weekend tourspot- ಚಾರಣಿಗರಿಗೆ ಮುಕ್ತವಾದ ದೂದ್ ಸಾಗರ ಜಲಪಾತ: ಹೊರಟು ನಿಂತ ಪ್ರವಾಸಿ ಪ್ರಿಯರು

ದೂದ್ ಸಾಗರ್ ಜಲಪಾತದ ಟ್ರೆಕ್ಕಿಂಗ್ ಗೆ ಸರ್ಕಾರ ಮುಕ್ತ ಮಾಡಿಕೊಟ್ಟ ನಂತರ ಹಲವು ಸಾಹಸಿ ಚಾರಣಿಗರು ವಾರಾಂತ್ಯದ ಟ್ರಕ್ಕಿಂಗ್ ಗೆ ಬುಕ್ ಮಾಡಲು ಆರಂಭಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಜಲಪಾತಕ್ಕೆ ಜೀಪ್ ಸಫಾರಿ ಕೂಡ ಮುಕ್ತವಾಗುವ ನಿರೀಕ್ಷೆಯಿದೆ.

Trekkers cross a gushing stream while trekking to Dudhsagar

ಹುಬ್ಬಳ್ಳಿ: ದೂದ್ ಸಾಗರ್ ಜಲಪಾತದ ಟ್ರೆಕ್ಕಿಂಗ್ ಗೆ ಸರ್ಕಾರ ಮುಕ್ತ ಮಾಡಿಕೊಟ್ಟ ನಂತರ ಹಲವು ಸಾಹಸಿ ಚಾರಣಿಗರು ವಾರಾಂತ್ಯದ ಟ್ರಕ್ಕಿಂಗ್ ಗೆ ಬುಕ್ ಮಾಡಲು ಆರಂಭಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಜಲಪಾತಕ್ಕೆ ಜೀಪ್ ಸಫಾರಿ ಕೂಡ ಮುಕ್ತವಾಗುವ ನಿರೀಕ್ಷೆಯಿದೆ.

ಗೋವಾದಲ್ಲಿರುವ ದೂದ್ ಸಾಗರ್ ಜಲಪಾತಕ್ಕೆ ರೈಲ್ವೆ ಹಳಿಗಳ ಮೂಲಕ ನಡೆದುಕೊಂಡು ಹೋಗಲು ಮಾತ್ರ ಸಾಧ್ಯವಿದೆ. ಕೊಲ್ಲೆಮ್ ನಲ್ಲಿರುವ ಹೊಟೇಲ್ ಗಳು ಟ್ರಕ್ಕಿಂಗ್ ಪ್ರಿಯರಿಗೆ ಪ್ಯಾಕೇಜ್ ಗಳ ಆಫರ್ ನೀಡಲು ಮುಂದಾಗಿವೆ.

ಈ ವರ್ಷ ನಾವು ದೂದ್ ಸಾಗರ್ ಗೆ ಕೋವಿಡ್-19 ಲಾಕ್ ಡೌನ್ ಕಾರಣದಿಂದ ಟ್ರಕ್ಕಿಂಗ್ ಪ್ರಿಯರನ್ನು ಕರೆದುಕೊಂಡು ಹೋಗಲು ಸಾಧ್ಯವಾಗಿಲ್ಲ. ಇದೀಗ ಲಾಕ್ ಡೌನ್ ಸಡಿಲಿಕೆಯಾದ ನಂತರ ಕೆಲವು ನಿರ್ದಿಷ್ಟ ನಿಯಮಗಳಿಂದ ಟ್ರಕ್ ಪ್ರಿಯರನ್ನು ಕರೆದುಕೊಂಡು ಹೋಗಲು ಅವಕಾಶವಿದೆ. ದೂದ್ ಸಾಗರ್ ಜಲಪಾತಕ್ಕೆ ಮತ್ತು ಟಮ್ಡಿ ಸುರ್ಲ ಜಲಪಾತಕ್ಕೆ ಟ್ರಕ್ಕಿಂಗ್ ನ್ನು ಅಕ್ಟೋಬರ್ ಮೊದಲ ವಾರದಲ್ಲಿ ಪ್ರಾರಂಭಿಸಲಿದ್ದೇವೆ. ಅಕ್ಟೋಬರ್ 2ರಿಂದ ಸರ್ಕಾರದ ನಿಯಮ ಪ್ರಕಾರ ಜೀಪ್ ಸಫಾರಿ ಕೂಡ ಆರಂಭವಾಗಲಿದೆ. ಆಗ ಟ್ರಕ್ಕಿಂಗ್ ಪ್ಯಾಕೇಜ್ ಸ್ಥಗಿತಗೊಳ್ಳಲಿದೆ ಎಂದು ಕೊಲ್ಲೆಮ್ ನ ಪ್ರವಾಸಿ ನಿರ್ವಾಹಕರು ತಿಳಿಸುತ್ತಾರೆ.

ಇದೀಗ ಬೆಂಗಳೂರಿನ ಹಲವು ಸಾಹಸಿ ಚಾರಣಿಗ ಕಂಪೆನಿಗಳು ದೂದ್ ಸಾಗರ್ ಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಲು ಮುಂದಾಗಿವೆ. ಪ್ರವಾಸೋದ್ಯಮ ಇಲಾಖೆ ಮತ್ತೆ ಉದ್ಯಮ ಚಟುವಟಿಕೆಯನ್ನು ನಿಧಾನವಾಗಿ ತೆರೆಯಲು ಮುಂದಾಗಿವೆ ಎಂದು ಹೊಟೇಲ್ ಮಾಲೀಕರು ಹೇಳುತ್ತಿದ್ದಾರೆ.

ಕಳೆದ ವರ್ಷ ದೂದ್ ಸಾಗರ್ ಗೆ ಸುಮಾರು 10 ಸಾವಿರ ಪ್ರವಾಸಿಗರು ಭೇಟಿ ಕೊಟ್ಟಿದ್ದರಂತೆ. ಅವರಲ್ಲಿ ಬಹುತೇಕ ಮಂದಿ ಬೆಂಗಳೂರು ಮತ್ತು ಮುಂಬೈ ಮೂಲದವರು. ಈ ವರ್ಷ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಟ್ರಕ್ಕಿಂಗ್ ಇರಲಿಲ್ಲ. ಇದೀಗ ನಿಧಾನವಾಗಿ ಆರಂಭವಾಗುತ್ತಿದೆ. ಗೋವಾ ಗಡಿಭಾಗವರೆಗೆ ಹೋದ ಪ್ರವಾಸಿಗರನ್ನು ದೂದ್ ಸಾಗರಕ್ಕೆ ಕರೆದುಕೊಂಡು ಹೋಗುವುದು ಮತ್ತು ತಂದುಬಿಡುವುದನ್ನು ಟೂರ್ ಆಪರೇಟರ್ ಗಳು ಮಾಡುತ್ತಾರೆ ಎಂದು ನೇಚರ್ ಅಡ್ಮೈರ್ ಆರ್ಗನೈಸೇಷನ್ ನ ದೇವ್ ಬಾಲಾಜಿ ಹೇಳುತ್ತಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *