ಶೀಘ್ರದಲ್ಲಿ ಇ-ಪುಸ್ತಕಗಳ ರೂಪದಲ್ಲಿ ಪಿ.ಲಂಕೇಶ್ ಬರಹಗಳು ಲಭ್ಯ!

ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಮತ್ತು ನಾಟಕಗಾರ ಪಿ. ಲಂಕೇಶ್ ನಾಡಿನ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರಾಗಿದ್ದಾರೆ. ಅವರ ಲಿಖಿತ ಕೃತಿಗಳು ಶೀಘ್ರದಲ್ಲೇ ಆಡಿಯೊ ಪುಸ್ತಕಗಳಾಗಿ ಬದಲಾಗಲಿವೆ.

LankeshsHulimavinamara1

ಬೆಂಗಳೂರು: ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಮತ್ತು ನಾಟಕಗಾರ ಪಿ. ಲಂಕೇಶ್ ನಾಡಿನ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರಾಗಿದ್ದಾರೆ.

ಪಿ. ಲಂಕೇಶ್ ಅವರ ಲಿಖಿತ ಕೃತಿಗಳು ಶೀಘ್ರದಲ್ಲೇ ಆಡಿಯೊ ಪುಸ್ತಕಗಳಾಗಿ ಬದಲಾಗಲಿವೆ ಎಂಬುದು ಓದುಗರಿಗೆ ಒಳ್ಳೆಯ ಸುದ್ದಿಯಾಗಿದೆ. ಯುವ ಪೀಳಿಗೆಗೆ ತಮ್ಮ ತಂದೆಯ ಕೆಲಸಗಳನ್ನು ತಲುಪಿಸುವ ನಿಟ್ಟಿನಲ್ಲಿ ಪುತ್ರ ಇಂದ್ರಜಿತ್ ಲಂಕೇಶ್ ಪ್ರಯತ್ನ ಮಾಡುತ್ತಿದ್ದಾರೆ.

ತಮ್ಮ ತಂದೆಯ ಕೃತಿಗಳು ಯಾವಾಗಲೂ ಸರ್ವತೋಮುಖವಾಗಿದ್ದು, ಯಾವುದೇ ಪೀಳಿಗೆಗೂ ಪ್ರಸ್ತುತವಾಗಲಿವೆ. ಡಿಜಿಟಲ್ ಮಾದರಿಯಲ್ಲಿ ಅವರ ಬರಹಗಳನ್ನು ಜೀವಂತವಾಗಿ ಇರಿಸುವ ಪ್ರಯತ್ನ ಮಾಡುತ್ತಿರುವುದಾಗಿ ಇತ್ತೀಚಿಗೆ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ  ಪಾತ್ರ ವಹಿಸಿರುವ ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

ಪಿ. ಲಂಕೇಶ್ ಅವರ ಕಾದಂಬರಿ, ನಾಟಕಗಳು, ಕವಿತೆಗಳು ಸೇರಿದಂತೆ ಸುಮಾರು 20 ಪುಸ್ತಕಗಳನ್ನು ಬರೆದಿದ್ದಾರೆ. ಕಲ್ಲು ಕರಗುವ ಸಮಯ ಮತ್ತಿತರ ಕಥೆಗಳು, ಹುಳಿ ಮಾವಿನ ಮರ, ಸಂಕ್ರಾಂತಿ  ಇವುಗಳಲ್ಲಿ ಹೆಚ್ಚಿನ ಜನಪ್ರಿಯ ಕೃತಿಗಳಾಗಿವೆ.ಈ 20 ಪುಸ್ತಕಗಳ ಪೈಕಿ 10 ಪುಸ್ತಕಗಳು ಈಗಾಗಲೇ ಡಬ್ ಆಗಿರುವುದಾಗಿ  ಇಂದ್ರಜಿತ್ ಲಂಕೇಶ್ ಹೇಳುತ್ತಾರೆ.

ಉಳಿದ ಕೃತಿಗಳ ಡಬ್ಬಿಂಗ್ ಗಾಗಿ ಸ್ಯಾಂಡಲ್ ವುಡ್ ನ ಹಿರಿಯ ನಟರೊಂದಿಗೆ ಮಾತುಕತೆ ನಡೆಯುತ್ತಿದೆ. ಆ ಪಾತ್ರಕ್ಕೆ ಹೊಂದಿಕೆಯಾಗುವಂತಹ ಧ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಎಲ್ಲಾ ಆಡಿಯೋ ಬುಕ್ ಗಳು ಮೊಬೈಲ್ ಆ್ಯಪ್ ನಲ್ಲಿ ಉಚಿತವಾಗಿ ದೊರೆಯಲಿವೆ. ಪ್ರತಿಯೊಂದು ಕಥೆಯೂ 10 ನಿಮಿಷಗಳಿಗಿಂತ ಹೆಚ್ಚಿಗೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಲಂಕೇಶ್ ಅವರ ಕೃತಿಗಳು ಹಲವರ ಮೇಲೆ ಪ್ರಭಾವ ಬೀರಿದೆ. ಅವರ ಆತ್ಮಕಥೆ ಹುಳಿಮಾವಿನ ಮರ ಹಾಗೂ 12ನೇ ಶತಮಾನದ ಸಾಮಾಜಿಕ ಹರಿಕಾರ ಕ್ರಾಂತಿಕಾರಿ ಬಸವಣ್ಣ ಅವರ ಕುರಿತಾದ ಸಂಕ್ರಾಂತಿ ಅಚ್ಚುಮೆಚ್ಚಿನ ಕೃತಿಗಳಾಗಿವೆ ಎಂದು ಇಂದ್ರಜಿತ್ ಲಂಕೇಶ್ ಹೇಳುತ್ತಾರೆ.

ಈವರೆಗೂ ಅವರ ಕಲ್ಲು ಕರಗುವ ಸಮಯ, ಸಂಕ್ರಾಂತಿ ಎರಡು ಪುಸ್ತಕಗಳು ಮಾತ್ರ ಇಂಗ್ಲಿಷ್ ನಲ್ಲಿ ಅನುವಾದಗೊಂಡಿವೆ. ಆದಾಗ್ಯೂ, ಅನೇಕ ಕೃತಿಗಳು ತಮಿಳು ಹಾಗೂ ಹಿಂದಿ ಭಾಷೆಗೆ ಅನುವಾದಗೊಂಡಿರುವುದಾಗಿ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *