ಮಕ್ಕಳಿಗಾಗಿ ಹೇಳಿ ಮಾಡಿಸಿದಂತಿರುವ ಗುಡುಂಕಲ್ ಜಲಪಾತ

ಕರೋನಾ, ಅಕಾಲಿಕ ಮಳೆಗಳಿಲ್ಲದಿದ್ದರೆ… ಈ ಅವಧಿಯಲ್ಲಿ ಜಲಪಾತ ನೋಡಿ, ದಣಿದು ಬಸವಳಿಯುವುದಿದೆಯಲ್ಲಾ… ಅದರ ಅನುಭವಕ್ಕೆ ಅದೇ ಸಾಟಿ. ನಮ್ಮ ಜಿಲ್ಲೆಯ ಜಲಪಾತಗಳನ್ನು ಅಲೆದು ಅನುಭವ ಪೇರಿಸಿಕೊಂಡ ಹೊರಗಿನವರಿಗೆ ಹೋಲಿಸಿಕೊಂಡರೆ ನಮಗೆ ಈ ಪ್ರಕೃತಿಯ ಸೊಬಗಿನ ಬಗ್ಗೆ ಮರುಕವೋ? ವಿಸ್ಮೃತಿಯೋ ತಿಳಿಯದ ಗೊಂದಲ.

ಮೊನ್ನೆ ಕೃಷಿ ಅಧಿಕಾರಿ ಪ್ರಶಾಂತ್ ಮಾಹಿತಿ ಆಧರಿಸಿ ಹಂದಿಮನೆಯ ಹೊಳೆಯ ಚಿಕ್ಕ ಜಲಪಾತ ನೋಡಿದಾಗ ಅದೇನೋ ಅಲ್ಹಾದ ಉಂಟಾದಂತಾಯಿತು. ಅಲ್ಲಿ ನಮಗೆ ಸಿಕ್ಕ ಸ್ಥಳಿಯರು ಕಾಣಿಸಿದ ಈ ಗುಡುಂಕಲ್ ಜಲಪಾತಕ್ಯಾದಗಿಯಿಂದ ಕುಮಟಾ ಮಾರ್ಗದಲ್ಲಿ 2 ಕಿ.ಮೀ. ನಂತರ ಹಂದಿಮನೆಯ ಹೊಳೆ ಸೃಷ್ಟಿಸಿರುವ ಸೊಬಗು. ರೈತರು ಈ ಹೊಳೆ ಕಟ್ಟಿ ಒಡ್ಡು ಮಾಡುವ ಸಂಕ್ರಾಂತಿಯ ಮೊದಲು ಕುಟುಂಬ ಸಹಿತ ಹೋಗಿ ನೋಡಿಬರಬಹುದಾದ ಹಂದಿಮನೆ, ಗುಡುಂಕಲ್ ಜಲಪಾತದ ವಿಶೇಷವೆಂದರೆ… ಶ್ರಮವೂ ಬೇಡ, ಅಪಾಯವೂ ಇಲ್ಲ. ಇಂಥ ಜಲಪಾತವನ್ನು ಆ ಭಾಗದ ಎಸ್,ಆರ್. ನಾಯ್ಕ, ಕೆ.ಟಿ. ನಾಯ್ಕರಂಥವರು ಸರ್ವ ಋತು ಜಲಪಾತವನ್ನಾಗಿಸಬಹುದಿತ್ತೇನೋ?ಒಂದು ಬ್ಯಾರೇಜ್ ಮಾದರಿಯ ನೀರು ಸಂಗ್ರಹದ ಚಿಕ್ಕ ಆಣೆಕಟ್ಟೆಮಾಡಿ, ಮಳೆಗಾಲದಲ್ಲಿ ನೀರು ಹರಿಯಬಿಟ್ಟು ಮಳೆಯ ನಂತರ ನೀರು ಸಂಗ್ರಹಿಸಿದರೆ ಜಲಪಾತದ ಸೊಬಗು ವೃದ್ಧಿಸುತ್ತದೆ. ಜೊತೆಗೆ ಈ ಭಾಗದ ರೈತರಿಗೆ ಇದರಿಂದ ಅನುಕೂಲಗಳಾಗಬಹುದು.

ಇದು ಒಂದು ಸಲಹೆಯಾದರೆ ಈಗಿರುವ ಸ್ಥಿತಿಯಲ್ಲೇ ಈ ಜಲಪಾತಕ್ಕೆ ಸಣ್ಣ ರಸ್ತೆ, ಒಂದು ನಾಮಫಲಕ ಇಟ್ಟು ಮಕ್ಕಳಿಗೆ ಜಲಪಾತ ಭೇಟಿ, ವೀಕ್ಷಣೆಗೆ ಅನುಕೂಲ ಮಾಡಿಕೊಟ್ಟರೆ ಮಕ್ಕಳು ಖುಷಿಪಡುತ್ತಾರೆ. ಈ ಬಗ್ಗೆ ನಮ್ಮ ವಿಡಿಯೋದಲ್ಲಿ ವಿವರಿಸಿದ್ದೇನೆ. ಇದೇ ಪಂಚಾಯತ್ ನ ಬುರುಡೆ ಜಲಪಾತದ ತಲೆ-ಬುಡ, ಬುರುಡೆ ಕಾಣದಂತೆ ಪ್ರವಾಸೋದ್ಯಮ ಇಲಾಖೆ ಬುರುಡೆ ಜಲಪಾತದ ಮುಖ ಕಟ್ಟಿದೆ. ಈ ಜಲಪಾತದಲ್ಲಿ ಸಾವು-ನೋವುಗಳಾಗದಂತೆ ತಡೆಯಲು ಅವಶ್ಯ ಕೆಲಸ ಮಾಡುವುದನ್ನು ಬಿಟ್ಟು ಅಪೂರ್ಣ ಮೆಟ್ಟಿಲು ಮಾಡಿ ವೀಕ್ಷಣೆಗೆ ನಿರ್ಬಂಧ ಹೇರಿರುವ ಜಲಪಾತವನ್ನು ನೋಡಲು ಬರುವವರಿಗೆ ನಿರಾಸೆಯಾಗುವಂತೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದು ನಮ್ಮ ನಾಡಿನ ಸೊಬಗನ್ನು ಹೊರಗಿನವರಿಗೆ ಪರಿಚಯಿಸಲು ಶ್ರಮಿಸಬೇಕಾದ ಜನಪ್ರತಿನಿಧಿಗಳು ಈ ಬಗ್ಗೆ ಉಪೇಕ್ಷೆ ಮಾಡುತ್ತಿರುವ ಬಗ್ಗೆ ಪ್ರವಾಸಿಗರೊಂದಿಗೆ ಸ್ಥಳಿಯರೂ ಬೇಸರಿಸಿದರು. ಸಿದ್ಧಾಪುರ, ಉತ್ತರ ಕನ್ನಡದ ಕಾಡು-ಜಲ ಗಳ ಸೊಬಗನ್ನು ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಪಡಿಸಬೇಕಾದ ನಾಯಕತ್ವ ಈ ಜಿಲ್ಲೆಗೆ ಶಾಪ ಎಂದೆನಿಸದೇ ಇರಲಿಲ್ಲ. ಈ ಗುಡುಂಕಲ್ ಮಕ್ಕಳ ಜಲಪಾತ, ಚಾರಿತ್ರಿಕ,ಪರಿಸರ ಮಹತ್ವದ ವಿಶ್ವವಿಖ್ಯಾತ ಬುರುಡೆ ಜಲಪಾತ ಸ್ಥಳಿಯರೊಂದಿಗೆ,ಪ್ರವಾಸಿಗರಿಗೂ ಹತ್ತಿರವಾಗಬೇಕಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *