ನಾಟ್ಯ ವಿನಾಯಕನಿಗೆ ಸಂಕಷ್ಟ ಹರ ರಥ ಸಮರ್ಪಣೆ,ಸಂಗೀತ ಅಭ್ಯಾಸ ಬೈಟಕ್ ಪ್ರಾರಂಭ

ಸಿದ್ದಾಪುರ: ತಾಲೂಕಿನ ಇಟಗಿ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕ
ದೇವರಿಗೆ ಸಂಕಷ್ಟ ಹರ ರಥ ಸಮರ್ಪಣಾ ಸಮಾರಂಭ ಧಾರ್ಮಿಕ ವಿಧಿ
ವಿಧಾನಗಳ ಮೂಲಕ ಸೋಮವಾರ ಜರುಗಿತು.
ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು
ಇನ್ನು ಮುಂದೆ ಪ್ರತೀ ಸಂಕಷ್ಟಿಗೆ ಸಂಕಷ್ಟ ಹರ ರಥೋತ್ಸವ ನಡೆಯಲಿರುವ
ಶ್ರೀದೇವರ ನೂತನ ರಥ ಎಳೆಯುವ ಮೂಲಕ ಭಗವಂತನಿಗೆ ಅರ್ಪಣೆ
ಮಾಡಿದರು. ಬಳಿಕ ಮಾತನಾಡಿದ ಅವರು,

ಭಾರತೀಯ ಸಂಪ್ರದಾಯಗಳನ್ನು
ಉಳಿಸಿ ಬೆಳಸಿಕೊಂಡು ಹೋಗಬೇಕು. ಅದರಲ್ಲಿ ಸಾಧನೆ ಮಾಡಬೇಕು. ಕಲಗದ್ದೆ
ಅನೇಕ ಕಾರಣಕ್ಕೆ ಗಮನ ಸೆಳೆಯುತ್ತಿದೆ ಎಂದು ಹೇಳಿದರು.
ಸಾಮಾಜಿಕ ಮುಖಂಡ ಡಾ. ಶಶಿಭೂಷ ಹೆಗಡೆ ದೊಡ್ಮನೆ, ದೇವತಾ
ಕಾರ್ಯಗಳನ್ನು ಹೆಚ್ಚೆಚ್ಚು ನಡೆಸುವ ಮೂಲಕ ಇದೊಂದು ಯಾತ್ರಾ
ಸ್ಥಳವಾಗಿದೆ ಎಂದರು. ದೇವಾಲಯದ ಪೂಜಾ ವಿಧಾನ ಪುಸ್ತಕದ
ಸಮರ್ಪಣೆಯನ್ನು ವಿದ್ವಾನ್ ಉಮಾಕಾಂತ ಭಟ್ಟ ಕೆರೇಕೈ, ಪುಟ್ಟನಮನೆ
ಪರಮೇಶ್ವರ ಭಟ್ಟ ನಡೆಸಿಕೊಟ್ಟರು.

ಧಾರವಾಡ ಹಾಲು ಒಕ್ಕೂಟ ನಿರ್ದೇಶಕ
ಸುರೇಶ್ಚಂದ್ರ ಹೆಗಡೆ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಹೆಗಡೆ
ಬಾಳೇಗದ್ದೆ, ರಥ ನಿರ್ಮಾಣ ಮಾಡಿದ ಡಿ.ಡಿ.ಶೇಟ್ ಕುಮಟಾ, ವಿದ್ವಾನ್ ಕೃಷ್ಣ
ಭಟ್ಟ ಅಡವಿತೋಟ, ಅಗ್ಗೆರೆ ಮಹೇಶ ಭಟ್ಟ ಸೇರಿದಂತೆ ಇತರರು
ಪಾಲ್ಗೊಂಡರು.

ದೇವಾಲಯದ ಮೊಕ್ತೇಸರ ವಿನಾಯಕ ಹೆಗಡೆ ಕಲಗದ್ದೆ, ರಷ್ಮಿ
ಹೆಗಡೆ ದಂಪತಿಗಳು ಯಜಮಾನತ್ವ ವಹಿಸಿದ್ದರು. ವಿವಿಧ ಧಾರ್ಮಿಕ
ಕಾರ್ಯಕ್ರಮಗಳು ಗೋಕರ್ಣ ಹಾಗೂ ಸ್ಥಳೀಯ ವೈದಿಕರ ನೇತೃತ್ವದಲ್ಲಿ
ನಡೆಯಿತು.

ಸುಷಿರ ಸಂಗೀತ ಪರಿವಾರ, ಸಂಸ್ಕೃ ತಿ ಸಂಪದ ಸಾಂಸ್ಕೃತಿಕ ಸಂಘಟನೆಗಳಿಂದ
ಸಂಗೀತ ಅಭ್ಯಾಸ ಬೈಟಕ್ ಪ್ರಾರಂಭ
ಸಿದ್ದಾಪುರ. ಸಾಂಸ್ಕೃ ತಿಕ ಚಟುವಟಿಕೆಗಳ ಕೇಂದ್ರವಾಗಿರುವ ಪಟ್ಟಣದ ಶೃಂಗೇರಿ ಶಂಕರಮಠದಲ್ಲಿ ಸಂಗೀತ ಅಭ್ಯಾಸ ಬೈಟಕ್ ಎನ್ನುವ ಹೊಸಕಾರ್ಯಕ್ರಮವೊಂದು ರವಿವಾರ ಪ್ರಾರಂಭಗೊಂಡಿತು. ಸುಷಿರ ಸಂಗೀತ ಪರಿವಾರ ಭುವನಗಿರಿ, ಮತ್ತು ಸಂಸ್ಕೃತಿ ಸಂಪದ ಈ ಎರಡು ಸಂಘಟನೆಗಳ ಸಹಯೋಗದಲ್ಲಿ ಈ ವಿನೂತನ ಕಾರ್ಯಕ್ರಮವನ್ನು ಸಂಘಟಿಸಲಾಗಿದ್ದು ಸಂಗೀತ ಅಭಿರುಚಿ ನಿರಂತರಗೊಳಿಸಲು ಈ ಕಾರ್ಯಕ್ರಮ ರೂಪಗೊಂಡಿದೆ. ಮುಂದೆ ವಾರಕ್ಕೊಮ್ಮೆ ಏರ್ಪಡಿಸಲಾಗುವ ಈ ಕಾರ್ಯಕ್ರಮದ ಮೊದಲ ಪ್ರಯೋಗ ರವೀಂದ್ರ ಹೆಗಡೆ ಇಳಿಮನೆ (ಬೆಂಗಳೂರು) ಇವರ ಶಾಸ್ತ್ರೀಯ ಸಂಗೀತದೊಂದಿಗೆ ಪ್ರಾರಂಭಗೊಂಡಿತು.

ಕಾರ್ಯಕ್ರಮವನ್ನು ರಾಗ ಮಾರವಾ ದಿಂದ ಪ್ರಾರಂಭಿಸಿ, ರಾಗ ದೇಸ್ ಹಾಗೂ ಭಜನ್ ಗಳೊಂದಿಗೆ ಮುಂದುವರಿಸಿ ರಾಗ ಬೈರವಿಯಲ್ಲಿ ಸಂಪನ್ನಗೊಳಿಸಲಾಯಿತು. ಬಾಜರೆ ಮುರಳಿಯ ಬಾಜೆ ಭಜನ್ ಗೆ ಪಂ.ರವೀಂದ್ರ ಹೆಗಡೆ ಯವರೊಂದಿಗೆ ಪಂ. ಪ್ರಕಾಶ ಹೆಗಡೆ ಕಲ್ಲಾರೆಮನೆಯವರ ಕೊಳಲು ಸೇರಿ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು. ಡಾ. ಸಮೀರ ಬಾದ್ರಿಯವರ ಹಾರ್ಮೋನಿಯಂ ಸಾತ್ ಹಾಗೂ ನಿತಿನ್ ಹೆಗಡೆ ಕಲಗದ್ದೆ, ಶಶಾಂಕ ಹೆಗಡೆ ಹಿತ್ತಲಕೈ ತಬಲಾಸಾತ್ ನೀಡಿದರು. ಕರೋನಾ ಹಿನ್ನೆಲೆಯಲ್ಲಿ ಅತಿಕಡಿಮೆ ಪ್ರೇಕ್ಷಕರು ಮಾಸ್ಕ ಧರಿಸಿ ಸಾಮಾಜಿಕ ಅಂತರದೊಂದಿಗೆ ಪಾಲ್ಗೊಂಡಿದ್ದರು. ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಉಪಸ್ಥಿತರಿದ್ದರು. ನಿವೃತ್ತ ಪ್ರಾಚಾರ್ಯ ಟಿ.ಜಿ.ಹೆಗಡೆ ಸ್ವಾಗತಿಸಿ, ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *