gandhi jayanti spl- ಜನವಿರೋಧಿ ಸರ್ಕಾರಗಳ ವಿರುದ್ಧ ಧರಣಿ ಸತ್ಯಾಗ್ರಹ

ಜನರನ್ನು ಭಾವನಾತ್ಮಕವಾಗಿ ಉತ್ತೇಜಿಸಿ ಜನದ್ರೋಹ ಮಾಡುವ ವ್ಯವಸ್ಥಿತ ಪರಿವಾರವನ್ನು ಹಿಮ್ಮೆಟ್ಟಿಸದಿದ್ದರೆ ಭಾರತದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು ಎರಡನೇ ದರ್ಜೆಯ ಪ್ರಜೆಗಳಾಗುವ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಕಾರ್ಮಿಕ ಮುಖಂಡೆ ಯಮುನಾ ಗಾಂವ್ಕರ್ ಕಳೆದ ಒಂದು ದಶಕದಿಂದಲೂ ಜನಸಾಮಾನ್ಯರು, ಬಡವರಾದ ಕಾರ್ಮಿಕರು, ರೈತರು, ಮಹಿಳೆಯರನ್ನು ಶೋಷಿಸುವ ವ್ಯವಸ್ಥೆಯನ್ನು ಪೋಶಿಸುವ ಆಡಳಿತ ಉಳ್ಳವರ ಪರವಾಗಿ ಕೆಲಸಮಾಡುತ್ತಾ ಭಾರತವನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಗಾಂಧಿಜಯಂತಿ ನಿಮಿತ್ತ ರಾಷ್ಟ್ರದಾದ್ಯಂತ ಇಂದು ನಡೆದ ಧರಣಿ ಸತ್ಯಾಗ್ರಹದ ಅಂಗವಾಗಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಸಂಘಟಿಸಿದ್ದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು ಬಂಡವಾಳಶಾಹಿ ಬಹುಜನಶ್ರಮಿಕವರ್ಗವನ್ನು ಶೋಷಿಸುತ್ತದೆ. ಇಂಥ ಶೋಷಕರನ್ನು ಬೆಂಬಲಿಸುತ್ತಿರುವ ಈಗಿನ ಸರ್ಕಾರಗಳು ಜನದ್ರೋಹಿ ನೀತಿ ಅನುಸರಿಸುತ್ತಿವೆ ಎಂದರು.

ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದ ಪ್ರಮುಖರು ಈ ದೇಶದಲ್ಲಿ ಬಹುಸಂಖ್ಯಾತರಾದ ಕಾರ್ಮಿಕರು, ರೈತರು. ಮಹಿಳೆಯರು ಶ್ರಮಿಕವರ್ಗವನ್ನು ಉಪೇಕ್ಷಿಸಿ ಆಡಳಿತ ನಡೆಸಲಾಗುತ್ತಿದೆ. ಕಾರ್ಮಿಕ ಮಸೂದೆ, ಭೂಸುಧಾರಣೆ ಮಸೂದೆ, ಕೃಷಿಮಾರುಕಟ್ಟೆ ಅಧಿನಿಯಮ ಬದಲಾವಣೆಗಳ ಹಿಂದೆ ಕಾರ್ಪೊರೇಟ್ಗಳನ್ನು ರಕ್ಷಿಸುವ ಉಪಾಯದ ಲಾಭಾಕಾಂಕ್ಷೆಯ ಅಪಾಯದ ಆಡಳಿತ ವ್ಯವಸ್ಥೆಯನ್ನು ಮಾಡುವ ಮೂಲಕ ಭಾರತೀಯ ಶ್ರಮಿಕ ವರ್ಗವನ್ನು ಹಿಂಸಿಸಲಾಗುತ್ತಿದೆ. ಇಂಥ ಅಪಾಯಕಾರಿ ಪರಿವಾರದ ಆಡಳಿತದ ವಿರುದ್ಧ ಜನಜಾಗೃತಿ, ಸಂಘಟನೆಮಾಡಿ ಪ್ಯಾಸಿಸ್ಟ್ ಶಕ್ತಿಗಳನ್ನು ಹಿಮ್ಮೆಟ್ಟಿಸುವ ಮೂಲಕ ಜನಪರರಿಗೆ ಆಡಳಿತ ನೀಡಬೇಕು ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಕನ್ನೇಶ್ ಕೋಲಶಿರ್ಸಿ, ರೈತಸಂಘದ ಅಧ್ಯಕ್ಷ ವೀರಭದ್ರ ನಾಯ್ಕ, ಕೆರಿಯಪ್ಪ ಸಂಪೆಸರ, ಚಂದ್ರಶೇಖರ್ ಕುಂಬ್ರಿಗದ್ದೆ, ಎಸ್.ಎಫ್.ಆಯ್ ಮುಖಂಡ ಸಾಕಿಬ್ ಗುರ್ಕಾರ್, ವಿಷ್ಣುನಾಯ್ಕ, ಆಯ್.ಸಿ.ನಾಯ್ಕ, ನಾಗಪ್ಪ ನಾಯ್ಕ,ಕೆ.ಟಿ.ನಾಯ್ಕ ಹೆಗ್ಗೇರಿ ಮಾತನಾಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *