ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ಸೂಪ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಸಾವು!

ದುರಂತ: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. 

For representation purpose only

ಬೀಜಿಂಗ್: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. 

ಬೀಜಿಂಗ್ ನ ಜಿಕ್ಸಿ ನಗರದಲ್ಲಿ ಈ ಘಟನೆ ನಡೆದಿದ್ದು ಕಳೆದ ಒಂದು ವರ್ಷದಿಂದ ಫ್ರೀಜರ್‌ನಲ್ಲಿ ಇಟ್ಟಿದ್ದ ನೂಡಲ್ಸ್ ಸೂಪ್ ಅನ್ನು ಸೇವಿಸಿದ್ದಾರೆ. ಫುಡ್ ಪಾಯ್ಸನ್ ಆಗಿ ಇಬ್ಬರು ಮಕ್ಕಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. 

ಒಂದು ವರ್ಷದಿಂದ ಶೇಖರಿಸಿದ್ದರಿಂದ ಸೂಪ್ ಬಾಂಗ್ ಕ್ರೆಕ್ ಆ್ಯಸಿಡ್ ಪಾಯ್ಸನಿಂಗ್ ಆಗಿದೆ. ಇದನ್ನು ತಿಳಿಯದ ಕುಟುಂಬ ಸೂಪ್ ಸೇವಿಸಿದ್ದಾರೆ. ಹೀಗಾಗಿ ಅವರ ಸಾವಿಗೆ ಕಾರಣವಾಗಿದೆ ಎಂದು ಹೀಲೋಂಗ್ ಜಾಂಗ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಷನ್ ನ ಆಹಾರ ಸುರಕ್ಷತೆ ನಿರ್ದೇಶಕ ಗಾವೋ ಫೀ ತಿಳಿಸಿದ್ದಾರೆ. 

ಈ ನೂಡಲ್ಸ್ ಕಳಿತ ಜೋಳದ ಹಿಟ್ಟಿನಿಂದ ತಯಾರಿಸಲಾಗಿದೆ. ಇದು ಚೀನಾದ ಸ್ಥಳೀಯ ಅಡುಗೆಯಾಗಿದೆ. ಇದನ್ನು ಸೌನ್ ಟಂಗ್ಜಿ ಅಂತ ಕರೆಯಲಾಗುತ್ತದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *