ಬೇನಾಮಿ ಪತ್ರದ ಮೂಲಕ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನಾನಲ್ಲ ಎಂದ ಕೆ.ಜಿ. ನಾಯ್ಕ!

ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸದಾ ಎರಡು ಗುಂಪುಗಳಿರುತ್ತವೆ ಎಂಬುದು ಬಹಿರಂಗ ಗುಟ್ಟು, ಈ ಗುಟ್ಟನ್ನು ಇಂದು ಮತ್ತೆ ಪುನರುಚ್ಛರಿಸಿದವರು
ಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್.
ಇಂದು ನಡೆದ ಪೊಲೀಸ್ ವರಿಷ್ಠಾಧಿಕಾರಿಗಳ ಜನಸಂಪರ್ಕ ಸಭೆಯಲ್ಲಿ ಸೇರಿದ್ದ ಅನೇಕರು ಥರಾವರಿ ದೂರು-ದುಮ್ಮಾನಗಳನ್ನು ಹೇಳಿಕೊಂಡರು. ಹೀಗೆ ದೂರು, ದುಮ್ಮಾನ, ಆರೋಪ ಮಾಡಿದವರಲ್ಲಿ ಕಿ.ಜಿ. ನಾಯ್ಕ ಹಣಜಿಬೈಲ್ ಒಬ್ಬರು.


ಹೀಗೆ ಕೆ.ಜಿ. ನಾಯ್ಕ ಹಣಜಿಬೈಲ್ ಪತ್ರ ಬರೆದವನು ನಾನಲ್ಲ ಎಂದು ಸಮಜಾಯಿಸಿಕೊಡಲು ಒಂದು ಪ್ರಬಲ ಕಾರಣವೇ ಇದೆ. ಸಿದ್ಧಾಪುರದ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿಸಿ, ಅವರ ಮೇಲೇ ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಎರಡ್ಮೂರು ಪತ್ರಗಳು ರವಾನೆಯಾಗಿವೆ, ಹೀಗೆ ಕೇ,ಜಿ,ನಾಯ್ಕರ ಹೆಸರು, ಸಹಿ ದುರುಪಯೋಗಮಾಡಿಕೊಂಡು ಇಂಥ ಪತ್ರ ಬರೆದ ಬೇನಾಮಿ ವ್ಯಕ್ತಿಯಾರೋ ಯಾರಿಗೂ ತಿಳಿದಿಲ್ಲ. ಆದರೆ ಈ ಬೇನಾಮಿ ಪತ್ರದ ಸಾರಾಂಶ ಇಲ್ಲಿಯ ಪೊಲೀಸ್ ಠಾಣೆಯ ಬಣ, ಗುಂಪುಗಾರಿಕೆ ಕುರಿತದ್ದು. ಇಂಥ ಬೇನಾಮಿ ಪತ್ರ ಬರೆಯುವ ಜಾಯಮಾನ ನನ್ನದಲ್ಲ, ಆದರೆ ನನ್ನ ಹೆಸರಿನಲ್ಲಿ ಬೇನಾಮಿ ಪತ್ರ ಬರೆದವರನ್ನು ಪತ್ತೆ ಹಚ್ಚದಿದ್ದರೆನಮಗೇ ಕೆಟ್ಟ ಹೆಸರು ಎಂದು ಕೆ.ಜಿ. ನಾ. ಸ್ಪಷ್ಟನೆನೀಡಿದರು. ಇಂಥ ಬೇನಾಮಿ ಪತ್ರದ ಮೂಲಕ ಕೆ.ಜಿ.ನಾಯ್ಕ ಹೆಸರು ಕೆಡಿಸಿ ಪೊಲೀಸರ ನಡುವೆ ಕಂದಕ ಸೃಷ್ಟಿಸುವ ದುರುದ್ದೇಶ ಹೊಂದಿದವರ್ಯಾರು? ಸಿದ್ಧಾಪುರದಲ್ಲಿ ನಡೆಯುತ್ತಿರುವ ಜಾತಿರಾಜಕೀಯ, ಬಣರಾಜಕೀಯ, ಶೂದ್ರವಿರೋಧಿ ಸಂಘಿದುಷ್ಟತನದ ಪಾಲು ಈ ಬೇನಾಮಿ ಪ್ರಕರಣದ ಹಿಂದಿದೆಯೆ? ಎನ್ನುವ ಪ್ರಶ್ನೆಗಳು ಈಗ ಎದ್ದಿವೆ. ಈ ಬಗ್ಗೆ ವಾಸ್ತವದ ವಿಡಿಯೋ samajamukhi.net ನ samaajamukhi ಯು ಟ್ಯೂಬ್ ಚಾನೆಲ್ ನಲ್ಲಿದೆ.https://www.youtube.com/watch?v=AnyDZWvOb4k&t=119s

(related)ಅಕ್ರಮ ಮದ್ಯ ಮಾರಾಟ ಮತ್ತು ಪ್ರವಾಸಿ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ವಿದ್ಯಮಾನವನ್ನು ನಿಯಂತ್ರಿಸುವುದು ಸೇರಿದಂತೆ ಸೈಬರ್ ಅಪರಾಧ ಮತ್ತು ಇತರ ಅಪರಾಧಗಳನ್ನು ತಡೆಯಲು ಕ್ರಮಕೈಗೊಳ್ಳುವುದಾಗಿ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಸಾದ ದೇವರಾಜ್ ತಿಳಿಸಿದ್ದಾರೆ. ಸಿದ್ಧಾಪುರ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಿದ ನಂತರ ಮಾತನಾಡಿದ ಅವರು ಅಕ್ರಮಮದ್ಯ ಮಾರಾಟ, ಸೈಬರ್ ಕ್ರೈಂ ಸೇರಿದಂತೆ ಕೆಲವು ವಿಚಾರಗಳ ಬಗ್ಗೆ ದೂರು ಬರುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆಯ ಕೆಲಸ ನಡೆಯುತ್ತಿರುತ್ತದೆ ಆದರೆ ಮದ್ಯ ಮಾರಾಟ ಮಾಡುವ ಜನರ ಮೇಲೆ ಕ್ರಮ ಜರುಗಿಸಲು ಸ್ಥಳಿಯ ಸಂಸ್ಥೆಗಳೀಗೆ ಅಧಿಕಾರವಿದೆ ಆ ಅಧಿಕಾರ ಬಳಸಿ ಅಕ್ರಮ ಮದ್ಯ ಮಾರಾಟ ತಡೆಯಬಹುದು ಎಂದರು.


ಸಭೆಯಲ್ಲಿ ತಾಲೂಕಿನ ಅಕ್ರಮಗಳು, ಅವ್ಯವಹಾರಗಳು, ಜನಸಾಮಾನ್ಯರಿಗಾಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲಾಯಿತು. ನಗರದಲ್ಲಿ ರಸ್ತೆ ಮೇಲೆ ವಾಹನ ನಿಲ್ಲಿಸುವುದು, ಮುಖ್ಯರಸ್ತೆಗಳಲ್ಲಿ ತ್ಯಾಜ್ಯ ಎಸೆಯುವುದು, ಅಮಾಯಕರಿಗೆ ಹೆಸರಿಸಿ ತೊಂದರೆ ಕೊಡುವುದು ಸೇರಿದಂತೆ ಕೆಲವು ತೊಂದರೆಗಳ ಬಗ್ಗೆ ಚರ್ಚೆ ನಡೆಯಿತು.https://www.youtube.com/watch?v=AnyDZWvOb4k&t=119s

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *