

ಅಕ್ರಮ ಮದ್ಯ ಮಾರಾಟ ಮತ್ತು ಪ್ರವಾಸಿ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ವಿದ್ಯಮಾನವನ್ನು ನಿಯಂತ್ರಿಸುವುದು ಸೇರಿದಂತೆ ಸೈಬರ್ ಅಪರಾಧ ಮತ್ತು ಇತರ ಅಪರಾಧಗಳನ್ನು ತಡೆಯಲು ಕ್ರಮಕೈಗೊಳ್ಳುವುದಾಗಿ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಸಾದ ದೇವರಾಜ್ ತಿಳಿಸಿದ್ದಾರೆ.
ಸಿದ್ಧಾಪುರ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಿದ ನಂತರ ಮಾತನಾಡಿದ ಅವರು ಅಕ್ರಮಮದ್ಯ ಮಾರಾಟ, ಸೈಬರ್ ಕ್ರೈಂ ಸೇರಿದಂತೆ ಕೆಲವು ವಿಚಾರಗಳ ಬಗ್ಗೆ ದೂರು ಬರುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆಯ ಕೆಲಸ ನಡೆಯುತ್ತಿರುತ್ತದೆ ಆದರೆ ಮದ್ಯ ಮಾರಾಟ ಮಾಡುವ ಜನರ ಮೇಲೆ ಕ್ರಮ ಜರುಗಿಸಲು ಸ್ಥಳಿಯ ಸಂಸ್ಥೆಗಳಿಗೆ ಅಧಿಕಾರವಿದೆ ಆ ಅಧಿಕಾರ ಬಳಸಿ ಅಕ್ರಮ ಮದ್ಯ ಮಾರಾಟ ತಡೆಯಬಹುದು ಎಂದರು.

ಸಭೆಯಲ್ಲಿ ತಾಲೂಕಿನ ಅಕ್ರಮಗಳು, ಅವ್ಯವಹಾರಗಳು, ಜನಸಾಮಾನ್ಯರಿಗಾಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲಾಯಿತು. ನಗರದಲ್ಲಿ ರಸ್ತೆ ಮೇಲೆ ವಾಹನ ನಿಲ್ಲಿಸುವುದು, ಮುಖ್ಯರಸ್ತೆಗಳಲ್ಲಿ ತ್ಯಾಜ್ಯ ಎಸೆಯುವುದು, ಅಮಾಯಕರಿಗೆ ಹೆದರಿಸಿ ತೊಂದರೆ ಕೊಡುವುದು ಸೇರಿದಂತೆ ಕೆಲವು ತೊಂದರೆಗಳ ಬಗ್ಗೆ ಚರ್ಚೆ ನಡೆಯಿತು. ಸೈಬರ್ ಅಪರಾಧದ ಬಗ್ಗೆ ಶೀಘ್ರ ದೂರು ನೀಡುವುದು ತನಿಖೆ ಮತ್ತು ಅಪರಾಧ ನಿಯಂತ್ರಣಕ್ಕೆ ಸಹಾಯಕ ವಾಗುತ್ತದೆ ಎಂದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
