

ಮೇಕೆಮರಿ ರಕ್ಷಿಸಿದ ನಾಟಕ: ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಪಿಎಸ್ಐ, ವಿಡಿಯೋ ವೈರಲ್!
ಈ ಹಿಂದೆ ಕೊರೊನಾ ಭೀತಿ ಸಂದರ್ಭದಲ್ಲೂ ತಮ್ಮ ಬೆಂಬಲಿಗರಿಂದ ಹಾಲಿನ ಅಭಿಷೇಕ ಮಾಡಿಸಿಕೊಂಡು ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಇಲಾಖೆಯ ಕಂಗಣ್ಣಿಗೆ ಗುರಿಯಾಗಿದ್ದ ಜಿಲ್ಲೆಯ ಪಿಎಸ್ಐ ಇದೀಗ ಜಿಲ್ಲಾ ಪೊಲೀಸ್ ಇಲಾಖೆ ತಲೆತಗ್ಗಿಸುವಂತಹ ಕೆಲಸ ಮಾಡಿದ್ದಾರೆ. ಇಂಥ ಅನೇಕ ಹುಚ್ಚಾಟಗಳ ಹಿನ್ನೆಲೆಯಲ್ಲಿ ಈ ಪಿ.ಎಸ್.ಐ. ಇಂದು ಅಮಾನತ್ತಾಗಿದ್ದಾರೆ.


ಕಲಬುರಗಿ: ಈ ಹಿಂದೆ ಕೊರೊನಾ ಭೀತಿ ಸಂದರ್ಭದಲ್ಲೂ ತಮ್ಮ ಬೆಂಬಲಿಗರಿಂದ ಹಾಲಿನ ಅಭಿಷೇಕ ಮಾಡಿಸಿಕೊಂಡು ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಇಲಾಖೆಯ ಕಂಗಣ್ಣಿಗೆ ಗುರಿಯಾಗಿದ್ದ ಜಿಲ್ಲೆಯ ಪಿಎಸ್ಐ ಇದೀಗ ಜಿಲ್ಲಾ ಪೊಲೀಸ್ ಇಲಾಖೆ ತಲೆತಗ್ಗಿಸುವಂತಹ ಕೆಲಸ ಮಾಡಿದ್ದಾರೆ.
ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಠಾಣೆಯ ಪಿಎಸ್ಐ ಮಲ್ಲಣ್ಣ ಯಲಗೋಡ ಅವರು ಮೇಕೆಮರಿ ರಕ್ಷಿಸುವಂತೆ ನಾಟಕವಾಡಿ ಜಿಲ್ಲಾ ಪೊಲೀಸ್ ಇಲಾಖೆ ಮುಜುಗರಪಡುವಂತೆ ಮಾಡಿದ್ದಾರೆ. ಪಿಎಸ್ಐ ಮಲ್ಲಣ್ಣ ಯಲಗೋಡ ಬೇರೆ ಕಡೆಯಿಂದ ಕುರಿ ಮರಿಗಳನ್ನು ತರಿಸಿ ಅವುಗಳನ್ನು ಎತ್ತಿ ಹಿಡಿದು, ಇವು ಭೀಮಾ ನದಿ ಪ್ರವಾಹದಲ್ಲಿ ಸಿಲುಕಿದ್ದವು. ಇವುಗಳನ್ನು ತಾನೇ ರಕ್ಷಿಸಿರುವುದಾಗಿ ಗ್ರಾಮಸ್ಥರಿಂದ ಹೇಳಿಸಿ ವಿಡಿಯೋವನ್ನು ಮಾಡಿಸಿದ್ದರು.

ಕೂಡಲಗಿ ಗ್ರಾಮ ಪ್ರವಾಹಕ್ಕೆ ಜಲಾವೃತವಾಗಿದ್ದು ನೀರಿನಲ್ಲಿ ನಾಲ್ವರು ಯುವಕರ ಸಹಾಯದಿಂದ ಥರ್ಮಾಕೋಲ್ ಮೇಲೆ ಪಿಎಸ್ಐ ನಿಂತಿದ್ದಾರೆ. ಕಡಿಮೆ ನೀರಿದ್ದ ಜಾಗದಲ್ಲಿ ಯುವಕರಿಂದ ಥರ್ಮಾಕೋಲ್ ತಳ್ಳಿಸಿಕೊಂಡು ತಾನು ಹೀರೋ ತರಹ ಪೋಸ್ ಕೊಟ್ಟಿದ್ದಾರೆ. ನಂತರ ಸೊಂಟದವರೆಗೆ ನೀರಿರುವಲ್ಲಿಗೆ ಹೋಗಿ ಕುರಿ ಮರಿ ರಕ್ಷಣೆ ಮಾಡಿರುವ ರೀತಿ ಪೋಸ್ ನೀಡಿದ್ದಾರೆ.

ಇದೇ ಅಲ್ಲದೆ ತಮ್ಮ ಹುಟ್ಟುಹಬ್ಬದಂದು ಮಲ್ಲಣ್ಣ ಹಾಲಿನಲ್ಲಿ ಅಭಿಶೇಕ ಮಾಡಿಸಿಕೊಂಡು ಟೀಕೆಗೆ ಗುರಿಯಾಗಿದ್ದರು. (kpc)

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
