿಯಲ್ಲಿ ಅವರ ಬರಹಗಳನ್ನು ಜೀವಂತವಾಗಿ ಇರಿಸುವ ಪ್ರಯತ್ನ ಮಾಡುತ್ತಿರುವುದಾಗಿ ಇತ್ತೀಚಿಗೆ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ  ಪಾತ್ರ ವಹಿಸಿರುವ ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

ಪಿ. ಲಂಕೇಶ್ ಅವರ ಕಾದಂಬರಿ, ನಾಟಕಗಳು, ಕವಿತೆಗಳು ಸೇರಿದಂತೆ ಸುಮಾರು 20 ಪುಸ್ತಕಗಳನ್ನು ಬರೆದಿದ್ದಾರೆ. ಕಲ್ಲು ಕರಗುವ ಸಮಯ ಮತ್ತಿತರ ಕಥೆಗಳು, ಹುಳಿ ಮಾವಿನ ಮರ, ಸಂಕ್ರಾಂತಿ  ಇವುಗಳಲ್ಲಿ ಹೆಚ್ಚಿನ ಜನಪ್ರಿಯ ಕೃತಿಗಳಾಗಿವೆ.ಈ 20 ಪುಸ್ತಕಗಳ ಪೈಕಿ 10 ಪುಸ್ತಕಗಳು ಈಗಾಗಲೇ ಡಬ್ ಆಗಿರುವುದಾಗಿ  ಇಂದ್ರಜಿತ್ ಲಂಕೇಶ್ ಹೇಳುತ್ತಾರೆ.

ಉಳಿದ ಕೃತಿಗಳ ಡಬ್ಬಿಂಗ್ ಗಾಗಿ ಸ್ಯಾಂಡಲ್ ವುಡ್ ನ ಹಿರಿಯ ನಟರೊಂದಿಗೆ ಮಾತುಕತೆ ನಡೆಯುತ್ತಿದೆ. ಆ ಪಾತ್ರಕ್ಕೆ ಹೊಂದಿಕೆಯಾಗುವಂತಹ ಧ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಎಲ್ಲಾ ಆಡಿಯೋ ಬುಕ್ ಗಳು ಮೊಬೈಲ್ ಆ್ಯಪ್ ನಲ್ಲಿ ಉಚಿತವಾಗಿ ದೊರೆಯಲಿವೆ. ಪ್ರತಿಯೊಂದು ಕಥೆಯೂ 10 ನಿಮಿಷಗಳಿಗಿಂತ ಹೆಚ್ಚಿಗೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಲಂಕೇಶ್ ಅವರ ಕೃತಿಗಳು ಹಲವರ ಮೇಲೆ ಪ್ರಭಾವ ಬೀರಿದೆ. ಅವರ ಆತ್ಮಕಥೆ ಹುಳಿಮಾವಿನ ಮರ ಹಾಗೂ 12ನೇ ಶತಮಾನದ ಸಾಮಾಜಿಕ ಹರಿಕಾರ ಕ್ರಾಂತಿಕಾರಿ ಬಸವಣ್ಣ ಅವರ ಕುರಿತಾದ ಸಂಕ್ರಾಂತಿ ಅಚ್ಚುಮೆಚ್ಚಿನ ಕೃತಿಗಳಾಗಿವೆ ಎಂದು ಇಂದ್ರಜಿತ್ ಲಂಕೇಶ್ ಹೇಳುತ್ತಾರೆ.

ಈವರೆಗೂ ಅವರ ಕಲ್ಲು ಕರಗುವ ಸಮಯ, ಸಂಕ್ರಾಂತಿ ಎರಡು ಪುಸ್ತಕಗಳು ಮಾತ್ರ ಇಂಗ್ಲಿಷ್ ನಲ್ಲಿ ಅನುವಾದಗೊಂಡಿವೆ. ಆದಾಗ್ಯೂ, ಅನೇಕ ಕೃತಿಗಳು ತಮಿಳು ಹಾಗೂ ಹಿಂದಿ ಭಾಷೆಗೆ ಅನುವಾದಗೊಂಡಿರುವುದಾಗಿ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *