

ಉತ್ತರ ಪ್ರದೇಶದ ಯೋಗಿ ಆಡಳಿತದ ಜಂಗಲ್ ರಾಜ್, ಕೇಂದ್ರದ ಮೋದಿ ಆಡಳಿತದ ಅರಾಜಕತೆ, ಜನವಿರೋಧಿ ಕಾನೂನುಗಳ ರಚನೆ,ಕೋಮುವಾದ ವಿಸ್ತರಿಸುವ ಆಡಳಿತ ಇವಗಳಿಂದ ಜನರಿಗಾಗುತ್ತಿರುವ ತೊಂದರೆಗೆ ಪ್ರತಿರೋಧವಾಗಿ ದೇಶದಾದ್ಯಂತ ಕಾಂಗ್ರೆಸ್ ಕರೆ ನೀಡಿದ್ದ ಮೌನ ಪ್ರತಿಭಟನೆ ಇಂದು ರಾಷ್ಟ್ರದಾದ್ಯಂತ ನಡೆಯಿತು.

ಈ ಮೌನಪ್ರತಿಭಟನೆಯ ಬೆಂಬಲವಾಗಿ ರಾಜ್ಯ, ಜಿಲ್ಲೆಗಳಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜನೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಕುಳಿತು ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರೀಯೆ ನೀಡಿದ ತಾಲೂಕಾ ಕಾಂಗ್ರೆಸ್ ಅಧ್ಯಕ್ಷ ವಸಂತನಾಯ್ಕ ರಾಜ್ಯದಲ್ಲಿ ಬಿ.ಜೆ.ಪಿ. ಸರ್ಕಾರದ ಅದಕ್ಷತೆ, ರಾಷ್ಟ್ರದಲ್ಲಿ ಮೋದಿ ನೇತೃತ್ವದ ಸರ್ಕಾರದ ಉಡಾಪೆ ಗಳಿಂದ ಜನಸಾಮಾನ್ಯರಿಗೆ ಅನ್ಯಾಯವಾಗುತ್ತಿದೆ. ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಿ.ಜೆ.ಪಿ. ಸರ್ಕಾರ ವಿರೋಧ ಪಕ್ಷಗಳನ್ನು ಧಮನಿಸುತ್ತಿದೆ, ವಿರೋಧ ಪಕ್ಷಗಳ ನಾಯಕರಿಗಿಂತ ಹೆಚ್ಚು ಅಕ್ರಮ ಆಸ್ತಿ ಮಾಡಿರುವ ಯಡಿಯೂರಪ್ಪ, ವಿಜಯೇಂದ್ರ ಯಡಿಯೂರಪ್ಪ, ಸಿ.ಟಿ. ರವಿ ಸೇರಿದ ನಾಯಕರ ಮನೆ ಮೇಲೆ ಆದಾಯ ತೆರಿಗೆ, ಸಿ.ಆಯ್.ಡಿ., ಸಿ.ಬಿ.ಆಯ್. ದಾಳಿ ತನಿಖೆ ಗಳು ನಡೆಯುತ್ತಿಲ್ಲ ಯಾಕೆ? ಸ್ವಾತಂತ್ರ್ಯ ಗಳಿಸಿಕೊಟ್ಟ ಕಾಂಗ್ರೆಸ್ ಮೌನ, ಶಾಂತಿ-ಅಹಿಂಸೆಯಿಂದಲೇ ಬಿ.ಜೆ.ಪಿಯ ದುರಾಡಳಿತ, ಶ್ವೇಚ್ಛಾಚಾರ, ದುರಾಚಾರಗಳನ್ನು ಎದುರಿಸಲಿದೆ ಎಂದರು.




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
