ಕರೋನಾ ಕ್ಕೆ ಬಲಿಯಾದ ‘ವಿದ್ಯಾಗಮ’ ಶಿಕ್ಷಕಿ

ಮೂಡಬಿದಿರೆ: ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಕೊರೋನಾಗೆ ಬಲಿ

ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುವಾಗ ಕೊರೋನಾವೈರಸ್ ಸೋಂಕಿಗೆ ತುತ್ತಾದ ಶಿಕ್ಷಕಿ ಪದ್ಮಾಕ್ಷಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೂಡಬಿದಿರೆ: ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುವಾಗ ಕೊರೋನಾವೈರಸ್ ಸೋಂಕಿಗೆ ತುತ್ತಾದ ಶಿಕ್ಷಕಿ ಪದ್ಮಾಕ್ಷಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿ ಯಾಗಿದ್ದ ಪದ್ಮಾಕ್ಷಿ ಎನ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ‘ವಿದ್ಯಾಗಮ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು.  ಅಂತಹ ಭೇಟಿಗಳ ಸಮಯದಲ್ಲಿ ಶಿಕ್ಷಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು.

ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ಪದ್ಮಾಕ್ಷಿಯವರ ಪತಿಗೆ ಸಹ ಕೊರೋನಾ ಸೋಂಕು ತಗುಲಿದೆ.  ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಆದರೆ ಚಿಕಿತ್ಸೆಯಿಂದ ಅವರೀಗ ಚೇತರಿಸಿಕೊಂಡಿದ್ದಾರೆ. 

ಇದೇ ವೇಳೆ ಪದ್ಮಾಕ್ಷಿ ಅವರ ಪುತ್ರಿ ಐಶ್ವರ್ಯಾ ತಮ್ಮ ಕುಟುಂಬಕ್ಕೆ ನೆರವಾಗುವಂತೆ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರು, ಸಂಸದರು ಮುಂತಾದವರಲ್ಲಿ  ನೆರವನ್ನು ಯಾಚಿಸಿದ್ದರು. ಆ ಮನವಿಗೆ ಸ್ಪಂದಿಸಿದ್ದ ಸರ್ಕಾರ ಶಿಕ್ಷಕಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿತ್ತು. ಆದರೂ ಜೀವ ಉಳಿಸಲಾಗಲಿಲ್ಲ.

ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು “ಮೂಡಬಿದರೆಯ ಶಿಕ್ಷಕಿ ಶ್ರೀಮತಿ‌ ಪದ್ಮಾಕ್ಷಿ ಅವರು ಮೃತ ಪಟ್ಟರೆಂದು  ತಿಳಿದು ತುಂಬಾ ವೇದನೆಯೆನಿಸಿದೆ. ಅವರ ಕುಟುಂಬಕ್ಕೆ ಈ ದುಃಖ ಭರಿಸಲು‌ ಶಕ್ತಿ‌ ಸಿಗಲಿ. ಐಶ್ವರ್ಯ ಜೈನ್ ತನ್ನ ತಾಯಿ ಮನೆಗೆ ಹಿಂತಿರುಗಿ‌‌ ಎಲ್ಲರಂತಾಗುತ್ತಾರೆಂಬ ಕನಸನ್ನು ಹೊತ್ತಿದ್ದಳು. ಈ ಆಘಾತದಿಂದ‌ ಆಕೆ‌ ಚೇತರಿಸಿಕೊಳ್ಳುವಂತಾಗಲಿ.” ಎಂದಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *