ನಾಳೆ ಗಾಂಧಿ ಜಯಂತಿ- ನಿಮ್ಮೂರಲ್ಲಿದೆಯಾ ಗಾಂಧಿ ಪ್ರತಿಮೆ, ಗಾಂಧಿ ವೃತ್ತ?

ಶಾಂತಿದೂತ ಗಾಂಧಿ ಜಗತ್ತಿನ ಬೆಳಕು. ಗಾಂಧಿ ಪರಿಚಯಿಸಿ,ಪ್ರತಿಪಾದಿಸಿದ ಸತ್ಯ, ಅಹಿಂಸೆ ಎಂದೆಂದೂ ಪ್ರಸ್ತುತ. ಗಾಂಧಿ ನೆನಪು, ಚಿತ್ರದೊಂದಿಗೆ ಸ್ಮರಣೆಗೆ ಬರುವ ಅವರ ಚಿತ್ರ ಸತ್ಯ, ಶಾಂತಿ,ಅಹಿಂಸೆಯನ್ನು ಪ್ರತಿಪಾದಿಸುತ್ತದೆ. ಈ ಕಾರಣ, ಮಹತ್ವದ ಕಾರಣಗಳಿಗಾಗಿ ಗಾಂಧೀಜಿಯವರ ವೃತ್ತ- ಮೂರ್ತಿ ಎಲ್ಲೆಡೆ ಕಾಣುವ ಉಪಮೆ.

ಹೊರದೇಶ, ದೇಶ, ರಾಜ್ಯ,ಜಿಲ್ಲೆ, ತಾಲೂಕು,ಗ್ರಾ.ಪಂ. ಮಟ್ಟದ ವರೆಗೆ ಕಾಣುವ ಗಾಂಧಿ ಚಿತ್ರ, ಮೂರ್ತಿ, ವೃತ್ತ ಸಿದ್ಧಾಪುರದಲ್ಲೆಲ್ಲೂ ಕಾಣದಿರುವುದು ಈಗ ಚರ್ಚೆಯ ವಿಷಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಗಾಂಧೀಜಿಯವರ ನೆನಪಿಗಾಗಿ ಕಾರವಾರದ ಗಾಂಧಿಮಾರ್ಗದಲ್ಲಿ, ನಗರದ ವೃತ್ತವೊಂದರಲ್ಲಿ ಗಾಂಧೀಜಿ ಮೂರ್ತಿ ಸ್ಥಾಪಿಸಲಾಗಿದೆ.

1936 ರಲ್ಲಿ ಜಿಲ್ಲೆಗೆ ಬಂದಿದ್ದ ಮಹಾತ್ಮಗಾಂಧೀಜಿಯವರ ಅಹಿಂಸೆ ಪ್ರತಿಪಾದನೆಯ ಶಿರಸಿ ಮಾರಿಕಾಂಬಾ ದೇವಾಲಯದ ಭೇಟಿ, ಅಲ್ಲಿಯ ಕೋಣನ ಬಲಿಗೆ ವಿರೋಧ ವ್ಯಕ್ತಪಡಿಸಿ ಪ್ರಾಣಿವಧೆ ನಿಲ್ಲಿಸಿದ ಮಹಾತ್ಮ ಈಗಲೂ ಶಿರಸಿ ಗಾಡಿಬಿಡ್ಕಿಯಲ್ಲಿ ಅಜರಾಮರ.

ಇದೇ ಮಹಾತ್ಮ ಅಸ್ಪೃಶ್ಯತೆ,ಬಾಲವಿದವೆಯರ ಕೇಶಮಂಡನ ಆಚರಣೆ ವಿರೋಧಿಸಿ ಸಿದ್ಧಾಪುರಕ್ಕೆ ಭೇಟಿ ನೀಡಿದ್ದರು ಎಂದು ಚಾರಿತ್ರಿಕ ದಾಖಲೆಗಳು ಸ್ಫಷ್ಟಪಡಿಸುತ್ತವೆ. ಆದರೆ ಈ ನೆನಪಿಗೆ ಸಿದ್ಧಾಪುರದಲ್ಲಿ ಗಾಂಧಿ ಪ್ರತಿಮೆಯಾಗಲಿ, ಗಾಂಧಿ ವೃತ್ತವಾಗಲಿ ಇಲ್ಲ. ಸಿದ್ಧಾಪುರ ಅಶೋಕ ರಸ್ತೆಯ ಮನೆಯೊಂದಕ್ಕೆ ಮಹಾತ್ಮಗಾಂಧಿ ಭೇಟಿ ನೀಡಿ ಅಲ್ಲಿ ಮಹಾದೇವಿ ತಾಯಿ ಯವರನ್ನು ಭೇಟಿ ಮಾಡಿದ್ದ ಗಾಂಧೀಜಿ ನೆನಪಿಗೆ ರಾಧಾಕೃಷ್ಣ ಹೆಗಡೆ ತಮ್ಮ ಮನೆಯನ್ನು ಹಿಂದಿನಂತೆಯೇ ಉಳಿಸಿಕೊಂಡಿದ್ದಾರೆ. ಅವರೇ ಹೇಳುವ ಪ್ರಕಾರ ಬಹುಹಿಂದೆ ಅವರ ಮನೆಗೆ ಬರುತಿದ್ದ ಪತ್ರಗಳೆಲ್ಲಾ ಗಾಂಧಿವೃತ್ತ ಎನ್ನುವ ವಿಳಾಸದಿಂದ ಬರುತಿದ್ದವಂತೆ ಆದರೆ ಈಗ ಗಾಂಧಿ ನೆನಪಿಸುವವರೇ ಇಲ್ಲ.

ಕೆಲವು ವರ್ಷಗಳ ಕೆಳಗೆ ಇಲ್ಲಿಯ ನಿವೃತ್ತ ನೌಕರರು ಸಿದ್ಧಾಪುರದ ಈಗಿನ ಪಟ್ಟಣ ಪಂಚಾಯತ್ ವೃತ್ತಕ್ಕೆ ಗಾಂಧಿವೃತ್ತ ಎಂದು ನಾಮಕರಣ ಮಾಡಲು ಒತ್ತಾಯಿಸಿದ್ದರು. ಈ ಬಗ್ಗೆ ಪ.ಪಂ. ಗೆ ಮನವಿಯೊಂದನ್ನೂ ನೀಡಿದ್ದರು. ಆದರೆ ಈ ಬೇಡಿಕೆ ಈವರೆಗೆ ಈಡೇರಿಲ್ಲ. ಸಿದ್ಧಾಪುರದಲ್ಲಿ ಗಾಂಧಿ ವೃತ್ತ, ಗಾಂಧಿ ಪ್ರತಿಮೆಗಳಿಲ್ಲದ ಬಗ್ಗೆ ವಿಷಾದಿಸಿರುವ ಪತ್ರಕರ್ತ ಕನ್ನೇಶ್ ಕೋಲಶಿರ್ಸಿ ಮತ್ತು ಕಾರ್ಮಿಕ ಮುಖಂಡೆ ಯುಮುನಾ ಗಾಂವ್ಕರ್ ಜನಾಭಿಪ್ರಾಯ, ಗಾಂಧಿ ಮಹತ್ವಕ್ಕೆ ಮನ್ನಣೆ ನೀಡಿ ಅವರ ಹೆಸರಿನ ವೃತ್ತ, ಪ್ರತಿಮೆ ನಿರ್ಮಾಣಮಾಡಬೇಕು ಎಂದು ಸ್ಥಳಿಯ ಆಡಳಿತವನ್ನು ಆಗ್ರಹಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *