19ರ ಯುವತಿಯೊಂದಿಗೆ 35 ವರ್ಷದ ಶಾಸಕ ‘ರಹಸ್ಯ’ ವಿವಾಹ, ಯುವತಿಯ ಪೋಷಕರಿಂದ ದೂರು ದಾಖಲು

ತಮಿಳುನಾಡಿನ 35 ವರ್ಷದ ಶಾಸಕರೊಬ್ಬರು 19ರ ಹರೆಯದ ಯುವತಿಯೊಂದಿಗೆ ರಹಸ್ಯ ವಿವಾಹಹವಾಗಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿದೆ.

ವಿಲ್ಲುಪುರಂ: ತಮಿಳುನಾಡಿನ 35 ವರ್ಷದ ಶಾಸಕರೊಬ್ಬರು 19ರ ಹರೆಯದ ಯುವತಿಯೊಂದಿಗೆ ರಹಸ್ಯ ವಿವಾಹಹವಾಗಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿದೆ.

ತಮಿಳುನಾಡಿನ ಕಲ್ಲಕುರಿಚಿ ಕ್ಷೇತ್ರದ ಎಐಎಡಿಎಂಕೆಯ ಶಾಸಕ  ಎ ಪ್ರಭು ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ 19 ವರ್ಷದ ಯುವತಿಯೊಂದಿಗೆ ವಿವಾಹವಾಗಿದ್ದಾರೆ. ಈ ವಿವಾಹ ಇದೇ ಸೋಮವಾರ (ಅಕ್ಟೋಬರ್ 5) ನಡೆದಿದೆ. ಆದರೆ ಇದೊಂದು ಗುಟ್ಟಿನಲ್ಲಿ ನಡೆದ ಮದುವೆ ಎಂದು ಆರೋಪಿಸಿರುವ ಯುವತಿಯ ಕುಟುಂಬ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಯುವತಿಯ  ತಂದೆ ಸ್ವಾಮಿನಾಥನ್ ತನ್ನ ಮಗಳನ್ನು ಅಪಹರಿಸಿ ಬಲವಂತವಾಗಿ ವಿವಾಹ ಮಾಡಿಕೊಳ್ಳಲಾಗಿದೆಎಂದು ಆರೋಪಿಸಿ ಶಾಸಕರ ಮದುವೆ ಮಂಟಪದ ಎದುರೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಈ ಸಂಬಂಧ ಸಂತ್ರಸ್ಥೆಯ ಪೋಷಕರು ತ್ಯಾಗದುರುಗಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ದೂರಿನಲ್ಲಿ ಸ್ವಾಮಿನಾಥನ್ ಶಾಸಕ ಪ್ರಭುವಿನಿಂದ ತಮಗೆ ಕೊಲೆ ಬೆದರಿಕೆ ಇದೆ. ಅಲ್ಲದೆ ಅವರು ಆಡಳಿತ ಪಕ್ಷದ ದೊಡ್ಡ ನಾಯಕರಾಗಿರುವುದರಿಂದ ಯಾರೂ ಅವರಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಹಿಂದೆ ಅದೇ ಶಾಸಕ ಇದೀಗ ವಿವಾಹವಾಗಿರುವ ನನ್ನ ಪುತ್ರಿಯನ್ನೂ ಕೊಲ್ಲುವ ಬೆದರಿಕೆ ಹಾಕಿದ್ದನೆಂದೂ ದೂರಿನಲ್ಲಿ ವಿವರಿಸಲಾಗಿದೆ.

ಇನ್ನು ಇದೊಂದು ಅಂತರ್ಜಾತಿಯ ವಿವಾಹವಾಗಿದೆ. ಆದರೆ ಸಂತ್ರಸ್ಥೆಯ ತಂದೆ “ತಮಗೆ ಜಾತಿಯ ಸಮಸ್ಯೆ ಇಲ್ಲ, ವಯಸ್ಸಿನ ಅಂತರವೇ ಸಮಸ್ಯೆಯಾಗಿದೆ” ಎಂದು ಹೇಳಿದ್ದಾರೆ.

ಕೊರೋನಾವೈರಸ್  ಸಾಂಕ್ರಾಮಿಕ ರೋಗದಿಂದಾಗಿ ಮದುವೆಯನ್ನು ಸರಳವಾಗಿ ನೆರವೇರಿಸಲಾಗಿದೆ.  ಹಾಗಾಗಿ ವಿವಾಹಕ್ಕೆ ಹೆಚ್ಚಿನ ಸಂಖ್ಯೆಯ ಜನರಿಗೆ ಆಹ್ವಾನವಿರಲಿಲ್ಲ ಎಂದು ಶಾಸಕ ಪ್ರಭು ಹೇಳಿದ್ದಾರೆ.

ಮೂಲಗಳ ಪ್ರಕಾರ, ಪ್ರಭು ಮದುವೆಯಾದ ಹುಡುಗಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ತಿಳಿದವರಾಗಿದ್ದರು.ಮತ್ತು ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಯ ತಂದೆ ಮಾತ್ರ “ಇದೊಂದು ಷಡ್ಯಂತ್ರ” ಎಂದು ಆರೋಪಿಸಿದ್ದಾರೆ. ಇದೀಗ ಈ ವಿವಾಹ ತಮಿಳು ನಾಡಿನಾದಂತ ದೊಡ್ದ ಚರ್ಚೆಗೆ ಆಸ್ಪದ ನೀಡಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *