

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ
ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ ಮಹಡಿ ಮೇಲೆ ಅಡಗಿ ಕುಳಿತಿದ್ದ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.


ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯಿಂದ ಪ್ರಿಯಕರನ ಹತ್ಯೆ,ಪತ್ನಿಯ ಅಕ್ರಮ ಸಂಬಂಧವನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ, ಮನೆಯ ಮಹಡಿ ಮೇಲೆ ಅಡಗಿ ಕುಳಿತಿದ್ದ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.
ಮಂಡ್ಯ ಮೂಲದ ಸುರೇಶ್(34) ಕೊಲೆಗೈದ ವ್ಯಕ್ತಿ. ಹತ್ಯೆ ಆರೋಪಿ ತಲಘಟ್ಟ ಪುರ ದೇವೇಂದ್ರಪ್ಪ ಲೇಔಟ್ ನ ನಿವಾಸಿ ಮಲ್ಲಪ್ಪ(32) ನನ್ನು ಬಂಧಿಸಿದ್ದಾರೆ.
ಘಟನೆಯ ಹಿನ್ನೆಲೆ:
ಕಲಬುರಗಿ ಮೂಲದ ಅರೋಪಿ ಮಲ್ಲಪ್ಪ 11 ವರ್ಷಗಳ ಹಿಂದೆ ಮದುವೆಯಾಗಿದ್ದು ಪತ್ನಿ, ಮೂವರು ಮಕ್ಕಳೊಂದಿಗೆ ಬೆಂಗಳೂರಿನ ದೇವೇಂದ್ರಪ್ಪ ಲೇಔಟ್ ನಲ್ಲಿ ವಾಸವಾಗಿದ್ದ. ನಗರದ ಜೆ.ಪಿ. ನಗರದ ಸಿಮೆಂಟ್ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರೆ, ಆತನ ಪತ್ನಿ ಮನೆ ಕೆಲಸಕ್ಕೆ ಹೋಗುತ್ತಿದ್ದರು. (kpc)
ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಬಿಸಾಡಿ ಹೋದ ಪತಿ!
ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ನಡೆದಿದೆ.

ಹೈದರಾಬಾದ್: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ನಡೆದಿದೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅನಂತಸಾಗರ್ ಗ್ರಾಮದಲ್ಲಿ ವಾಸವಿದ್ದ ಜುರ್ರು ಸಾಹಿಲು ಎಂಬ ವ್ಯಕ್ತಿ ತನ್ನ ಪತ್ನಿ 35 ವರ್ಷದ ಅಂಶಮ್ಮ ಎಂಬಾಕೆಯ ರುಂಡವನ್ನು ಕತ್ತರಿಸಿದ್ದಾರೆ.
ನಂತರ ಆ ರುಂಡವನ್ನು ಬೈಕ್ ನಲ್ಲಿ ಐದು ಕಿ.ಮೀ ದೂರದಲ್ಲಿರುವ ನಾರಾಯಣ್ ಖೇಡ್ ಗ್ರಾಮದಲ್ಲಿ ಅಂಶಮ್ಮ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಮನೆಯ ಬಾಗಿಲ ಮುಂದೆ ಇಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜರ್ರು ಸಾಹಿಲುಗೆ ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನವಿತ್ತು. ಈ ಸಂಬಂಧ ಗಂಡ-ಹೆಂಡತಿಯ ನಡುವೆ ಪ್ರತಿನಿತ್ಯ ಜಗಳವಾಗುತ್ತಿತ್ತು. ಕಳೆದ ಬುಧವಾರ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ದೊಡ್ಡ ಜಗಳವಾಗಿದೆ. ನಂತರ ಕೋಪಗೊಂಡ ಜುರ್ರು ಕೊಡಲಿಯಿಂದ ಪತ್ನಿಯ ಕತ್ತನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
