a school teacher,s story-ಮಾರುತಿ ಪ್ರತಾಪ-

https://www.youtube.com/watch?v=TL8xT2FlaMQ&t=240s

ನಾವೆಲ್ಲಾ ಅಪಾರ ಕನಸುಗಳೊಂದಿಗೆ ಕಾಲೇಜು ಸೇರಿ, ಹಾಸ್ಟೇಲ್ ಕೂಡಿಕೊಂಡ ಸಂದರ್ಭವದು. ಒಂದು ರವಿವಾರದ ದಿನ ವಾರದ ಸ್ವಚ್ಛತೆ ನಡೆಯುತಿದ್ದ ಸಂದರ್ಭದಲ್ಲಿ ಒಂದು ಮಾರಾಮಾರಿಯೇ ನಡೆದು ಹೋಯಿತು. ನಮ್ಮ ಸ್ನೇಹಿತ ಅಂದಿನ ಹಿರಿಯ ಸಂಗಾತಿ ರಾಜೇಶ್ ಎನ್ನುವ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಮುಖ ಮೂತಿ ನೋಡದೆ ಇಕ್ಕಿ ಬಿಟ್ಟಿದ್ದ. ಆತ ಭಯದಿಂದ ನಡುಗುತ್ತಾ ಮಾರುತಿಯನ್ನು ಹುಡುಕುತಿದ್ದಾಗ ಮಾರಿತಿ ಥೇಟ್ ಈಗಿನ ದುನಿಯಾ ವಿಜಯ್ ರೀತಿ ಕೆಂಗಣ್ಣಿನಿಂದ ನೋಡುತ್ತಾ ನಾನು ಮಾಡಿದ್ದು ತಪ್ಪಾ? ಎಂದು ಮೌನವಾಗೇ ಪ್ರಶ್ನಿಸುತಿದ್ದ.
ಬಹುಶ: ನಮ್ಮ ಅವಧಿಯಲ್ಲಿ ಹೊಸ ವಿದ್ಯಾರ್ಥಿಯೊಬ್ಬ ಹಿರಿಯ ವಿದ್ಯಾರ್ಥಿಗೆ ಒದೆ ಕೊಟ್ಟದ್ದು ಅದೇ ಮೊದಲು ನಂತರ ಮಾರುತಿ ಮಿ.ಬ್ರೇವ್ ಎನಿಸಿಕೊಂಡ.

ಈ ಪ್ರಕರಣವಾಗಿ ಆರೋ, ಹತ್ತಹನ್ಹೆರಡು ತಿಂಗಳು ಕಳೆದಿರಬೇಕು. ಗ್ಯಾಸ್ ಕಾಲೇಜಿನ ವಾರ್ಷಿಕೋತ್ಸವ, ಯುವಜನೋತ್ಸವ, ಯೂಥ್ ಫೆಸ್ಟಿವಲ್ ಥರದ ಕಾರ್ಯಕ್ರಮ, ನಮ್ಮ ಕ್ರೀಯಾಶೀಲತೆ, ಮನೋರಂಜನಾ ಕಾರ್ಯಕ್ರಮಗಳಿಂದ ಅಸೂಯೆ ಪಟ್ಟಿದ್ದ ಸ್ಥಳಿಯ ವಿದ್ಯಾರ್ಥಿಗಳ ತಂಡ ನಮ್ಮನ್ನು ಹೀಯಾಳಿಸಿ ಅವಮಾನ ಮಾಡಲು ಹವಣಿಸಿತ್ತು. ಇದು ರಗಳೆ, ಗಲಾಟೆಯಾಗಿ ಕೊನೆಗೆ ರಾತ್ರಿ ವೇಳೆ ಆ ಪುಂಡರ ಗುಂಪು ನಮ್ಮ ವಸತಿ ನಿಲಯಕ್ಕೆ ಕುಡಿದು ಬಂದು ಖ್ಯಾತೆ ತೆಗೆದಾಗ ಜಗಳವಾಗಿ ನಮ್ಮ ಸಮಯಪ್ರಜ್ಞೆಯಿಂದಾಗಿ ಆ ಪುಂಡರ ತಂಡ ಪೊಲೀಸ್ ವಶವಾಯಿತು.

ಈ ಜಗಳದ ಅವಧಿಯಲ್ಲಿ ಮಾರುತಿಗೆ ಬಿದ್ದ ಒಂದು ಏಟಿನಿಂದಾಗಿ ಅವನ ಕಿವಿಯ ಪೊರೆ ಹರಿದು ಕಿವಿಗೆ ಹಾನಿಯಾಗಿತ್ತು. ಒಂದು ಕಿವಿಕೇಳದ ಮಾರುತಿಯನ್ನು ನಾನೇ ಶಿರಸಿ ಆಸ್ಫತ್ರೆಗೆ ಒಯ್ದು ನಮ್ಮ ಚಿಕ್ಕಪ್ಪನ ಮನೆಯಲ್ಲಿ ಆಶ್ರಯ ಪಡೆದು ಮಾರುತಿಯ ಬನವಾಸಿಗೆ ಕಳುಹಿಸಿಕೊಟ್ಟಿದ್ದೆ. ಇಲ್ಲೆಲ್ಲೂ ಧೃತಿಗೆಡದ ಮಾರುತಿ ನಂತರ ಟಿ.ಸಿ.ಎಚ್. ಓದಿ ಮತ್ತೆ ಪದವಿಗಾಗಿ ನಮ್ಮ ಹಾಸ್ಟೇಲ್ ಸೇರಿಕೊಂಡಿದ್ದಾಗ ಆತ ನಮ್ಮ ಜೂನಿಯರ್! ಆಗಿದ್ದ ಆದರೆ ಬುದ್ಧನಂತೆ ಉಪದೇಶಿಸುವ ಎಳೆಪ್ರಬುದ್ಧನಾಗಿದ್ದ.

ಇದಕ್ಕಿಂತ ಮೊದಲು ನಿರೀಕ್ಷಿಸಿ ದಷ್ಟು ಪರೀಕ್ಷೆ ಸರಿಯಾಗಿ ಬರೆಯದ ತಪ್ಪಿಗೆ ಶಿಕ್ಷಣವನ್ನೇ ಬಿಡುತ್ತೇನೆಂದು ಪರೀಕ್ಷೆ ಬಿಟ್ಟು ಊರಿಗೆ ಹೋಗುವ ತಯಾರಿಸಿ ನಡೆಸಿದ್ದ, ನಂತರ ಸ್ನೇಹಿತರ ಮಾತಿಗೆ ಬೆಲೆ ಕೊಟ್ಟು ಪರೀಕ್ಷೆ ಬರೆದು ನಮ್ಮ ಕ್ಲಾಸಿಗೆ ಎರಡನೇ ರ್ಯಾಂಕ್ ಬಂದಿದ್ದ, ಆ ನಂತರ ಆತ ಶಿಕ್ಷಕರ ತರಬೇತಿಗೆ ತೆರಳಿದ್ದು.

ಇಂಥ ಮಾರುತಿ ಉತ್ತಮ ಮಾರ್ಗದರ್ಶನ, ಅನುಕೂಲ, ಅವಕಾಶ ದೊರೆತಿದ್ದರೆ ಕೇಂದ್ರ ಲೋಕಸೇವಾ ಆಯೋಗ, ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆ ಬರೆದು ಹಿರಿಯ ಅಧಿಕಾರಿಯಾಗುತಿದ್ದನೇನೋ? ಆದರೆ ಆತ ಅನಿವಾರ್ಯವಾಗಿ ಶಿಕ್ಷಕನಾದ,ಶಿಕ್ಷಣ ಕ್ಷೇತ್ರದಲ್ಲಿ 30-40 ವರ್ಷಗಳ ವರೆಗೆ ಮಾಡುವ ಸೇವೆಯ ಪ್ರಮಾಣದ ಸೇವೆ, ಸಾಧನೆಯನ್ನು ಕಾಲು ಶತಮಾನದಲ್ಲೇ ಮಾಡಿದ. ಈತ ಮಾರುತಿ ಉಪ್ಪಾರ.

ಟೆಂಟ್ ಶಾಲೆ, ಸ್ಕೌಟ್ & ಗೈಡ್ಸ್ ಸೇರಿದಂತೆ ಪ್ರಾಮಾಣಿಕ ಶಿಕ್ಷಕ ಪರಿಶ್ರಮದಿಂದ ಮಾಡುವ ಬದ್ಧತೆಯ ಪ್ರಾಮಾಣಿಕ ಕೆಲಸವನ್ನು ಮಾಡಿರುವ ಮಾರುತಿ ಬನವಾಸಿ ಭಾಗ ಸೇರಿದಂತೆ ತಾಲೂಕು, ಜಿಲ್ಲೆ, ರಾಜ್ಯದಲ್ಲೇ ವಿಭಿನ್ನ ಶಿಕ್ಷಕ ಎನ್ನುವ ಹೆಗ್ಗಳಿಕೆ ಹೋದಿದ್ದಾನೆ. ಈ ಮಾರುತಿ ಉಪ್ಪಾರ ನಮ್ಮ ಸಂದರ್ಶನದಲ್ಲಿ ಮಾತನಾಡಿರುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಕೆಲಸ ಮಾಡಿರುವ ಸಾಧಕ. ಅವನ ಬಗ್ಗೆ ಬರೆದದ್ದೂ ಅವನಿರುವ ಗುಣಮಟ್ಟದ ಪ್ರತಿಶತ10 ಕ್ಕಿಂತ ಕಡಿಮೆ ಅಂಶ,ವಿಚಾರ. ಅವನಿಗೆ ಶುಭ- ಕೋರಿ ಅಭಿನಂದಿಸಲು ಈ ಪುಟ್ಟ ಅನುಭವದ ಬರಹ. -ಕನ್ನೇಶ್.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *